ಪ್ರೀ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ ಭಾರತದ ಮಣಿಕಾ ಬಾತ್ರಾ; ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿ

Date:

Advertisements

ಪ್ಯಾರಿಸ್ ಒಲಿಂಪಿಕ್ಸ್‌ 2024ರ ಟೇಬಲ್‌ ಟೆನಿಸ್‌ ಪಂದ್ಯಾವಳಿಯಲ್ಲಿ ಪ್ರೀ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದ ಭಾರತದ ಟೆಬಲ್‌ ಟೆನಿಸ್‌ ಆಟಗಾರ್ತಿ 29 ವರ್ಷದ ಮಣಿಕಾ ಬಾತ್ರಾ ಒಲಿಂಪಿಕ್ಸ್‌ನಲ್ಲಿ ಭಾರತದ ಪರವಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಮಣಿಕಾ ಬಾತ್ರಾ ಅವರು 37 ನಿಮಿಷಗಳಲ್ಲಿ ಫ್ರಾನ್ಸ್‌ನ ಎದುರಾಳಿ ಪ್ರಿತಿಕಾ ಪವಾಡೆ ಅವರನ್ನು 11-9, 11-6, 11-9, 11-7 ಅಂತರದಲ್ಲಿ ಪರಾಭವಗೊಳಿಸಿದರು.

ಮಣಿಕಾ ಬಾತ್ರಾ ತನ್ನ ಮುಂದಿನ ಪಂದ್ಯದಲ್ಲಿ ಹಾಂಕಾಂಗ್‌ನ ಝು ಚೆಂಗ್ಜು ಮತ್ತು ಜಪಾನ್‌ನ ಮಿಯು ಹಿರಾನೊ ಸ್ಪರ್ಧಿಗಳನ್ನು ಎದುರಿಸಲಿದ್ದಾರೆ. ಮಣಿಕಾ ಬಾತ್ರಾ ಅವರು ಒಲಿಂಪಿಕ್ಸ್‌ನಲ್ಲಿ ಟೇಬಲ್ ಟೆನಿಸ್ ಸ್ಪರ್ಧೆಯ ಪ್ರೀ ಕ್ವಾರ್ಟರ್‌ಫೈನಲ್‌ಗೆ ತಲುಪಿದ ಮೊದಲ ಭಾರತೀಯ ಕ್ರೀಡಾಪಟುವಾಗುವ (ಪುರುಷ ಅಥವಾ ಮಹಿಳೆ) ಮೂಲಕ ಇತಿಹಾಸ ಬರೆದಿದ್ದಾರೆ.

Advertisements

ಪಂದ್ಯದ ಎರಡನೇ ಆಟ ನಿಕಟ ಸ್ಪರ್ಧೆಯಿದ್ದರೂ ಬಾತ್ರಾ ಅವರು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಾಬಲ್ಯ ಸಾಧಿಸಿದರು ನಾಲ್ಕು ಗೇಮ್‌ಗಳಲ್ಲಿಯೂ ಮುನ್ನಡೆ ಸಾಧಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಬರ, ಈಗ ನೆರೆ- ಸಂತ್ರಸ್ತರತ್ತ ಧಾವಿಸಲಿ ಸರ್ಕಾರ

ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳನ್ನು ಗೆದ್ದಿರುವ ಮಣಿಕಾ ಬಾತ್ರಾ, ಫ್ರಾನ್ಸ್ ಎದುರಾಳಿ ಪ್ರಿತಿಕಾ ಪವಾಡೆ ಅವರಿಗೆ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಿಡಲಿಲ್ಲ ಪ್ರತಿ ಗೇಮ್‌ನಲ್ಲಿ ಉತ್ತಮವಾಗಿ ಆಟವಾಡಿ ಅಂತಿಮವಾಗಿ ಗೆಲುವನ್ನು ತಮ್ಮದಾಗಿಸಿಕೊಂಡರು.

ಮಣಿಕಾ ಬಾತ್ರಾ ವಿರುದ್ಧ ಸ್ಪರ್ಧೆಯಲ್ಲಿ ಸೋತ ಫ್ರಾನ್ಸ್‌ನ ಎಡಗೈ ಆಟಗಾರ್ತಿ 19 ವರ್ಷದ ಪ್ರಿತಿಕಾ ಪವಾಡೆ ಮೂಲತಃ ಭಾರತದ ಪಾಂಡಿಚರಿ ಮೂಲದವರು. ಇವರ ಪೋಷಕರು 2003ರಲ್ಲಿ ಉದ್ಯೋಗದ ನಿಮಿತ್ತ ಫ್ರಾನ್ಸ್‌ಗೆ ತೆರಳಿದ್ದರು. ಪ್ಯಾರಿಸ್‌ನಲ್ಲಿ ಜನಿಸಿದ ಪ್ರಿತಿಕಾ ಟೇಬಲ್‌ ಟೆನಿಸ್‌ನಲ್ಲಿ ಆಸಕ್ತಿ ಬೆಳಸಿಕೊಂಡು ಕಳೆದ 2 ಒಲಿಂಪಿಕ್ಸ್‌ಗಳಿಂದ ಫ್ರಾನ್ಸ್‌ ಪರವಾಗಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ.

ಮಣಿಕಾ ಬಾತ್ರಾ ಆಟದ ನಂತರ, ಭಾರತದ ಅಗ್ರ ಶ್ರೇಯಾಂಕದ ಟೇಬಲ್‌ ಟೆನಿಸ್ ಆಟಗಾರ್ತಿ ಶ್ರೀಜಾ ಅಕುಲಾ ಅವರು ಬುಧವಾರ(ಜುಲೈ 31) ಸಿಂಗಾಪುರದ ಜೆಂಗ್‌ ಜಿಯಾನ್ ವಿರುದ್ಧ ಪ್ರೀ ಕ್ವಾರ್ಟರ್‌ಫೈನಲ್‌ ಪಂದ್ಯವನ್ನಾಡಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X