ದಾವಣಗೆರೆ | ಅಂಗನವಾಡಿಗೆ ಅಗತ್ಯ ವಸ್ತು, ಕಾರ್ಯಕರ್ತೆಯರ ಬಾಕಿ ಹಣ ಪೂರೈಕೆಗೆ ಆಗ್ರಹ

Date:

Advertisements

ಬಾಕಿ ಹಣ ಪಾವತಿ, ಮಕ್ಕಳಿಗಾಗಿ ಉಪಯೋಗಿಸುವ ವಿವಿಧ ಪರಿಕರಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್ ದಾವಣಗೆರೆ ತಾಲೂಕು ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, “ಮಕ್ಕಳಿಗೆ ಸಮವಸ್ತ್ರ ಪೂರೈಕೆ ಮಾಡಬೇಕು, ಮಳೆಗಾಲದಲ್ಲಿ ಸೊಳ್ಳೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಗೆ ಸೊಳ್ಳೆ ಪರದೆ ಕೊಡಬೇಕು. ಜತೆಗೆ ಕೇಂದ್ರದ ಒಳಗೆ ಹೊರಗೆ ಸ್ವಚ್ಛತೆ ಮಾಡಿಸಿಕೊಡಬೇಕು” ಎಂದು ಒತ್ತಾಯಿಸಿದರು.

“ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮೂರು ತಿಂಗಳ ಗೌರವಧನ ಬಾಕಿಯಿದೆ. ಮೊಟ್ಟೆ ಹಣ, ಕೇಂದ್ರದ 5 ತಿಂಗಳು ಬಾಡಿಗೆ ಹಣ ಬಾಕಿಯಿದೆ. ಇವುಗಳನ್ನು ಶೀಘ್ರ ಬಿಡುಗಡೆ ಮಾಡಬೇಕು. ಲೋಟ, ತಟ್ಟೆ, ಚಮಚ ಸೇರಿದಂತೆ ಇತರೆ ಪಾತ್ರೆಗಳು ಹಾಗೂ ಮಕ್ಕಳಿಗೆ ಹಾಸುವ ಜಮ್ಖಾನಗಳನ್ನು ಹೊಸದಾಗಿ ಪೂರೈಸಬೇಕು” ಎಂದು ಒತ್ತಾಸಿದ ಅವರು, ʼಆರೋಗ್ಯ ಕುಟುಂಬʼ ಸಮೀಕ್ಷೆ ಮಾಡಿ ಒಂದು ವರ್ಷವಾದರೂ ಹಾಗೂ ಗ್ಯಾರಂಟಿ ಸರ್ವೆ ಮಾಡಿ ಆರು ತಿಂಗಳಾದರೂ ಹಣ ಹಾಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಲಂಗಳ ಮೂಲ ಸೌಲಭ್ಯಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹ

ಈ ವೇಳೆ ಫೆಡರೇಷನ್ ಮುಖಂಡರಾದ ಆವರಗೆರೆ ಚಂದ್ರು, ನಿರ್ಮಲಾ, ಗೀತಾ, ಸುಧಾ, ಸರ್ವಮ್ಮ, ಮಂಜುಳಾ, ರೇಖಾ,
ರಾಜ್ಯ ಸಂಚಾಲಕ ಆವರಗೆರೆ ವಾಸು ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X