ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

Date:

Advertisements

ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಘಟಪ್ರಭಾ ನದಿಯಿಂದ ಪ್ರವಾಹ ಉಂಟಾಗಿದ್ದು, ವಿವಿಧ ಗ್ರಾಮಗಳಿಗೆ ಕೃಷ್ಣ ಬೈರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತರ ಅಳಲು ಆಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಅನಗತ್ಯವಾಗಿ ಯಾರೂ ನದಿಗೆ ಇಳಿಯಬಾರದು’ ಎಂದು ಮನವಿ ಮಾಡಿದ್ದಾರೆ.

“ಮೀನು ಹಿಡಿಯಲು, ಕೃಷಿ ಚಟುವಟಿಕೆ, ಸೆಲ್ಫಿಗಾಗಿ ಯಾರೂ ನದಿ ಅಥವಾ ಹೊಳೆಗೆ ಇಳಿಯಬಾರದು. ಒಂದು ವೇಳೆ ಒಳ್ಳೆ ಮಾತಿಗೆ ಗೌರವ ಕೊಡದೆ ನದಿಗೆ ಇಳಿದವರಿಗೆ ಲಾಠಿ ಏಟು ನಿಶ್ಚಿತ. ನಮ್ಮ ರಾಜ್ಯದಲ್ಲಿ ಪ್ರಾಣಹಾನಿಯಾಗಲು ನಾವು ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

Advertisements

“ನಮ್ಮ ಪುಣ್ಯ ಎರಡು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. 2019-20ರಲ್ಲಿ 272 ಮಂದಿ ಮಳೆಯ ಅಬ್ಬರದಿಂದ ಸಾವನ್ನಪ್ಪಿದ್ದರು. 2022 ರಲ್ಲಿ 249 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ವರ್ಷ 243 ಸಾವುಗಳು ಸಂಭವಿಸಿವೆ. ಈ ಬಾರಿ, ಮಳೆಗೆ ಹೆಚ್ಚಿನ ಪ್ರಾಣಹಾನಿಯಾಗದಂತೆ ತಡೆಯಬೇಕು. ಅದಕ್ಕಾಗಿ, ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾಗಿದೆ” ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X