ಮೈಸೂರಿನಲ್ಲಿ ಏ.30ರಂದು ನರೇಂದ್ರ ಮೋದಿ ಪ್ರಚಾರ: ಶಾಸಕ ಎಸ್‌ ಎ ರಾಮದಾಸ್‌

Date:

Advertisements
  • ಅರಮನೆ ನಗರಿಯಲ್ಲಿ ಮೋದಿ ಚುನಾವಣಾ ಪ್ರಚಾರ
  • ಮಹಾರಾಜ ಕಾಲೇಜು ಮೈದಾನದಿಂದ ಕಾರ್ಯಕ್ರಮ

ಮೈಸೂರಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಧಾನಮಂತ್ರಿ ನರೇಂದ್ರ ಮೋದಿ ಏಪ್ರಿಲ್ 30 ರಂದು ಪ್ರಚಾರ ನಡೆಸಲಿರುವುದಾಗಿ ಮಾಜಿ ಸಚಿವ ಎಸ್‌ ಎ ರಾಮದಾಸ್‌ ಹೇಳಿದರು.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರಾಮದಾಸ್‌, ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೃಹತ್ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಅಂದು  ದೆಹಲಿಯಿಂದ  ಹೊರಡುವ ನರೇಂದ್ರ ಮೋದಿ ನೇರವಾಗಿ ಮೈಸೂರಿನ ಮಹಾರಾಜ ಕಾಲೇಜ್ ಮೈದಾನಕ್ಕೆ ಆಗಮಿಸಲಿದ್ದಾರೆ. ಅವರನ್ನು ಮೈಸೂರಿನ ಪಾರಂಪರಿಕ ವಸ್ತುಗಳಾದ ವೀಳ್ಯದೆಲೆ, ಶ್ರೀ ಗಂಧದ ಕಡ್ಡಿ, ಮೈಸೂರು ಸಿಲ್ಕ್ ಬಟ್ಟೆ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗುವುದು ಎಂದರು.

Advertisements

ಬಳಿಕ ಮೋದಿಯವರು ಮುಡಾ ಕಚೇರಿ, ರಾಮಸ್ವಾಮಿ ಸರ್ಕಲ್, ಚಾಮರಾಜ ನೂರಡಿ ರಸ್ತೆ ಮಾರ್ಗವಾಗಿ ಗನ್ ಹೌಸ್ ಗೆ ಆಗಮಿಸಲಿದ್ದಾರೆ. ಸಂಜೆ 5.30 ಕ್ಕೆ ತೆರೆದ ವಾಹನದಲ್ಲಿ ರೋಡ್ ಶೋ ರ‍್ಯಾಲಿ ಪ್ರಾರಂಭಿಸಲಿದ್ದಾರೆ ಎಂದು ರಾಮದಾಸ್‌ ಹೇಳಿದರು.

ಈ ಸ್ಟೋರಿ ಓದಿದ್ದೀರಾ? :ಹಾಸನ | ಏ.29ರಂದು ಸಕಲೇಶಪುರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ರ‍್ಯಾಲಿ ಸಂಸ್ಕೃತ ಪಾಠಶಾಲೆ, ನಗರಪಾಲಿಕೆ, ಸಿಟಿ ಬಸ್ ಸ್ಟ್ಯಾಂಡ್, ಕೆ ಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್ ಎಂ ಸಿ, ಮಿಲಿಯನ್ ಸರ್ಕಲ್ ತನಕ ಸಾಗಲಿದ್ದು, ಇದರಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹಿರಿಯ ನಾಗರಿಕರು ನೋಡಲು ಅನುಕೂಲವಾಗುವಂತೆ ಐದು ಸ್ಥಳಗಳಲ್ಲಿ ಆಸನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಸುಮಾರು ನಾಲ್ಕು ಕಿಲೋಮೀಟರ್ ರ‍್ಯಾಲಿ ನಡೆಸಲಿರುವ ಮೋದಿಯವರು, ಮಿಲೇನಿಯಮ್ ಸರ್ಕಲ್‌ನಲ್ಲಿ ರ‍್ಯಾಲಿಯನ್ನು ಮುಕ್ತಾಯಗೊಳಿಸಲಿದ್ದಾರೆ.

ಅಲ್ಲಿಂದ ನೇರವಾಗಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರಲಿರುವ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X