ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಹಗರಣಗಳು ನಡೆದಿಲ್ಲ : ಸಚಿವ ಕೆ ಎನ್ ರಾಜಣ್ಣ

Date:

Advertisements

“ಬಿಜೆಪಿಯವರು ಅವರ ಪಕ್ಷದಲ್ಲಿ ನಾಯಕತ್ವ ನಿರೂಪಿಸಲು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ತುಮಕೂರಿನ ಗೃಹ ಕಚೇರಿಯಲ್ಲಿ ಈ ದಿನ. ಕಾಮ್‌ನ ಸಹಾಯವಾಣಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಹಗರಣಗಳು ನಡೆದಿಲ್ಲ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲೇ 25 ಹಗರಣಗಳು ನಡೆದಿವೆ. ಅದನ್ನು ಮಾಧ್ಯಮಗಳು ಕೂಡ ವರದಿ ಮಾಡಿದೆ. ಬಿಜೆಪಿಯ ನಾಯಕರು ಅವರ ಪಕ್ಷದಲ್ಲಿ ನಾಯಕತ್ವ ನಿರೂಪಿಸಿಕೊಳ್ಳಲು ವಿನಾಃಕಾರಣ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳಿಂದ ಅವರಿಗೆ ಯಾವುದೇ ರೀತಿಯ ಯಶಸ್ಸು ಸಿಗುವುದಿಲ್ಲ” ಎಂದು ಹೇಳಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿ ಎಂ ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಂದೆಯ ಹೆಸರು ಪ್ರಸ್ತಾಪ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ರಾಜಕಾರಣದಲ್ಲಿ ಯಾವಾಗಲೂ ತಾಳ್ಮೆಯ ರಾಜಕಾರಣ ಇರಬೇಕು. ಏಕವಚನದಲ್ಲಿ ಬೈಯ್ಯೋದು, ಮಾತಾಡೋದು. ಗಂಭೀರವೇ ಅಲ್ಲದ ವಿಷಯಗಳನ್ನು ವಿವಾದವನ್ನಾಗಿ ಮಾಡುವುದು ಸರಿಯಲ್ಲ. ವೈಯಕ್ತಿಕವಾಗಿ ಕುಟುಂಬ ಸದಸ್ಯರ ಹೆಸರುಗಳನ್ನ ಪ್ರಸ್ತಾಪ ಮಾಡುವುದು. ಇದು ಯಾವುದೇ ರಾಜಕಾರಣಿಗೆ ಭೂಷಣವಲ್ಲ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಟಾಂಗ್ ನೀಡಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X