ತುಮಕೂರು | ಮೂರು ದೇವಾಲಯಕ್ಕೆ ಕನ್ನ: ಹುಂಡಿ ಹಣ ದೋಚಿದ ಖದೀಮರು

Date:

Advertisements

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರದ ಸಂತೆ ಮೈದಾನದ ಬಳಿಯ ಹೊರಕೆರಮ್ಮ ದೇವಾಲಯ, ಶನಿಮಹಾತ್ಮ ದೇವಾಲಯ ಹಾಗೂ ಪಾಂಡುರಂಗಸ್ವಾಮಿ ದೇವಾಲಯಕ್ಕೆ ಕನ್ನ ಹಾಕಿರುವ ಖದೀಮರು ಹುಂಡಿ ಬೀಗ ಮುರಿದು ಅಂದಾಜು 70 ಸಾವಿರ ಹಣ ದೋಚಿರುವ ಘಟನೆ ನಡೆದಿದೆ.

ಗ್ರಾಮದ ಮಧ್ಯೆ ಸಂತೆ ಮೈದಾನದ ಬಳಿಯ ಈ ದೇವಾಲಯಗಳು ಗುರಿಯಾಗಿಸಿಕೊಂಡ ಕಳ್ಳರ ಗುಂಪು ಸರಾಗವಾಗಿ ಕಳ್ಳತನ ಮಾಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಈಗಾಗಲೇ ಸಿ.ಎಸ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಲವು ಗ್ರಾಮದ ದೇವಾಲಯಕ್ಕೆ ಕನ್ನ ಹಾಕಿರುವ ಘಟನೆ ನಡೆದಿದ್ದು, ಒಂದೇ ಹೋಬಳಿಯಲ್ಲಿ ಕಳ್ಳತನ ನಡೆದಿರುವುದು ಹಿನ್ನಲೆ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Advertisements

ಒಂಟಿ ಮನೆ, ಬೀಗ ಹಾಕಿದ ಮನೆ ಹಾಗೂ ದೇವಾಲಯಗಳತ್ತ ರಾತ್ರಿ ವೇಳೆ ಜಾಗೃತೆ ವಹಿಸಿ ಒಡವೆಗಳು, ಹಣ, ಬೆಳ್ಳಿ ಪೂಜಾ ಸಾಮಗ್ರಿಗಳು ಜೋಪಾನ ಮಾಡಿಕೊಳ್ಳಲು ದೇವಾಲಯ ಸಮಿತಿಗಳಿಗೆ ಸೂಚಿಸಲಾಗಿದೆ.

ಸಿ.ಎಸ್.ಪುರ ಹೋಬಳಿ ಜೊತೆಗೆ ಕಡಬ ಹೋಬಳಿಯ ಕೆಲ ದೇವಾಲಯಗಳಲ್ಲಿ ಸಹ ಹುಂಡಿ ಹಣಕ್ಕೆ ಟಾರ್ಗೆಟ್ ಮಾಡಿರುವುದು ವ್ಯವಸ್ಥಿತ ಗುಂಪು ಸ್ಥಳೀಯವಾಗಿ ಎಲ್ಲಾ ಚಲನವಲನ ಅರಿತು ಕಳ್ಳತನ ಮಾಡಿದೆ. ಈ ಬಗ್ಗೆ ಪೊಲೀಸರು ಎಚ್ಚರಿಕೆ ವಹಿಸಬೇಕಿದೆ.

ರಾತ್ರಿ ಗಸ್ತು ಹೆಚ್ಚಳ ಹಾಗೂ 112 ವಾಹನ ಓಡಾಟ ರಾತ್ರಿ ನಡೆಸಿದಲ್ಲಿ ಕಳ್ಳತನ ಪ್ರಕರಣಕ್ಕೆ ತಡೆಯೊಡ್ಡಬಹುದು. ಹೀಗೆ ಕಳ್ಳತನ ಮುಂದುವರೆದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಸಿ.ಎಸ್.ಪುರ ಪೊಲೀಸರು ಧಾವಿಸಿ ಮುಂದಿನ ತನಿಖೆ ಆರಂಭಿಸಿ ಪ್ರಕರಣ ದಾಖಲಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X