ಚಿಕ್ಕಬಳ್ಳಾಪುರ | ಶೇ.40ರಷ್ಟು ಅಂಗನವಾಡಿಗಳಿಗಿಲ್ಲ ಸ್ವಂತ ಕಟ್ಟಡ!

Date:

Advertisements

ಸರ್ಕಾರ ಅಂಗನವಾಡಿಗಳನ್ನು ಉನ್ನತೀಕರಿಸಲು ಮುಂದಾಗಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 368 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬುದು ಮಾತ್ರ ವಾಸ್ತವ.

ಅಂಗನವಾಡಿಗಳ ಉನ್ನತೀಕರಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಅಂಗನವಾಡಿಗಳಲ್ಲೇ ಎಲ್.ಕೆ.ಜಿ –  ಯು.ಕೆ.ಜಿ ಆರಂಭಕ್ಕೆ ಸಮ್ಮತಿ ಸೂಚಿಸಿದೆ. ಆದರೆ, ಎಲ್ಲೆಲ್ಲಿ ಎಲ್.ಕೆ.ಜಿ –  ಯುಕೆಜಿ ಆರಂಭಿಸಬೇಕು ಎಂಬುದರ ಕುರಿತು ಸ್ಪಷ್ಟತೆಯೇ ಇಲ್ಲವಾಗಿದೆ. ಜತೆಗೆ ಅಂಗನವಾಡಿಗಳ ಮೂಲಸೌಕರ್ಯಗಳ ಕೊರತೆಯೂ ಎದ್ದು ಕಾಣುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇ.40 ರಷ್ಟು ಅಂಗನವಾಡಿಗಳಿಗೆ ಸ್ವಂತ ಕಟ್ಟಡವೇ ಇಲ್ಲವಾಗಿದ್ದು, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಅನುದಾನ ಬಿಡುಗಡೆಗೊಳಿಸಬೇಕಿದೆ.

Advertisements

ಜಿಲ್ಲಾದ್ಯಂತ 2014 ಅಂಗನವಾಡಿ ಕೇಂದ್ರಗಳಿದ್ದು, 1197 ಅಂಗನವಾಡಿ ಕೇಂದ್ರಗಳು ಮಾತ್ರ ಸ್ವಂತ ಕಟ್ಟಡಗಳನ್ನು ಹೊಂದಿವೆ. ಉಳಿದಂತೆ 276 ಕೇಂದ್ರಗಳು ಸರಕಾರಿ ಶಾಲಾ ಕಟ್ಟಡಗಳಲ್ಲಿ, 145 ಕೇಂದ್ರಗಳು ಸಮುದಾಯ ಭವನಗಳಲ್ಲಿ, 28 ಕೇಂದ್ರಗಳು ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿದ್ದು, 368 ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವುದು ಇಲಾಖೆಯಿಂದ ತರಿಸಿಕೊಂಡ ಮಾಹಿತಿಯಲ್ಲಿ ಲಭ್ಯವಾಗಿದೆ.

1001198979

ನಿವೇಶನ ಇದೆ, ಕಟ್ಟಡವಿಲ್ಲ!

ಜಿಲ್ಲಾದ್ಯಂತ 52 ಅಂಗನವಾಡಿಗಳಿಗಾಗಿ ನಿವೇಶನ ಕಾಯ್ದಿರಿಸಲಾಗಿದೆ. ಆದರೆ, ಕಟ್ಟಡವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಸುವ ಸ್ಥಿತಿ ಇದೆ. ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಬಜೆಟ್‌ನಲ್ಲಿ ಅನುದಾನ ನಿಗದಿಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ.

ಹಲವು ಅಂಗನವಾಡಿ ಕೇಂದ್ರಗಳು ಸ್ವಂತ ನಿವೇಶನಗಳನ್ನು ಹೊಂದಿದ್ದರೂ, ಸರಕಾರದಿಂದ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲ. ಸರ್ಕಾರಗಳು ಬದಲಾದರೂ ಸಹ ಅಂಗನವಾಡಿಗಳಿಗೆ ಅಗತ್ಯವಿರುವ ಸೌಕರ್ಯ ನೀಡುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂಬುದು ಇಲಾಖೆಯ ಅಧಿಕಾರಿಗಳ ಅಳಲು.

ಈ ಕುರಿತು ಈ ದಿನ.ಕಾಮ್ ಜತೆಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೆಂಕಟೇಶ್‌ ರೆಡ್ಡಿ, “ಅಂಗನವಾಡಿಗಳಲ್ಲಿ ಎಲ್.ಕೆ.ಜಿ – ಯು.ಕೆ.ಜಿ ಆರಂಭ ಸ್ವಾಗತಾರ್ಹ. ಎಲ್ಲೆಲ್ಲಿ ಆರಂಭ ಎಂಬುದರ ಕುರಿತು ಇನ್ನೂ ಮಾಹಿತಿ ಇಲ್ಲ. ಆದರೆ, ಸಾಕಷ್ಟು ಅಂಗನವಾಡಿಗಳಿಗೆ ಸ್ವಂತ ಕಟ್ಟಡವಿಲ್ಲ. ಸರಕಾರ ಅನುದಾನ ಬಿಡುಗಡೆ ಮಾಡಬೇಕಿದೆ” ಎಂದು ಹೇಳಿದರು.

ಅಂಗನವಾಡಿಗಳ ಸಮಸ್ಯೆಯ ಕುರಿತು ಈ ದಿನ.ಕಾಮ್ ಜತೆಗೆ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಮುನಿಕೃಷ್ಣಪ್ಪ, ಅಂಗನವಾಡಿಗಳಲ್ಲಿ ಎಲ್.ಕೆ.ಜಿ. – ಯುಕೆ.ಜಿ ಆರಂಭಕ್ಕೂ ಮುನ್ನ ಅಂಗನವಾಡಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಆನಂತರ ಸರಕಾರ ಉನ್ನತೀಕರಣದ ಚಿಂತನೆ ನಡೆಸಲಿ. ಮಕ್ಕಳಿಗೆ ಸಿಗಬೇಕಾದ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಮೊದಲು ಆಸಕ್ತಿ ವಹಿಸಿ, ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಒಟ್ಟಾರೆಯಾಗಿ ಅಂಗನವಾಡಿಗಳಲ್ಲಿ ಎಲ್.ಕೆ.ಜಿ – ಯು.ಕೆ.ಜಿ ಆರಂಭಿಸುವ ನಿಟ್ಟಿನಲ್ಲಿ ಸರಕಾರ ಅಂಗನವಾಡಿಗಳ ಉನ್ನತೀಕರಣಕ್ಕೆ ಮುಂದಾಗಿದ್ದು ಸರಿ.‌ ಆದರೆ, ಅಂಗನವಾಡಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕಿದೆ. ಅಂತೆಯೇ ಬಜೆಟ್ ನಲ್ಲೂ ಅಂಗನವಾಡಿಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಬೇಕು ಎಂಬುದು ಅಧಿಕಾರಿ ವರ್ಗ ಮತ್ತು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯವಾಗಿದೆ.

ವಿಜಯಕುಮಾರ್
ವಿಜಯ ಕುಮಾರ್ ಗಜ್ಜರಹಳ್ಳಿ
+ posts

ಪತ್ರಕರ್ತ, ಚಿಕ್ಕಬಳ್ಳಾಪುರ ಜಿಲ್ಲಾ ಸಂಯೋಜಕರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ವಿಜಯ ಕುಮಾರ್ ಗಜ್ಜರಹಳ್ಳಿ
ವಿಜಯ ಕುಮಾರ್ ಗಜ್ಜರಹಳ್ಳಿ
ಪತ್ರಕರ್ತ, ಚಿಕ್ಕಬಳ್ಳಾಪುರ ಜಿಲ್ಲಾ ಸಂಯೋಜಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X