ರಾಯಚೂರು | ಕೆರೆಯಲ್ಲಿ ದಿಢೀರ್ ಪ್ರತ್ಯಕ್ಷವಾದ ಮೊಸಳೆ; ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

Date:

Advertisements

ರಾಯಚೂರು ನಗರದ ಮಾವಿನಕೆರೆಯಲ್ಲಿ ದಿಢೀರ್ ಮೊಸಳೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನಂದೀಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಕೆರೆಯ ದಡದಲ್ಲಿ ಬುಧವಾರ ಬೆಳಿಗ್ಗೆ ಬೃಹದಾಕಾರದ ಮೊಸಳೆ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲಿನ ಜನರು ಭಯ ಭೀತರಾಗಿದ್ದರು. ಕೆರೆಯಲ್ಲಿ ಟಾರ್ಪಲ್ ಬಿಸಾಡಿದ್ದು ಅದರ ಮೇಲೆ ಮೊಸಳೆ ಮಲಗಿದ ದೃಶ್ಯ ಮೊಬೈಲ್ ಕ್ಯಾಮರಾಗೆ ಸೆರೆಯಾಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಬಳಿಕ ಸ್ಥಳೀಯ ನಿವಾಸಿಗಳು ಮೊಸಳೆ ಇರುವ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.

ಸಾರ್ವಜನಿಕರ ಕರೆಗೆ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮಾವಿನಕೆರೆಗೆ ದೌಡಾಯಿಸಿ, ಕೆಲವೇ ನಿಮಿಷಗಳಲ್ಲಿ ಮೊಸಳೆ ಹಿಡಿಯಲು ಯಶಸ್ವಿಯಾದರು.

Advertisements

ನಗರದ ಹೃದಯ ಭಾಗದಲ್ಲಿರುವ ಮಾವಿನ ಕೆರೆಯಲ್ಲಿ ಮೊಸಳೆ ಹೇಗೆ ಪತ್ತೆಯಾಗಿದೆ ಎಂದು ಸಾರ್ವಜನಿಕರು ಆಶ್ಚರ್ಯ ವ್ಯಕ್ತಪಡಿಸಿದ್ದು, ಅರಣ್ಯ ಇಲಾಖೆಯ ಕಾರ್ಯಾಚರಣೆಯಿಂದ ಕೊನೆಗೆ ನಿಟ್ಟುಸಿರು ಬಿಟ್ಟರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X