ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆ ಸಾಧ್ಯತೆ

Date:

Advertisements

ನಿನ್ನೆ ಸಂಜೆ(ಆ.05) ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಗೆ ಬೆಂಗಳೂರಿನ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಾರಣವಿದ್ದು ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗ್ಗೆಯಿಂದಲೇ ಕೆಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಿದ್ದಂತೆ ಒಮ್ಮೆಗೆ ಸುರಿಯಲಾರಂಭಿಸಿದ ಮಳೆ ತಡರಾತ್ರಿಯವರೆಗೂ ಸುರಿಯಿತು. ಕೆಲವೆಡೆ ನಿರಂತರವಾಗಿ ಸುರಿದರೆ, ಮತ್ತೆ ಕೆಲವು ಬಡಾವಣೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಯಿತು. ಒಟ್ಟಾರೆ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕೆಲವೆಡೆ ಜೋರು ಮಳೆಯಿಂದಾಗಿ ರಸ್ತೆಯಂಚುಗಳಲ್ಲಿದ್ದ ಭಾರೀ ಮರಗಳು ಧರೆಗುರುಳಿ, ಸಂಚಾರ ದಟ್ಟಣೆ ಉಂಟಾಗಿತ್ತು.

ಜಯನಗರ, ಕೆಂಗೇರಿ, ಹೆಬ್ಬಾಳ, ಆರ್‌.ಟಿ. ನಗರ, ಮತ್ತಿಕೆರೆ, ಸಂಜಯನಗರ, ಮೈಸೂರು ರಸ್ತೆ, ಹಂಪಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಮೆಜೆಸ್ಟಿಕ್‌, ನಾಗರಬಾವಿ, ಶ್ರೀನಗರ, ವಿದ್ಯಾಪೀಠ, ಉತ್ತರಹಳ್ಳಿ, ಆರ್‌ಆರ್‌ ನಗರ, ಎಚ್‌.ಗೊಲ್ಲಹಳ್ಳಿ, ಬೊಮ್ಮನಹಳ್ಳಿ, ಜಯನಗರ, ಜೆ.ಪಿ.ನಗರ, ಬೆಳ್ಳಂದೂರು, ಎಚ್‌ಎಎಲ್‌ ವಿಮಾನ ನಿಲ್ದಾಣ, ವಿವಿ ಪುರಂ, ಸಂಪಿಗೆನಗರ, ಬಾಣಸವಾಡಿ, ನಂದಿನಿ ಲೇಔಟ್‌, ಚೊಕ್ಕಸಂದ್ರ, ಪೀಣ್ಯ ಕೈಗಾರಿಕಾ ಪ್ರದೇಶ, ಪುಲಕೇಶಿನಗರ, ಬಸವನಪುರ ಸೇರಿದಂತೆ ಹಲವು ಕಡೆ ಭರ್ಜರಿ ಮಳೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ಕಾಯಕಲ್ಪದ ಅಗತ್ಯವಿದೆ

ಮಳೆಯಿಂದ ಕೆಲವು ಕಡೆ ಟ್ರಾಫಿಕ್‌ ಜಾಮ್‌ ಉಂಟಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಸಂಜೆ ಮಳೆಯಿಂದ ಬೀದಿಬದಿಯ ವ್ಯಾಪಾರಿಗಳು, ಪಾದಾಚಾರಿಗಳು ತೊಂದರೆ ಅನುಭವಿಸುವಂತಾಯಿತು. ಕೆಲವೆಡೆ ರಾತ್ರಿ ತಡವಾದರೂ ಮಳೆ ನಿಲ್ಲದ ಹಿನ್ನೆಲೆಯಲ್ಲಿ ಕ್ಯಾಬ್‌, ಆಟೊಗಳನ್ನು ಬುಕ್‌ ಮಾಡಿದರೂ ಸಿಗುತ್ತಿರಲಿಲ್ಲ. ಹೀಗಾಗಿ ಪ್ರಯಾಣಿಕರು ತೀವ್ರ ಸಮಸ್ಯೆಗೊಳಗಾದರು.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಹವಾಮಾನ ವರದಿ ಪ್ರಕಾರ ಅಗಸ್ಟ್ 12 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X