ಮಂಡ್ಯ | ಮೈಷುಗರ್ ಕಾರ್ಖಾನೆ ಉಳಿಸಲು ಚರ್ಚೆ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಮಂಡ್ಯ ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಶುಕ್ರವಾರ ಚರ್ಚೆ ನಡೆಸಿದರು.

“ಮಂಡ್ಯ ಜಿಲ್ಲೆಯ ಸಮಸ್ಯೆ ಕುರಿತು ಇಲ್ಲಿನ ನಾಯಕರ ಜತೆ ಚರ್ಚೆ ಮಾಡಿದ್ದೇವೆ. ಐತಿಹಾಸಿಕ ಮೈಷುಗರ್ ಕಾರ್ಖಾನೆ ಹೇಗೆ ಉಳಿಸಿಕೊಳ್ಳಬೇಕು ಎಂದು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ರೈತರಿಗೆ ಅನುಕೂಲ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಸಭೆ ಮಾಡಿದ್ದೇವೆ. ಹೊಸ ಕಾರ್ಖಾನೆ ಆರಂಭಿಸಬೇಕಾ ಅಥವಾ ಇರುವ ಕಾರ್ಖಾನೆಗೆ ಹೊಸ ವ್ಯವಸ್ಥೆ ಕಲ್ಪಿಸುವುದೇ ಎಂದು ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“10 ಸಾವಿರ ಟಿಸಿಡಿ ಮಾಡುವುದು ನಮ್ಮ ಮುಂದೆ ಇರುವ ಆಯ್ಕೆ. ಇದನ್ನು ಮಾಡಿದರೆ ಬೇಕಾಗಿರುವ ಕಬ್ಬನ್ನು ಎಲ್ಲಿಂದ ತರುವುದು? ಬೆಳೆ ಪ್ರಮಾಣ ಎಷ್ಟಿದೆ? ಎಂದು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ಮಾಡಿದ್ದೇವೆ. ಈಗಿರುವ 5 ಸಾವಿರ ಟಿಸಿಡಿ ಸಂಪೂರ್ಣವಾಗಿ ನಡೆದು ಅಲ್ಲಿ ಎಥೆನಾಲ್ ಘಟಕ ಸೇರಿದಂತೆ ಎಲ್ಲವೂ ಕಾರ್ಯಾರಂಭವಾಗಿ ಸಂಸ್ಥೆ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು. ನಾವು ದೊಡ್ಡ ಕಾರ್ಖಾನೆ ಮಾಡುವುದು ದೊಡ್ಡದಲ್ಲ. ಅದಕ್ಕೆ ತಕ್ಕಂತೆ ರೈತರು ಕಬ್ಬು ಬೆಳೆಯಲು ಉತ್ತೇಜನ ನೀಡಬೇಕು” ಎಂದು ತಿಳಿಸಿದರು.

Advertisements

“ನಮಗಿರುವ ವರದಿ ಪ್ರಕಾರ ಅಕಾಲಿಕ ಮಳೆಯಿಂದಾಗಿ ರೈತರು ಕಬ್ಬು ಬೆಳೆಯುವುದನ್ನು ಬಿಟ್ಟು ಬೇರೆ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಎರಡು ಸಾವಿರ ರೈತರು ಕಬ್ಬು ಬೆಳೆಗೆ ಮುಂದಾಗಿದ್ದಾರೆ. ಇದಕ್ಕೆ ಏನು ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಜಿಲ್ಲೆಯಲ್ಲಿ ಈ ಕಾರ್ಖಾನೆ ಜತೆಗೆ ಇನ್ನು ಐದಾರು ಕಾರ್ಖಾನೆಗಳಿವೆ. ಎಲ್ಲವೂ ಸುಸ್ಥಿರವಾಗಿರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X