ಚುನಾವಣೆ 2023 | ನಾಳೆಯಿಂದ ಬ್ಯಾಲೆಟ್ ಪೇಪರ್ ಮತದಾನ ಆರಂಭ

Date:

Advertisements
  • ರಾಜ್ಯದಲ್ಲಿ ವೃದ್ಧ ಮತದಾರರ ಸಂಖ್ಯೆ 80,250
  • ವೃದ್ದ-ವಿಕಲಚೇತನರ ಮನೆಗೆ ಬ್ಯಾಲೆಟ್ ಪೇಪರ್

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆಯಿಂದ (ಏ.29) ಬ್ಯಾಲೆಟ್ ಪೇಪರ್ ಮತದಾನ ಶುರುವಾಗಲಿದೆ.

80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲಚೇತನರು, ಪೊಲೀಸರು, ಚುನಾವಣಾ ಸಿಬ್ಬಂದಿಗಳು ಮತ್ತು ಪತ್ರಕರ್ತರು ಬ್ಯಾಲೆಟ್ ಪೇಪರ್ ಮೂಲಕ ನಾಳೆಯಿಂದ ತಮ್ಮ ಹಕ್ಕು ಚಲಾಯಿಸುತ್ತಾರೆ. ಏಪ್ರಿಲ್ 29 ರಿಂದ ಮೇ 6ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

80 ವರ್ಷ ಮೇಲ್ಪಟ್ಟ ವೃದ್ಧರಿಗೆ ಹಾಗೂ ಅಂಗವಿಕಲರಿಗೆ ಮನೆ ಬಳಿಯೇ ವೋಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ, ಚುನಾವಣಾ ಕೆಲಸಕ್ಕೆ ನಿಯೋಜನೆ ಆಗಿರುವ ಅಧಿಕಾರಿಗಳು ಮತ್ತು ಪತ್ರಕರ್ತರು ಅವರವರ ಕ್ಷೇತ್ರಗಳಲ್ಲಿ ನಾಳೆಯಿಂದ ಬ್ಯಾಲೆಟ್ ವೋಟಿಂಗ್ ಮಾಡಬಹುದಾಗಿದೆ. ಇನ್ನುಳಿದವರು ಮೇ 10ರಂದೇ ಮತಗಟ್ಟೆಗೆ ಹೋಗಿ ಮತದಾನ ಮಾಡಬೇಕು.

Advertisements

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಬೆ ಚುನಾವಣೆಯಲ್ಲಿ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು 80,250 ಇದ್ದಾರೆ. ಇವೆಲ್ಲರೂ ಮನೆಯಿಂದಲೇ ಮತದಾನ ಮಾಡುವುದಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸುಮಾರು 47,488 ಯೋಧರಿಗೆ ಚುನಾವಣಾ ಆಯೋಗ ಈಗಾಗಲೇ ಮತಪತ್ರ ಕಳುಹಿಸಿದೆ. 19279 ವಿಕಲ ಚೇತನರು, 13771 ಅಗತ್ಯ ಸೇವೆ ಒದಗಿಸುವವರು ನೋಂದಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಅಭಿವೃದ್ಧಿ ಕಾಣದ ಕೋಲಾರ ಕ್ಷೇತ್ರದಲ್ಲಿ ಈ ಬಾರಿ ಜಿದ್ದಾಜಿದ್ದಿನ ತ್ರೀಕೋನ ಸ್ಪರ್ಧೆ ಸಾಧ್ಯತೆ

ಮನೆಯಿಂದಲೇ ಮತದಾನ ಪ್ರಕ್ರಿಯೆ ಹೇಗೆ ನಡೆಯಲಿದೆ?

ಚುನಾವಣಾ ಆಯೋಗದ ಸಿಬ್ಬಂದಿಗಳು 80 ವರ್ಷ ಮೇಲ್ಪಟ್ಟ ವೃದ್ಧರ ಮನೆ ಬಾಗಿಲಿಗೆ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಈ ಮೂಲಕ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ.

ಗೌಪ್ಯ ಮತ ಚಲಾಯಿಸುವಾಗ ಸ್ಥಳದಲ್ಲಿ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಇರಲಿದ್ದಾರೆ. ಅಲ್ಲದೇ ಮತದಾನದ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಗುತ್ತದೆ. ಇನ್ನು ಮತದಾನದ ನಂತರ ಮತ ಪೆಟ್ಟಿಗೆಗಳನ್ನು ಈಗಾಗಲೇ ಮೀಸಲಿಟ್ಟಿರುವ ಸ್ಟ್ರಾಂಗ್ ರೂಮ್ ಗೆ ಶಿಫ್ಟ್ ಮಾಡಲಾಗುತ್ತದೆ.

ಬ್ಯಾಲೆಟ್ ಪೇಪರ್ ಮತಗಳನ್ನೂ ಸಹ ಮೇ 13ರಂದು ಎಣಿಕೆ ಮಾಡಲಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X