ವಯನಾಡ್ ಭೂಕುಸಿತ | 24 ಗಂಟೆಗಳಲ್ಲಿ ಸೇತುವೆ ನಿರ್ಮಿಸಿದ ಸೇನೆ

Date:

Advertisements

ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ತ್ವರತವಾಗಿ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ‘190 ಅಡಿ ಉದ್ದದ ಬೈಲಿ ಸೇತುವೆ’ಯನ್ನು 24 ಗಂಟೆಗಳಲ್ಲಿ ನಿರ್ಮಾಣ ಮಾಡಿದೆ. ಈ ಸೇತುವೆಯು ಭೂಕುಸಿತಕ್ಕೆ ತುತ್ತಾದ ವಯನಾಡ್‌ನ ಮುಂಡಕ್ಕೈ ಮತ್ತು ಚೂರಮಲಾ ನಡುವೆ ಸಂಪರ್ಕ ಒದಗಿಸುತ್ತದೆ.

ಸೇತುವೆ ನಿರ್ಮಾಣ ಕಾಮಗಾರಿ ಬುಧವಾರ ರಾತ್ರಿ 9.30ಕ್ಕೆ ಆರಂಭಗೊಂಡಿತ್ತು. ಗುರುವಾರ ಸಂಜೆ 5.30ರ ವೇಳಗೆ ಸಂಪೂರ್ಣ ಕಾಮಗಾರಿ ಮುದಿದಿದೆ. 24 ಟನ್ ಭಾರ ಹೊರುವ ಸಾಮರ್ಥ್ಯವನ್ನು ಸೇತುವೆ ಹೊಂದಿದೆ.

ಸೇತುವೆಯು ಜನರು ಮತ್ತು ವಸ್ತುಗಳನ್ನು ಸುಲಭವಾಗಿ ಸಾಗಿಸಲು ಹೆಚ್ಚು ಸಹಾಯ ಮಾಡುತ್ತದೆ ಎಂದು ಮೇಜರ್ ಜನರಲ್ ಮ್ಯಾಥ್ಯೂ ಹೇಳಿದ್ದಾರೆ.

Advertisements

“ಭೂಕುಸಿತಕ್ಕೆ ತುತ್ತಾದ ಎಲ್ಲ ಪ್ರದೇಶಗಳಲ್ಲಿಯೂ ಹುಡುಕಾಟ ನಡೆಸುತ್ತಿದ್ದೇವೆ. ಹೆಚ್ಚು ಸಂತ್ರಸ್ತರನ್ನು ರಕ್ಷಿಸುವ ಭರವಸೆ ಇದೆ. ಕೆಲವರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಸಹಾಯಕ್ಕಾಗಿ ಸಂಪರ್ಕಿಸಲು ಸಾಧ್ಯವಾಗದ ಜನರು ಪೀಡಿತ ಪ್ರದೇಶದಲ್ಲಿಯೇ ಇದ್ದಾರೆ. ಅವರನ್ನು ರಕ್ಷಿಸಲಾಗುತ್ತಿದೆ. ದುರದೃಷ್ಟವಶಾತ್ ವೃತಪಟ್ಟವರ ಮೃತದೇಹಗಳನ್ನು ಕೂಡ ಹುಡುಕುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ವಯನಾಡ್ ಭೂಕುಸಿತ ಸೇತುವೆ

“ನಾವು ರಾಡಾರ್ ಉಪಕರಣಗಳನ್ನು ಬಳಸಲು ಯೋಚಿಸುತ್ತಿದ್ದೇವೆ. ನಮ್ಮಲ್ಲಿ ಈಗಾಗಲೇ ಸ್ನಿಫರ್ ಡಾಗ್‌ಗಳು ಆಳವಾಗಿ ಹೂತಿರುವ ದೇಹಗಳನ್ನು ಹುಡುಕುವ ಕೆಲಸ ಮಾಡುತ್ತಿವೆ” ಎಂದು ಮ್ಯಾಥ್ಯೂ ತಿಳಿಸಿದ್ದಾರೆ.

ಸೇತುವೆ ನಿರ್ಮಾಣಕ್ಕೆ ಸಾಮಗ್ರಿಗಳನ್ನು ದೆಹಲಿ ಮತ್ತು ಬೆಂಗಳೂರಿನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ತರಿಸಿಕೊಂಡು, ಅಲ್ಲಿಂದ 17 ಟ್ರಕ್‌ಗಳ ಮೂಲಕ ವಯನಾಡಿಗೆ ತರಲಾಯಿತು ಎಂದು ಅವರು ವಿವರಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X