ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹23 ಲಕ್ಷ ಕಳೆದುಕೊಂಡ ಎಂಜಿನಿಯರ್ ಶ್ರೀಕಾಂತ್

Date:

Advertisements

ಉದ್ಯೋಗದ ಆಮಿಷವೊಡ್ಡಿ ಎಂಜಿನಿಯರ್ ಒಬ್ಬರಿಗೆ ₹23 ಲಕ್ಷ ಆನ್‌ಲೈನ್‌ ವಂಚನೆಯಾಗಿದ್ದು, ಈ ಕುರಿತು ಚಿಕ್ಕಬಳ್ಳಾಪುರ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ನಿವಾಸಿ ಶ್ರೀಕಾಂತ್ ಹಣ ಕಳೆದುಕೊಂಡವರು. ಶ್ರೀಕಾಂತ್‌ಗೆ ಟೆಲಿಗ್ರಾಂನಲ್ಲಿ ಜಾಬ್ ಆಫರ್ ಎಂಬ ಸಂದೇಶ ಬಂದಿತ್ತು. ಸಂದೇಶದಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದ ನಂತರ CARS 24 ಎಂಬ ಗ್ರೂಪ್‌ಗೆ ಸೇರಿಸಿದ್ದರು. ಆನಂತರ ಉದ್ಯೋಗ ಆರಂಭ ಮಾಡಲು ಮೊದಲಿಗೆ ₹10,000 ಡೆಪಾಸಿಟ್ ಮಾಡುವಂತೆ ವಂಚಕರು ತಿಳಿಸಿದ್ದರು ಎನ್ನಲಾಗಿದೆ.

ಡೆಪಾಸಿಟ್ ಮಾಡಿದ ಬಳಿಕ ಕೆಲ ಟಾಸ್ಕ್ ಕೊಡಲಾಗಿತ್ತು. ಟಾಸ್ಕ್ ಮುಗಿಸಿದ ಬಳಿಕ ಶ್ರೀಕಾಂತ್ ಖಾತೆಗೆ ₹16,500 ಹಣ ಬಂದಿತ್ತು. ಇದನ್ನು ನಂಬಿದ್ದ ಶ್ರೀಕಾಂತ್ ಹಂತ ಹಂತವಾಗಿ ಸುಮಾರು ₹23 ಲಕ್ಷ ಹಣವನ್ನು ಜಮೆ ಮಾಡಿದ್ದರೆಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ರೈತ ಹೋರಾಟಕ್ಕೆ ಯಾವುದೇ ಪಕ್ಷ ತಲೆಬಾಗಲೇಬೇಕು: ಶಾಸಕ ಎಂ ಆರ್ ಪಾಟೀಲ್

ಬಳಿಕ ಮತ್ತೆ ₹13 ಲಕ್ಷ ಹಣವನ್ನು ಡೆಪಾಸಿಟ್ ಮಾಡಿದರೆ ಮಾತ್ರ ನಿಮಗೆ ಹಣವನ್ನು ಹಾಕಲಾಗುತ್ತದೆ ಎಂದು ತಿಳಿಸಿದ್ದರು. ಇದರಿಂದ ಎಚ್ಚೆತ್ತ ಶ್ರೀಕಾಂತ್ ತಾವು ಮೋಸ ಹೋಗಿರುವುದನ್ನು ಮನಗಂಡು ಸೆನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X