ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ನೊಬೆಲ್ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಆಯ್ಕೆ ಸಾಧ್ಯತೆ

Date:

Advertisements

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಪ್ರಧಾನಿ ಸ್ಥಾನಕ್ಕೆ ಶೇಖ್‌ ಹಸೀನಾ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಸೇನೆಯು ನೊಬೆಲ್ ಪುರಸ್ಕೃತ ಮೊಹಮ್ಮದ್‌ ಯೂನುಸ್‌ ಅವರನ್ನು ನೂತನ ಪ್ರಧಾನಿಯನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೊಹಮ್ಮದ್‌ ಯೂನುಸ್‌ ಬಾಂಗ್ಲಾದೇಶದಲ್ಲಿ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿ ಸಣ್ಣ ಉದ್ಯಮಗಳಿಗೆ ಬೆಂಬಲ ನೀಡಿ ಆರ್ಥಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದವರು.

ಶೇಖ್‌ ಹಸೀನಾ ಅವರ 15 ವರ್ಷಗಳ ಸುದೀರ್ಘ ಆಡಳಿತ ಅಂತ್ಯವಾಗಿದೆ. ಸೋಮವಾರ(ಆ.05) ಹಸೀನಾ ಅವರು ದೇಶದಿಂದ ಪಲಾಯನಗೈದ ನಂತರ ಅವರ ಅಧಿಕೃತ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಲೂಟಿ ಮಾಡಿದರು. ಸಂಸತ್ತಿಗೂ ದಾಳಿಯಿಟ್ಟ ಪ್ರತಿಭಟನಾಕಾರರು ಸಂಸದರ ಕುರ್ಚಿ ಮೇಲೆ ಕೂತು ಧೂಮಪಾನ ಸೇರಿದಂತೆ ಮುಂತಾದ ಅಸಭ್ಯ ಚಟುವಟಿಗಳನ್ನು ಮಾಡಿದರು.

Advertisements

ಹಸೀನಾ ಅವರು ತಮ್ಮ ತಂಗಿ ಶೇಖ್‌ ರೆಹಾನಾ ಅವರೊಂದಿಗೆ ಸೇನಾ ವಿಮಾನದ ಮೂಲಕ ದೇಶ ತೊರೆದ ಸುದ್ದಿ ಬಿತ್ತರವಾದ ಕೂಡಲೇ ಸಾವಿರಾರು ಸಂಖ್ಯೆಯ ಪ್ರತಿಭಟನಕಾರರು ಪ್ರಧಾನಿ ಅವರ ಅಧಿಕೃತ ನಿವಾಸಕ್ಕೆ ‘ಗಾನಾಭವನ್‌’ಗೆ ನುಗ್ಗಿ ಲೂಟಿ ಮಾಡಿದರು. ಮನೆಯ ಆವರಣದಲ್ಲಿದ್ದ ಶೇಖ್‌ ಮುಜಿಬುರ್‌ ರೆಹಮಾನ್‌ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ಕಾಯಕಲ್ಪದ ಅಗತ್ಯವಿದೆ

ಧನ್ಮೋಂಡಿ ಮತ್ತು ಢಾಕಾದಲ್ಲಿನ ಅವಾಮಿ ಲೀಗ್‌ ಪಕ್ಷದ ಕಚೇರಿಗಳಿಗೂ ಬೆಂಕಿ ಹಚ್ಚುವ ಮೂಲಕ ಪ್ರತಿಭಟನ ಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಾಂಗ್ಲಾದೇಶದ ಮೀಸಲು ನಿಯಮವನ್ನು ವಿರೋಧಿಸಿ ಮತ್ತು ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರವು ಪ್ರತಿಭಟನೆ ಮುಂದುವರಿದಿದ್ದು, 56 ಜನರು ಮೃತಪಟ್ಟಿದ್ದಾರೆ. ಇದರಿಂದ ಎರಡು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X