ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದೆ: ಸಿಎಂ ಬೊಮ್ಮಾಯಿ

Date:

Advertisements
  • ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್
  • ಮೋದಿ ಅವರಿಗೆ ಬೈದಷ್ಟು ಮತಗಳು ಜಾಸ್ತಿ ಆಗಿವೆ: ಸಿಎಂ

ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ. ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯ ತಮ್ಮ ಆದರ್ಶ ನಗರದ ನಿವಾಸ ಬಳಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್, ಮತ ಬ್ಯಾಂಕ್ ಎಂದು ತಿಳಿದುಕೊಂಡು ಏನು ಬೇಕಾದರೂ ಮಾತಾಡಿದರೆ ನಡೆಯುತ್ತದೆ ಎಂಬ ಅಮಲಿನಲ್ಲಿ ಇದ್ದಾರೆ” ಎಂದರು.

“ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಿರೋದು ಎಲ್ಲಕಿಂತ ಹೆಚ್ಚು ನೋವಾಗಿದೆ. ಸಿದ್ದರಾಮಯ್ಯ ಹಾಗೂ ಖರ್ಗೆ ಅವರು 50 ವರ್ಷ ಸಾರ್ವಜನಿಕ ಜೀವನ ಕಳೆದಿದ್ದಾರೆ. ಕೊನೆಯ ಹಂತದಲ್ಲಿ ಗೌರವಯುತವಾಗಿ ನಡೆದುಕೊಂಡರೆ ಶೋಭೆ ತರುತ್ತದೆ ಎಂದರು. ಇಲ್ಲದಿದ್ದರೆ ಜನ ಇಷ್ಟು ವರ್ಷ ಇವರು ಏನು ಮಾಡಿದರು ಎಂದು ಕೇಳುತ್ತಾರೆ” ಎಂದರು.

Advertisements

“ಮೋದಿ ಅವರನ್ನು ಯಾವಾಗ ಯಾವಾಗ ಬೈದ್ರು ಅವಾಗ ಮೋದಿ ಮತ ಜಾಸ್ತಿ ಆಗಿವೆ. ಮುಖ್ಯಮಂತ್ರಿ ಆದಾಗ ಬೈದರು, ಮೋದಿ ಮೂರು ಬಾರಿ ಮುಖ್ಯಮಂತ್ರಿ ಆದರು. ಪ್ರಧಾನಮಂತ್ರಿಯಾದರು. ಇದೀಗ ವಿಷ ಸರ್ಪ ಎಂಬ ಹೇಳಿಕೆ ಮೂಲಕ ಜನರ ಭಾವನೆ ಕೆರಳಿಸುತ್ತಿದ್ದಾರೆ. ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಅವರು ನನ್ನನ್ನು ಗುರಿಯಾಗಿಸುವುದು ಸಹಜ” ಎಂದು ಹೇಳಿದರು.

“ಕಾಂಗ್ರೆಸ್ ಮತ ಬ್ಯಾಂಕ್ ಛಿದ್ರವಾಗಿದೆ. ಅವರ ಮತ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು. ಅವರ ಕಾಲ ಕೆಳಗೆ ಇದ್ದ ಮತಗಳು ಸರಿದು ಹೋಗಿದೆ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ” ಎಂದರು.

“ಎಸ್ಸಿ, ಎಸ್ಟಿ, ಒಬಿಸಿ ಮತಗಳು ಅವರ ಕೈ ತಪ್ಪಿ ಅವರ ಅಣೆಕಟ್ಟು ಒಡೆದಿದೆ. ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡುತ್ತಿದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ. ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ 8 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರದ ಆರೋಪ ಇದೆ. ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತನಾಡುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X