ಹಾಸನ | ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ; ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿ ಸಮಾಲೋಚನಾ ಸಭೆ

Date:

Advertisements

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಿರುವುದರ ಬಗ್ಗೆ ಸುಪ್ರೀಂ ಕೋರ್ಟ್‌ ಕೆನೆಪದರ ವಿಚಾರವಾಗಿ ಉಲ್ಲೇಖಿಸಿರುವುದನ್ನು ಖಂಡಿಸುತ್ತೇವೆ. ಸುಪ್ರೀಂ ಕೋರ್ಟಿನ ತೀರ್ಪು, ದಲಿತರಲ್ಲೇ ದನಿ ಇಲ್ಲದವರಿಗೆ ಹೊಸಬೆಳಕು ನೀಡಿದೆ ಇದನ್ನು ನಾವು ಒಮ್ಮತದಿಂದ ಸ್ವಾಗತಿಸುತ್ತಿದ್ದೇವೆ. ಈಗಾಗಲೆ ಮಾದಿಗ ಸಮುದಾಯ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಕಾಣುತ್ತಿದ್ದೇವೆ. ದಶಕಗಳಿಂದ ಹೋರಾಡುತ್ತಿರುವುದರ ಫಲವಾಗಿ ಇಂದು ಪರಿಶಿಷ್ಟ ಜಾತಿಗಳಿಗೆ ಜಯ ಸಿಕ್ಕಿದೆ. ಇದನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ಮಾದಿಗ ದಂಡೋರ ಜಿಲ್ಲಾಧ್ಯಕ್ಷ ವಿಜಿಕುಮಾರ್‌ ಆಗ್ರಹಿಸಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿದ ಸುಪ್ರೀಂ ಕೋರ್ಟಿನ ತೀರ್ಪನ್ನು ಸ್ವಾಗತಿಸಿ ಮುಂದಿನ ನಡೆಯ ಬಗ್ಗೆ ಹಾಸನದ ಸ್ವಾಭಿಮಾನ ಭವನದಲ್ಲಿ ಮಾದಿಗ ದಂಡೋರ ಮೀಸಲಾತಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ 1

ಡಿಎಸ್‌ಎಸ್‌ ರಾಜ್ಯ ಸಂಚಾಲಕ ಸೋಮಶೇಖರ್‌ ಮಾತನಾಡಿ, “ಸತತ 30 ವರ್ಷಗಳಿಂದ ಹೋರಾಟ ಮಾಡುತ್ತಲೇ ಇದ್ದೇವೆ. ಈಗ ನಾವು ಹೊಲೆಮಾದಿಗ ಜಾತಿಗಳು ಒಟ್ಟಾಗಿ ಸುಪ್ರೀಂ ಕೋರ್ಟಿನ ತೀರ್ಪನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಗಟ್ಟಿಯಾದ ಹೋರಾಟ ರೂಪಿಸಬೇಕೆದೆ” ಎಂದು ಅಭಿಪ್ರಾಯಪಟ್ಟರು.

Advertisements

ಗಂಗಾಧರ ಬಹುಜನ್‌ ಮಾತನಾಡಿ, “ಪಂಜಾಬ್‌, ಹರಿಯಾಣ ರಾಜ್ಯಗಳಲ್ಲಿ ಹೆಚ್ಚು ಮಾದಿಗ ಸಮಯುದಾಯದವರು ಇದ್ದಾರೆ. ಈಗಾಗಲೇ ಈ ಹೋರಾಟ ಈ ಎರಡು ರಾಜ್ಯಗಳಿಂದಲೇ ಪ್ರಾರಂಭವಾಗಿದ್ದು, ತದ ನಂತರದಲ್ಲಿ ದಕ್ಷಿಣ ರಾಜ್ಯಗಳಲ್ಲಿ ಪ್ರಾರಂಭವಾಯಿತು. ಕ್ರೀಮಿಲೇಯರ್‌(ಕೆನೆಪದರ) ವಿಷಯವನ್ನು ಸುಪ್ರೀಂ ಕೋರ್ಟ್‌ ಪ್ರಸ್ತಾಪಿಸಿದೆ. ಇದನ್ನು ಕೂಡಲೇ ಕೈಬಿಡೇಕು. 1935ರ ಬ್ರಿಟೀಷ್‌ ಇಂಡಿಯನ್‌ ಗವರ್ನಮೆಂಟ್‌ ಆಕ್ಟ್‌  ಮೊದಲ ಬಾರಿಗೆ ಮೀಸಲಾತಿಯನ್ನು ನೀಡಿತ್ತು. ತದನಂತರದಲ್ಲಿ ಡಾ ಅಂಬೇಡ್ಕರ್‌ ಅವರು ಮೂಲಭೂತ ಹಕ್ಕುಗಳ ಒಳಗೆ ಮೀಸಲಾತಿಯನ್ನು ನೀಡಬೇಕೆಂದು ಪ್ರತಿಪಾದಿಸಿದ್ದರು. ಈ ಎಲ್ಲ ಐತಿಹಾಸಿಕ ವಿಷಯಗಳನ್ನು ನಾವು ಗಮನಿಸಿದರೆ ಈಗ ಪ್ರಸ್ತುತದಲ್ಲಿ ಈ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿದ ಸುಪ್ರೀಂ ಕೋರ್ಟಿನ ತೀರ್ಪನ್ನು ನಾವು ಸ್ವಾಗತಿಸಬೇಕಿದೆ ಮತ್ತು ಇದನ್ನು ಜಾರಿಗೊಳಿಸಲು ನಾವೆಲ್ಲರೂ ಶ್ರಮಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಇಂಪ್ಯಾಕ್ಟ್ | ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಆರೋಪ; ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ

ಸಭೆಯ ಅಧ್ಯಕ್ಷತೆ ವಹಿಸಿದ್ದ ಕೆ ಟಿ ಶಿವಪ್ರಸಾದ್‌, ರಾಜು ಗೊರೂರು ಸತೀಶ್‌ ಕಡವಿನಹೊಸಳ್ಳಿ, ನಾಗರಾಜು ಕೆ ಎಂ, ಕಕ್ಕೇಹಳ್ಳಿ ರಂಗಪ್ಪ, ಹೆಚ್‌ ಕೆ ಸಂದೇಶ್‌, ಈರಪ್ಪ, ವಕೀಲರಾದ ರಾಜೇಶ್‌, ಕುಮಾರ್‌ ಗೌರವ, ಬೈರೇಶ್‌ ಶೇಖರಯ್ಯ, ಹರೀಶ್‌, ದೇವರಾಜ್‌ ಸೋಮಶೇಖರ್‌, ಅಂಬುಗ ಮಲ್ಲೇಶ್‌, ರಮೇಶ್‌ ಹಾಸನ್‌, ನವೀನ್‌ ಕುಮಾರ್‌ ಅರವಿಂದ ಸೇರಿದಂತೆ ಇತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X