ವಯನಾಡ್ ಭೂಕುಸಿತ | ವಯನಾಡ್‌ನಲ್ಲಿ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ

Date:

Advertisements

ವಯನಾಡ್‌ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್‌ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಆಗಸ್ಟ್ 1ರಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ ನೀಡಿದ್ದಾರೆ. ಆಗಸ್ಟ್ 2ರಂದು ಮೆಪ್ಪಾಡಿಯ ಚೂರಮಲದಲ್ಲಿರುವ ಅರಣ್ಯ ಕಛೇರಿಯಲ್ಲಿ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ರಾಹುಲ್ ಗಾಂಧಿ ನೂರು ಮನೆ ನಿರ್ಮಾಣದ ಬಗ್ಗೆ ತಿಳಿಸಿದ್ದಾರೆ.

“ನಿನ್ನೆಯಿಂದ ಇಲ್ಲೇ ಇದ್ದೇನೆ, ನಿನ್ನೆ ಹೇಳಿದಂತೆ ಇದೊಂದು ಘೋರ ದುರಂತ. ನಿನ್ನೆ ಸ್ಥಳಕ್ಕೆ ಭೇಟಿ ನೀಡಿದ್ದೆವು. ಶಿಬಿರಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದೆವು. ಇಂದು ಆಡಳಿತ ಮತ್ತು ಪಂಚಾಯತ್ ಜೊತೆ ಸಭೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ವಯನಾಡ್ ಭೂಕುಸಿತ | ತಂದೆ ಹತ್ಯೆಯಾದಾಗ ಅನುಭವಿಸಿದ್ದ ನೋವಿಗಿಂತ ಈಗ ಹೆಚ್ಚು ನೋವಾಗಿದೆ: ರಾಹುಲ್

ಹಾಗೆಯೇ, “ಕಾಂಗ್ರೆಸ್‌ನಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಹಾನಿಗೊಳಗಾದ ಮನೆಗಳ ಸಂಖ್ಯೆ ಮತ್ತು ಅವರ ಕಾರ್ಯತಂತ್ರದ ಬಗ್ಗೆ ನಮಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಒಂದೇ ಪ್ರದೇಶದಲ್ಲಿ ನಡೆದಿರುವ ಘಟನೆಯಲ್ಲ. ಆದ್ದರಿಂದ ಈ ದುರಂತವನ್ನು ವಿಭಿನ್ನವಾಗಿ ಪರಿಗಣಿಸಬೇಕಾಗುತ್ತದೆ ಎಂದು ನಾನು ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ” ಎಂದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X