ಅಧಿಕಾರ ಬರುತ್ತೆ ಹೋಗುತ್ತೆ, ಕುಮಾರಸ್ವಾಮಿಗೆ ಹೆದರಿ ಕೂರುವ ರಕ್ತ ನನ್ನದಲ್ಲ: ಡಿ ಕೆ ಶಿವಕುಮಾರ್

Date:

Advertisements

ಕಳೆದ ಎರಡು ಮೂರು ವರ್ಷಗಳಿಂದ ಕುಮಾರಸ್ವಾಮಿ ಟೀಕೆಗಳನ್ನು ಸಹಿಸಿಕೊಂಡಿದ್ದೆ. ಮಗನ ಸೋಲಿನ ನಂತರ ಅವರ ಮಾತು ಮಿತಿ ಮೀರಿದೆ. ಅಧಿಕಾರ ಬರುತ್ತದೆ, ಅಧಿಕಾರ ಹೋಗುತ್ತದೆ. ನನ್ನದು ಹೆದರಿ ಕೂರುವ ರಕ್ತವಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಎಚ್ಚರಿಸಿದರು.

‘ನಪುಂಸಕ’ ಎಂದು ಟೀಕಿಸಿರುವ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯೆಗೆ ಆಕ್ರೋಶ ವ್ಯಕ್ತಪಡಿಸಿ, ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾನು ಎಷ್ಟು ದಿನ ಸಹಿಸಲಿ. ನನ್ನ ವಿರುದ್ಧ ಇರುವ ದಾಖಲೆಗಳನ್ನು ಬಿಡುಗಡೆ ಮಾಡಲಿ” ಎಂದು ಆಗ್ರಹಿಸಿದರು.

“ನಾನು ವಿಧವೆಯರಿಗೆ ಗನ್ ಪಾಯಿಂಟ್ ನಲ್ಲಿಟ್ಟು ಈ ಆಸ್ತಿ ಬರೆಸಿಕೊಂಡಿದ್ದೇನೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಹಾಗಿದ್ದರೆ ಅವರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ದೂರು ನೀಡಿ ಎಫ್ಐಆರ್ ದಾಖಲಿಸಲಿ” ಎಂದು ಸವಾಲು ಹಾಕಿದರು.

Advertisements

ಕುಮಾರಸ್ವಾಮಿ ಒಬ್ಬರೇ ಗಂಡಸು

“ಕುಮಾರಸ್ವಾಮಿ ಒಬ್ಬರೇ ಗಂಡಸು. ಅವರು ಈ ಹಿಂದೆ ಏನು ಮಾತನಾಡಿದ್ದಾರೆ ಒಮ್ಮೆ ನೋಡಿ. ನನ್ನನ್ನು ಮಿಲಿಟರಿ ಬಂದು ಕರೆದುಕೊಂಡು ಹೋಗುತ್ತೆ ಎಂದು ಹೇಳಿದ್ದಾರೆ. ಅಂದರೆ ನಾನು ಮತ್ತೆ ಜೈಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ನಾನು ಜೈಲು ನೋಡಿರುವವನು. ನಾನು ಜೈಲಲ್ಲಿ ಇದ್ದಾಗ ಅವರು ಬಂದು ನನ್ನ ನೋಡಿದ್ದರು. ಜೈಲಿನ ಒಳಗೆ ನಾನು ಎಷ್ಟು ಶಕ್ತಿಯಲ್ಲಿದ್ದೆ ಎಂದು ನೋಡಿದ್ದಾರೆ” ಎಂದರು ತಿರುಗೇಟು ನೀಡಿದರು.

ಗಣಿ ಡಿನೋಟಿಫಿಕೇಶನ್ ಪ್ರಕರಣಲ್ಲಿ ವಿಚಾರಣೆಗೆ ಅವಕಾಶ ನೀಡಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಆ ಪ್ರಕರಣದ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ನನ್ನ ಮೇಲೂ ಡಿನೋಟಿಫಿಕೇಶನ್ ಕೇಸು ದಾಖಲಿಸಿದ್ದರು. ಆ ಪ್ರಕರಣದಲ್ಲಿ ಯಡಿಯೂರಪ್ಪ ಶಿಫಾರಸ್ಸಿನ ಮೇಲೆ ಮಾಡಿದ್ದೆ. ಶಾಸಕ ಪತ್ರ ಬರೆದ ಕಾರಣ 16 (2) ಆಗಿರಲಿಲ್ಲ ಡಿನೋಟಿಫಿಕೇಶನ್ ಮಾಡಲಾಯಿತು. ನನ್ನ ಮೇಲೆ ಯಾಕೆ ಎಫ್ಐಆರ್ ಆಯಿತು? ಅದೇ ಆರ್.ಅಶೋಕ್ ಸೇರಿದಂತೆ ಬೇರೆ ಮಂತ್ರಿಗಳ ಮೇಲೆ ಕೇಸ್ ಆಗಲಿಲ್ಲ ಯಾಕೆ? ನಾನು ಕಾನೂನು ಸಮರದಲ್ಲಿ ಗೆದ್ದಿದ್ದೇನೆ. ಇದರಲ್ಲಿ ನಾನು ಅನುಭವಿಸಿರುವುದು ನನಗೆ ಮಾತ್ರ ಗೊತ್ತು” ಎಂದರು.

ಕುಮಾರಸ್ವಾಮಿ ಸರ್ಕಾರ ಬೀಳಿಸುವ ಮಾತು

ಈ ಸರ್ಕಾರ ತೆಗೆಯುವ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಕುಮಾರಸ್ವಾಮಿ ಯಾವ ಆಧಾರದ ಮೇಲೆ 10 ತಿಂಗಳಲ್ಲಿ ಸರ್ಕಾರ ಬೀಳಿಸುತ್ತೇವೆ ಎಂದಿದ್ದಾರೆ? ಕುಮಾರಸ್ವಾಮಿ ಅವರ ಸರ್ಕಾರವನ್ನೇ ಬಿಜೆಪಿಯವರು ಬೀಳಿಸಿದ್ದರಲ್ಲಾ ಅದರ ಬಗ್ಗೆ ಕುಮಾರಸ್ವಾಮಿ ಯಡಿಯೂರಪ್ಪ, ಅಶೋಕ್, ಅಶ್ವತ್ಥನಾರಾಯಣ, ಅಶೋಕ್ ಅವರ ಬಗ್ಗೆ ಮಾತನಾಡುತ್ತಿಲ್ಲ? ನಮ್ಮ ಸರ್ಕಾರವನ್ನು ಹೇಗೆ 10 ತಿಂಗಳಲ್ಲಿ ತೆಗೆಯುತ್ತಾರೆ. ನಮ್ಮ ಸರ್ಕಾರವನ್ನು ಮುಟ್ಟಲಿ ನೋಡೋಣ” ಎಂದು ಸವಾಲು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X