ಬೆಂಗಳೂರು | ಕಾಫಿ ಶಾಪ್‌ ವಾಶ್‌ರೂಮ್‌ನಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡುತ್ತಿದ್ದ ಆರೋಪಿ ಬಂಧನ

Date:

Advertisements

ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಇರಿಸಿ, ಗೌಪ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿ.

ಬೆಂಗಳೂರಿನ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಶಾಫ್‌ನಲ್ಲಿ ಆರೋಪಿ ಮನೋಜ್ ಕೆಲಸ ಮಾಡುತ್ತಿದ್ದ. ಆತ ಕಾಫಿ ಶಾಫ್‌ನ ವಾಶ್‌ರೂಮ್‌ನಲ್ಲಿ ಮೊಬೈಲ್ ಇಟ್ಟು, ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ವಾಶ್‌ರೂಮ್‌ನ ಶೌಚಾಲಯದ ಡಸ್ಟ್ ಬಿನ್‌ನಲ್ಲಿ ಕಿಂಡಿ ಸೃಷ್ಟಿಸಿದ್ದ ಆರೋಪಿ, ಮೊಬೈಲ್ ಫೋನ್‌ನ ಕ್ಯಾಮರಾವನ್ನ ಶೌಚಾಲಯದ ಸೀಟ್‌ನತ್ತ ರೆಕಾರ್ಡಿಂಗ್ ಆನ್ ಮಾಡಿ ಇರಿಸಿದ್ದ. ಶಬ್ಧವಾದರೆ ಗೊತ್ತಾಗಬಹುದು ಎಂಬ ಕಾರಣಕ್ಕೆ ಫೋನ್​ನ್ನು ಫ್ಲೈಟ್ ​ಮೋಡ್​ನಲ್ಲಿರಿಸಿದ್ದ ಎಂದು ತಿಳಿದುಬಂದಿದೆ.

Advertisements

ಮಹಿಳೆಯೊಬ್ಬರು ವಾಶ್ ರೂಮ್‌ಗೆ ಹೋದಾಗ ಶೌಚಾಲಯದಲ್ಲಿ ಮೊಬೈಲ್ ಇರಿಸಿರುವುದು ಹಾಗೂ ಸುಮಾರು 2 ಗಂಟೆಗಳಷ್ಟು ವಿಡಿಯೋ ರೆಕಾರ್ಡಿಂಗ್ ಆಗಿರುವುದು ಪತ್ತೆಯಾಗಿತ್ತು. ತಕ್ಷಣವೇ ಆ ಮಹಿಳೆ ಕೆಫೆ ಸಿಬ್ಬಂದಿ ಹಾಗೂ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದು, ಕೆಫೆಯ ಸಿಬ್ಬಂದಿಯೇ ಮೊಬೈಲ್ ಇರಿಸಿರುವುದು ಪತ್ತೆಯಾಗಿದೆ. ತಕ್ಷಣವೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಘಟನೆಯ ಕುರಿತು ಕ್ಷಮೆಯಾಚಿಸಿರುವ ಥರ್ಡ್ ವೇವ್ ಕಾಫಿ ಕೆಫೆಯ ಆಡಳಿತ ಮಂಡಳಿ, ಗ್ರಾಹಕರ ಸುರಕ್ಷತೆ ಮತ್ತು ಕ್ಷೇಮ ನಮ್ಮ ಆದ್ಯತೆಯಾಗಿದೆ. ಆರೋಪಿತ ಸಿಬ್ಬಂದಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಲಾಗಿದೆ. ಆರೋಪಿ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಎಕ್ಸ್ ಪೋಸ್ಟ್​ನಲ್ಲಿ ಸ್ಪಷ್ಟಪಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X