‘ನಾವು ಫೋಗಟ್‌ ಕೂದಲನ್ನೂ ಕತ್ತರಿಸಿದ್ದೇವೆ’; ಅನರ್ಹತೆ ರದ್ದತಿಗಾಗಿ ಸಿಎಂಒ ಹರಸಾಹಸ

Date:

Advertisements

ಪ್ಯಾರಿಸ್ ಒಲಿಂಪಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರ ಅನರ್ಹತೆಯನ್ನು ರದ್ದುಗೊಳಿಸುವುದಕ್ಕಾಗಿ ಆಕೆಯ ತೂಕವನ್ನು 50 ಕಿ.ಜಿ ಒಳಗೆ ತರಲು ಹಲವಾರು ‘ಕಠಿಣ ಕ್ರಮ’ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ, ಆಕೆಯ ಕೂದಲನ್ನು ಕತ್ತರಿಸುವುದು ಕೂಡ ಸೇರಿದೆ ಎಂದು ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯ ವೈದ್ಯಾಧಿಕಾರಿ ಡಾ. ದಿನ್‌ಶಾ ಪರ್ದಿವಾಲಾ ಹೇಳಿದ್ದಾರೆ.

50 ಕೆ.ಜಿ ತೂಕದ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದ ಫೋಗಟ್‌ ಅವರು ಅಮೆರಿಕದ ಸಾರಾ ಹಿಲ್ಡೆಬ್ರಾಂಡ್ ವಿರುದ್ಧ ಪಂದ್ಯವಾಡಲು ಸಿದ್ದತೆ ನಡೆಸುತ್ತಿದ್ದರು. ಫೋಗಟ್‌ ಅವರ ತೂಕವನ್ನು ಬುಧವಾರ ಬೆಳಗ್ಗೆ ಪರಿಶೀಲನೆ ಮಾಡಲಾಗಿದೆ. ಅವರ ತೂಕವು 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿದೆ ಎಂದು ಹೇಳಲಾಗಿದ್ದು, ಅವರನ್ನು ಪಂದ್ಯದಿಂದ ಅನರ್ಹಗೊಳಿಸಲಾಗಿದೆ.

“ಮಂಗಳವಾರ ನಿರಂತರವಾಗಿ ಮೂರು ಪಂದ್ಯಗಳನ್ನು ಆಡಿದ್ದ ಫೋಗಟ್‌, ನಿರ್ಜಲೀಕರಣಕ್ಕೆ (ಡಿ-ಹೈಡ್ರೇಷನ್‌) ಒಳಗಾಗಿದ್ದರು. ಅದಕ್ಕಾಗಿ, ಅವರಿಗೆ ಸ್ವಲ್ಪ ನೀರು ಕೊಡಬೇಕಾಗಿತ್ತು. ಬಳಿಕ, ಆಕೆಯ ತೂಕ ಹೆಚ್ಚಾಗಿದ್ದು, ಅವರು ತೂಕ ಕಡಿಮೆ ಮಾಡಲು ಹಲವಾರು ಕ್ರಮಗಳನ್ನು ಅನುಸರಿಸಿದ್ದರು. ತೂಕ ಕಡಿಮೆ ಮಾಡಿಕೊಳ್ಳುವ ವಿಶ್ವಾಸ ಹೊಂದಿದ್ದರು. ಆದರೆ, ಅವರ ತೂಕದಲ್ಲಿ 50 ಕೆ.ಜಿ.ಗಿಂತ 100 ಗ್ರಾಂ ಹೆಚ್ಚಾಗಿರುವುದು ಕಂಡುಬಂದಿದೆ. ಆದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ” ಎಂದು ಪರ್ದಿವಾಲಾ ತಿಳಿಸಿದ್ದಾರೆ.

Advertisements

“ತೂಕ ಕಡಿಮೆ ಮಾಡುವಲ್ಲಿ ಆಹಾರ ಮತ್ತು ನೀರು ಸೇವನೆಯ ಲೆಕ್ಕಾಚಾರವೂ ಇರುತ್ತದೆ. ತೂಕ ಕಡಿತವು ದೌರ್ಬಲ್ಯ ಮತ್ತು ಶಕ್ತಿಯ ಕ್ಷೀಣತೆಗೆ ಕಾರಣವಾಗುತ್ತದೆ. ಶಕ್ತಿಯ ಮರುಸ್ಥಾಪನೆಗಾಗಿ, ಸೀಮಿತ ನೀರು ಮತ್ತು ಹೆಚ್ಚಿನ ಶಕ್ತಿಯ ಆಹಾರವನ್ನು ತೂಕ ಹಾಕಿದ ಬಳಿಕ ನೀಡಲಾಗುತ್ತದೆ” ಎಂದು ಡಾ. ಪಾರ್ದಿವಾಲಾ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X