ಚಾರುಕೀರ್ತಿ ಭಟ್ಟಾರಕರಿಗೆ ಗಣ್ಯರ ಸಂತಾಪ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

Date:

Advertisements
  • ಚಾರುಕೀರ್ತಿ ಶ್ರೀ ನಿಧನಕ್ಕೆ ಕಂಬನಿ ಮಿಡಿದ ರಾಜಕೀಯ ನಾಯಕರು
  • ಭಕ್ತಗಣಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲು ಪ್ರಾರ್ಥನೆ

ಗುರುವಾರ ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಕೋರಿದ್ದು, ಶ್ರೀಗಳ ನಿಧನದ ಸುದ್ದಿ ಕೇಳಿ ಅತೀವ ನೋವಾಗಿದೆ. ಭಾರತೀಯ ಅಧ್ಯಾತ್ಮ ಪರಂಪರೆಯ ಹಿರಿಯ ಸಾಧಕರಾಗಿದ್ದ ಶ್ರೀಗಳು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆ ಇತ್ತು.

ಆದರೆ, ಚಿಕಿತ್ಸೆ ಫಲಿಸದ ಕಾರಣದಿಂದ ದೇಹತ್ಯಾಗ ಮಾಡಿದ್ದಾರೆ. ಇಡೀ ಭಕ್ತ ಸಮೂಹಕ್ಕೆ ಶ್ರೀಗಳ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Advertisements

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಭಟ್ಟಾರಕರ ನಿಧನಕ್ಕೆ ಕಂಬನಿ ಮಿಡಿದರು.

ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದ ಅವರು ಶ್ರೀಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕರನ್ನೂ ಒಳಗೊಂಡಂತೆ ಇತರ ರಾಜಕೀಯ ಪ್ರಮುಖರೂ ಭಟ್ಟಾರಕರ ಅಗಲಿಕೆಗೆ ಸಂತಾಪ ಸೂಚಿಸಿ, ಸದ್ಗತಿಗಾಗಿ ಪಾರ್ಥನೆ ಸಲ್ಲಿಸಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಸರ್ಕಾರಿ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

Download Eedina App Android / iOS

X