ಚಹಾ, ಬಿಸ್ಕತ್ತುಗಳೊಂದಿಗೆ ಕಾಯುತ್ತಿದ್ದೇನೆ; ಇ.ಡಿ ಬಂಧನದ ಬಗ್ಗೆ ರಾಹುಲ್ ಗಾಂಧಿ ಸುಳಿವು

Date:

Advertisements

ನನ್ನನ್ನು ಬಂಧಿಸಲು ಬರುವ ಇ.ಡಿ ಅಧಿಕಾರಿಗಳಿಗೆ ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಸ್ವಾಗತಿಸಲು ಕಾಯುತ್ತಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಇ.ಡಿ(ಜಾರಿ ನಿರ್ದೇಶನಾಲಯ) ದಾಳಿ ನಡೆಸಲು ಯೋಜನೆ ರೂಪಿಸಿದೆ. ಸ್ಪಷ್ಟವಾಗಿ ಹೇಳುತ್ತೇನೆ, ಇಬ್ಬರಲ್ಲಿ ಒಬ್ಬರಿಗೆ ನನ್ನ ಚಕ್ರವ್ಯೂಹದ ಭಾಷಣ ಇಷ್ಟವಾಗಿಲ್ಲ. ನನ್ನ ವಿರುದ್ಧ ಇ.ಡಿ ದಾಳಿ ನಡೆಸಲು ಯೋಜಿಸಲಾಗುತ್ತಿದೆ ಎಂದು ಇಡಿ ಒಳಗಿನವರೇ ನನಗೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು ‘ಚಕ್ರವ್ಯೂಹ’ ನಿರ್ಮಿಸಿದ ಹಾಗೆ ಬಿಜೆಪಿಯು ದೇಶದಲ್ಲಿ ರೈತರು ಮತ್ತು ಯುವಕರ ಸುತ್ತ ‘ಚಕ್ರವ್ಯೂಹ’ ಹೆಣೆದು, ಭಯದ ವಾತಾವರಣ ನಿರ್ಮಿಸಿದೆ ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಯನಾಡಿಗಾದದ್ದು ನಮ್ಮಲ್ಲೂ ಆಗಬಹುದಲ್ಲವೇ?

ಲೋಕಸಭೆಯಲ್ಲಿ ಸೋಮವಾರ(ಜುಲೈ 29) ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದ ಅವರು, ‘ರೈತರು, ಕಾರ್ಮಿಕರು ಮಾತ್ರವಲ್ಲದೆ ಬಿಜೆಪಿಯ ಸಂಸದರು ಕೂಡಾ ಈ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ’ ಎಂದಿದ್ದರು.

ಮಹಾಭಾರತದ ಸಂದರ್ಭವನ್ನು ಉಲ್ಲೇಖಿಸುತ್ತಾ ರಾಹುಲ್ ಅವರು, ‘ಸಾವಿರಾರು ವರ್ಷಗಳ ಹಿಂದೆ ಹರಿಯಾಣದ ಕುರುಕ್ಷೇತ್ರದಲ್ಲಿ ಕೌರವರು ‘ಚಕ್ರವ್ಯೂಹ‘ ನಿರ್ಮಿಸಿ ಅಭಿಮನ್ಯುವನ್ನು ಕೊಂದರು. ‘ಚಕ್ರವ್ಯೂಹ’ವನ್ನು ‘ಪದ್ಮವ್ಯೂಹ’ ಎಂದೂ ಕರೆಯುತ್ತಾರೆ. ಅದು ಕಮಲದಂತೆ (ಬಿಜೆಪಿಯ ಚಿಹ್ನೆ) ಬಹು-ಹಂತದ ರಚನೆಯಾಗಿದೆ’ ಎಂದು ಹೇಳಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X