ಕಲಬುರಗಿ | ʼದಲಿತʼ ಎಂಬ ಕಾರಣಕ್ಕೆ ಪ್ರವೇಶ ನಿರಾಕರಣೆ ಆರೋಪ: ಸಿಯುಕೆ ಕುಲಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್

Date:

Advertisements

ಸಂಶೋಧನಾ ವಿದ್ಯಾರ್ಥಿಯೊಬ್ಬರು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದಾಗ ವಿಶ್ವವಿದ್ಯಾಲಯ ಒಳಗಡೆ ಪ್ರವೇಶ ನೀಡದೆ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣೆಯಲ್ಲಿ ಸಿಯುಕೆ ಕುಲಪತಿ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ, ಕುಲ ಸಚಿವ ಹಾಗೂ ಭದ್ರತಾ ಅಧಿಕಾರಿ ವಿರುದ್ಧ ಕನ್ನಡ ವಿಭಾಗದಲ್ಲಿ ಸಂಶೋಧನೆ ಮಾಡಿರುವ ನಂದಪ್ಪ ಪರಮಣ್ಣ ದೂರು ದಾಖಲಿಸಿದ್ದಾರೆ.

ಪಿ.ಎಚ್‌.ಡಿ. ಸಂಶೋಧನಾ ವಿದ್ಯಾರ್ಥಿಯಾಗಿದ್ದ ನಂದಪ್ಪ ಅವರಿಗೆ ವಿಭಾಗದ ವತಿಯಿಂದ ಗುರುವಾರ ಬೀಳ್ಕೊಡುಗೆ ಏರ್ಪಡಿಸಲಾಗಿತ್ತು. ಅದಕ್ಕಾಗಿ ವಿಶ್ವವಿದ್ಯಾಲಯಕ್ಕೆ ಬಂದಾಗ ಅವರನ್ನು ಮುಖ್ಯದ್ವಾರದಲ್ಲಿಯೇ ತಡೆಯಲಾಯಿತು. ಏಕೆ ಎಂದು ಕೇಳಿದಾಗ ಪ್ರೊ.ಬಟ್ಟು ಸತ್ಯಾನಾರಾಯಣ, ಕುಲ ಸಚಿವ ಪ್ರೊ. ಆರ್‌.ಆರ್.‌ಬಿರಾದರ್ ಅವರ ನಿರ್ದೇಶನದ ಮೇರೆಗೆ ಒಳಗೆ ಬಿಡುತ್ತಿಲ್ಲ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಯಾದಗಿರಿ | ವರ್ಗಾವಣೆಗೊಂಡು ಬೀಳ್ಕೊಡುಗೆ ಸ್ವೀಕರಿಸಿದ್ದ ಪಿಎಸ್‌ಐ ಹೃದಯಾಘಾತದಿಂದ ನಿಧನ

ʼಈ ಹಿಂದೆಯೂ ಕೂಡ ಪರಿಶಿಷ್ಠ ಜಾತಿಗೆ ಸೇರಿದವನೆಂಬ ಕಾರಣಕ್ಕಾಗಿ ಅನೇಕ ರೀತಿಯ ಕಿರುಕುಳ ನೀಡಿದ್ದಾರೆ, ನನ್ನ ಪಿ.ಎಚ್‌.ಡಿ. ರದ್ದುಗೊಳಿಸಿದರು. ನಾನು ದಲಿತ ವಿದ್ಯಾರ್ಥಿ ಎಂಬ ಕಾರಣಕ್ಕಾಗಿಯೇ ಈ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ರೀತಿಯ ಸಾಮೂಹಿಕ ಬಹಿಷ್ಕಾರ, ಜಾತಿ ತಾರತಮ್ಯ ತೋರುತ್ತಿರುವ ಸಿಯುಕೆ ಕುಲಪತಿ, ಕುಲ ಸಚಿವ ಹಾಗೂ ಸಂಬಂಧಿಸಿದ ಇತರರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ನ್ಯಾಯ ಒದಗಿಸುವಂತೆʼ ದೂರಿನ ಮೂಲಕ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X