ಉತ್ತರ ಪ್ರದೇಶ | 14 ತಿಂಗಳಲ್ಲಿ ಒಂಬತ್ತು ಮಹಿಳೆಯರ ಕೊಂದ ‘ಸರಣಿ ಹಂತಕ’ ಬಂಧನ

Date:

Advertisements

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಕಳೆದ 14 ತಿಂಗಳ ಅವಧಿಯಲ್ಲಿ ಒಂಬತ್ತು ಮಹಿಳೆಯರನ್ನು ಕೊಂದ ‘ಸರಣಿ ಹಂತಕ’ ಕುಲದೀಪ್‌ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕಳೆದ ವರ್ಷದಲ್ಲಿ ಶಾಹಿ-ಶೀಶ್‌ಗಢ ಪ್ರದೇಶದಲ್ಲಿ ಒಂಬತ್ತು ಮಹಿಳೆಯರು ಶವವಾಗಿ ಪತ್ತೆಯಾಗಿದ್ದಾರೆ. ಈ ಅಪರಾಧಗಳ ಹಿಂದೆ ಓರ್ವ ವ್ಯಕ್ತಿಯೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು. ಈ ಮಹಿಳೆಯರೆಲ್ಲರು ಧರಿಸಿದ ಸೀರೆ ಅಥವಾ ಬಟ್ಟೆಯಿಂದಲೇ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು.

ಉತ್ತರ ಪ್ರದೇಶ

ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿಯ ಗ್ರಾಮಗಳನ್ನು ಒಳಗೊಂಡ 25 ಕಿಮೀ ವ್ಯಾಪ್ತಿಯಲ್ಲಿ ಈ ಘಟನೆಗಳು ಸಂಭವಿಸಿವೆ. ಮೃತರು 45ರಿಂದ 55 ವರ್ಷ ವಯಸ್ಸಿನವರಾಗಿದ್ದು, ಮಧ್ಯಾಹ್ನದ ಸುಮಾರಿಗೆ ಹೊಲಗಳಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

Advertisements

ಇದನ್ನು ಓದಿದ್ದೀರಾ? 14 ತಿಂಗಳಲ್ಲಿ 9 ಮಹಿಳೆಯರ ಹತ್ಯೆ; ಸರಣಿ ಕೊಲೆ ಶಂಕೆ

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಪೊಲೀಸರು, “ಉತ್ತರ ಪ್ರದೇಶದ ಬರೇಲಿಯ ನಿವಾಸಿ ಕುಲದೀಪ್ 2014ರಲ್ಲಿ ವಿವಾಹವಾಗಿದ್ದು, ಆತನ ನಡವಳಿಕೆಯಿಂದ ಬೇಸತ್ತ ಪತ್ನಿ ಆತನನ್ನು ತೊರೆದಿದ್ದಳು. ಅದರಿಂದಾಗಿ ಆತನಿಗೆ ಮಹಿಳೆಯರ ಮೇಲೆ ದ್ವೇಷದ ಭಾವನೆ ಬೆಳೆದಿದೆ. ಬಳಿಕ ಮಹಿಳೆಯರ ಕೊಲೆ ಮಾಡಲು ಆರಂಭಿಸಿದ” ಎಂದು ತಿಳಿಸಿದ್ದಾರೆ.

“ನಿರ್ಜನ ಸ್ಥಳಗಳಲ್ಲಿ ಇರುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಸಂಪರ್ಕಕ್ಕೆ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದ. ಮಹಿಳೆಯರು ನಿರಾಕರಿಸಿದಾಗ ಅವರ ಮೇಲೆ ಆಕ್ರೋಶಗೊಂಡು ಅವರ ಸೀರೆಗಳನ್ನು ಬಳಸಿ ಕತ್ತು ಹಿಸುಕಿ ಕೊಲ್ಲುತ್ತಿದ್ದ. ಕೊಲೆಯ ನಂತರ, ಸಂತ್ರಸ್ತರ ಲಿಪ್‌ಸ್ಟಿಕ್, ಬಿಂದಿ, ಸೀರೆಯ ತುಂಡು, ಕುಪ್ಪಸದ ತುಂಡನ್ನು ಇಟ್ಟುಕೊಳ್ಳುತ್ತಿದ್ದ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X