ಕ್ಲೀನ್ ಸ್ವಾಮಿಯ 50 ಡಿನೋಟಿಫಿಕೇಷನ್ ಪ್ರಕರಣ ಬಿಚ್ಚಿಡುತ್ತೇನೆ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Date:

Advertisements

ಕುಮಾರಸ್ವಾಮಿ ಬಹಳ ಕ್ಲೀನ್ ಸ್ವಾಮಿಯಂತೆ. ನನಗೆ ಅವರ ವಿಚಾರ ಗೊತ್ತಿರಲಿಲ್ಲ. ಅವರ ವಿರುದ್ಧ ಸುಮಾರು 50 ಡಿನೋಟಿಫಿಕೇಶನ್ ಪ್ರಕರಣಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲವನ್ನು ಹೊರಗೆ ತರುತ್ತೇನೆ ನೋಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಮೈಸೂರು ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರ ಪ್ರಕರಣದಲ್ಲಿ ವಿಚಾರಣೆ ನಡೆಸಲು ಲೋಕಾಯುಕ್ತದವರು ರಾಜ್ಯಪಾಲರಿಗೂ ಪತ್ರ ಬರೆದಿದ್ದಾರಂತೆ. ಆದರೆ ಕುಮಾರಸ್ವಾಮಿ ಯೂಟರ್ನ್ ಮಾಡಿಕೊಂಡು ಈಗ ಬಿಜೆಪಿ ಮೊರೆ ಹೋಗಿದ್ದಾರೆ” ಎಂದು ಟೀಕಿಸಿದರು.

“ವಿಜಯೇಂದ್ರ ನಿಮ್ಮ ತಂದೆ ಎರಡು ಸಾರಿ ರಾಜೀನಾಮೆ ಕೊಟ್ಟಿದ್ದೇಕೆ? ಎಂದು ಲೆಕ್ಕ ಕೊಡು. ನಾಳೆ ನೀನು ಮೈಸೂರಿಗೆ ಬಂದು ಸಭೆ ಮಾಡುವಾಗ ಲಕ್ಷ್ಮಿ ವಿಲಾಸ್ ಬ್ಯಾಂಕ್ ನಿಂದ ವಿದೇಶಕ್ಕೆ ಆರ್‌ಟಿಜಿಎಸ್ ಮಾಡಿದ್ದೀಯಲ್ಲಾ, ಅದು ಯಾಕೆ? ನಿಮ್ಮ ತಂದೆ ಕಣ್ಣೀರು ಹಾಕಿದ್ದು ಏಕೆ? ಎಂದು ವಿವರಿಸು. ಇಲ್ಲಿ ಯಾರು ರಾಜೀನಾಮೆ ನೀಡಬೇಕು ಎಂದು ಕಾಲ ತೀರ್ಮಾನ ಮಾಡುತ್ತದೆ” ಎಂದು ತಿರುಗೇಟು ನೀಡಿದರು.

Advertisements

“ಕುಮಾರಸ್ವಾಮಿ ಅವರು ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಮೊದಲು ನನ್ನ ಮೇಲೆ ಆರೋಪ ಮಾಡಿದರು. ನಂತರ ಪ್ರೀತಂ ಗೌಡನ ಮೇಲೆ ಆರೋಪ ಮಾಡಿದ್ದಾರೆ. ಈ ಹಿಂದೆ ಯಡಿಯೂರಪ್ಪನವರಿಗೆ ಅಧಿಕಾರ ನೀಡದೇ ಬೆನ್ನಿಗೆ ಚೂರಿ ಹಾಕಿದವರು ಯಾರು? ಕುಮಾರಸ್ವಾಮಿಯೇ ಹೊರತು ಕಾಂಗ್ರೆಸಿಗರಲ್ಲ” ಎಂದರು.

“ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದಲ್ಲಿ ಯಾರನ್ನೂ ಬೆಳೆಯಲು ಬಿಡಲಿಲ್ಲ. ಡಿಸಿಎಂ ಆಗಿದ್ದ ಸಿದ್ದರಾಮಯ್ಯ ಅವರನ್ನು ಬಿಡಲಿಲ್ಲ. ದೇವೇಗೌಡರು ಪ್ರಧಾನಿಯಾಗಿದ್ದಾಗ ಅವರ ಪಕ್ಷದಲ್ಲಿ 17 ಸಂಸದರಿದ್ದರು. ಅವರಲ್ಲಿ ಯಾರೊಬ್ಬರೂ ಈಗ ಜೆಡಿಎಸ್ ಪಕ್ಷದಲ್ಲಿ ಇಲ್ಲ. ತಮ್ಮ ಮಕ್ಕಳಿಗೆ ರಾಜಕೀಯ ದಾರಿ ಮಾಡಿಕೊಡಲು ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರನ್ನು ಪಕ್ಷದಿಂದ ಹೊರಹಾಕಿದ್ದಾರೆ. ಇದು ಜನತಾದಳದ ಇತಿಹಾಸ” ಎಂದು ಕುಟುಕಿದರು.

ಕುಮಾರಸ್ವಾಮಿ ನಿನ್ನಿಂದ ಕಾಂಗ್ರೆಸ್ ಪಕ್ಷ ಅಲುಗಾಡಿಸಲು ಆಗುವುದಿಲ್ಲ

“ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರ ತೆಗೆದಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದೀರಿ. ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದರೂ ಈ ಕಾಂಗ್ರೆಸ್ ಅಳಿಸಲು ಆಗಲಿಲ್ಲ. ಬಡವರ ಶಕ್ತಿಯಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವನ್ನು ನೀನು ಎರಡು ಜನ್ಮ ಎತ್ತಿ ಬಂದರೂ ಅಳಿಸಲು ಸಾಧ್ಯವಿಲ್ಲ. ನೀನು ಏನೇ ಕುತಂತ್ರ ಮಾಡಿದರೂ ಕಾಂಗ್ರೆಸ್ ಅಳಿಸಲು ಸಾಧ್ಯವಿಲ್ಲ” ಎಂದು ತಿರುಗೇಟು ನೀಡಿದರು.

“ವಿಜಯೇಂದ್ರ, ಅಶೋಕ, ಕುಮಾರಸ್ವಾಮಿ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯನ ಜತೆ ಇದೆ. ಈ ಬಂಡೆ ಜತೆ 135 ಶಾಸಕರೂ ಇದ್ದಾರೆ. ಕೋಟ್ಯಂತರ ಜನ ಸಿದ್ದರಾಮಯ್ಯನವರ ಜತೆಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ. ಹೀಗಾಗಿ ನಿಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ” ಎಂದರು.

10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲು ಆಗುವುದಿಲ್ಲ

“2023ರಲ್ಲಿ ರಾಜ್ಯದ ಜನರು ನಮಗೆ ಶೇ. 43 ರಷ್ಟು ಮತ ನೀಡಿದ್ದಾರೆ, ಲೋಕಸಭೆಯಲ್ಲಿ ಶೇ. 45 ರಷ್ಟು ಮತ ನೀಡಿದ್ದಾರೆ. 1 ಸೀಟು ಹೊಂದಿದ್ದ ನಾವು 9 ಸೀಟು ಗೆದ್ದಿದ್ದೇವೆ. ಜನರ ತೀರ್ಪನ್ನು ನಾವು ಒಪ್ಪುತ್ತೇವೆ. ಈ ಸರ್ಕಾರವನ್ನು ಮುಂದಿನ 10 ತಿಂಗಳಲ್ಲಿ ಅಲ್ಲಾಡಿಸಬಹುದು ಎಂಬುದು ನಿಮ್ಮ ಭ್ರಮೆ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮುಂದಿನ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ. ಮುಡಾ ಹಗರಣ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸಿಎಂ ರಾಜೀನಾಮೆ ಕೇಳುತ್ತರುವುದು ಅನೈತಿಕವಾದುದು” ಎಂದು ಹೇಳಿದರು.

“ಮೂಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ? ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X