ರಾಯಚೂರು | ಲೈಂಗಿಕ ಅಲ್ಪಸಂಖ್ಯಾತರ ಭಿಕ್ಷಾಟನೆಗೆ ಅಧಿಕಾರಿಗಳು ಅಡ್ಡಿ; ಆರೋಪ

Date:

Advertisements

ಜಿಲ್ಲೆಯಲ್ಲಿ ಭಿಕ್ಷಾಟನೆಗೆ ತೊಡಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಕೆಲ ಅಧಿಕಾರಿಗಳು ಕಿರುಕುಳ ನೀಡಿ ಅಡ್ಡಿಪಡಿಸುತ್ತಿರುವುದನ್ನು ತಡೆಯಬೇಕು ಎಂದು ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತೆಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ʼಲೈಂಗಿಕ ಅಲ್ಪಸಂಖ್ಯಾತರು ಜೀವನೋಪಾಯಕ್ಕೆ ಮುಖ್ಯ ರಸ್ತೆಗಳಲ್ಲಿ ಭಿಕ್ಷಾಟನೆ ನಡೆಸುತ್ತಿದ್ದೇವೆ. ಆದರೆ ಕೆಲ ಇಲಾಖೆ ಅಧಿಕಾರಿಗಳು ನಮ್ಮನ್ನು ಬಂಧಿಸಲು ಮುಂದಾಗುತ್ತಿದ್ದಾರೆʼ ಎಂದು ಆರೋಪಿಸಿದರು .

ʼನಮ್ಮ ಸಮುದಾಯಕ್ಕೆ ಭಿಕ್ಷಾಟನೆ ಕಾಲ ಕಾಲಂತರದಿಂದ ಬಂದಿದ್ದು, ವಿವಿಧ ವಲಯಗಳಲ್ಲಿ ಕೇಳಿ ಪಡೆಯುವುದು ನಿರಂತರವಾಗಿ ನಡೆಯುತ್ತಿದೆ. ಭಿಕ್ಷಾಟನೆ ಅಪರಾಧ ಎಂದಾದರೆ ದೇವಸ್ಥಾನಗಳಲ್ಲಿ ಭಕ್ತರಿಂದ, ಸಮಾಜ ಸೇವಾ ಸಂಸ್ಥೆಗಳು, ಸಾರ್ವಜನಿಕರು ದೇಣಿಗೆ ಪಡೆಯುವುದು ಭಿಕ್ಷಾಟನೆ ಅಲ್ಲವೇ ಎಂದು ಪ್ರಶ್ನಿಸಿದರು. ದಾನ ಧಾರ್ಮಿಕ ಕರ್ತವ್ಯವೆಂದರೆ ಕೂಡಲೇ ಭಿಕ್ಷಾಟನೆಯನ್ನು ನಿರಪರಾಧಿಕರಣಗೊಳಿಸಬೇಕುʼ ಎಂದು ಆಗ್ರಹಿಸಿದರು .

Advertisements

ಕೂಡಲೇ ಜಿಲ್ಲಾಡಳಿತ ಭಿಕ್ಷಾಟನೆಯಲ್ಲಿ ತೊಡಗಿರುವ ಲೈಂಗಿಕ ಅಲ್ಪಸಂಖ್ಯಾತ ಸಮುದಾಯಗಳಿಗೆ ಅಧಿಕಾರಿಗಳು ಕಿರುಕುಳ ನೀಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿರವಾರ ತಹಶೀಲ್ದಾರ್ ಕಚೇರಿಗೆ ತಾಡಪತ್ರಿ ಮೇಲ್ಛಾವಣಿ

ಈ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆಯರು, ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X