ಒಂದೇ ಕ್ಲಿಕ್, ಬ್ಯಾಂಕ್‌ ಖಾತೆಯಲ್ಲಿದ್ದ ಬರೋಬ್ಬರಿ 12.70 ಲಕ್ಷ ರೂ. ಕಳೆದುಕೊಂಡ ಪ್ರಾಧ್ಯಾಪಕ!

Date:

Advertisements

ಒಂದೇ ಕ್ಲಿಕ್‌ನಲ್ಲಿ ಬ್ಯಾಂಕ್‌ ಖಾತೆಯಲ್ಲಿದ್ದ ಪ್ರಾಧ್ಯಾಪಕರೊಬ್ಬರು ಬರೋಬ್ಬರಿ 12.70 ಲಕ್ಷ ರೂ. ಕಳೆದುಕೊಂಡ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ.

ಇತ್ತೀಚೆಗೆ ಕರ್ನಾಟಕದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಮಿಷಗಳಿಗೆ ಒಳಗಾಗಿ ಹಣ ಕಳೆದುಕೊಳ್ಳುವವರ ಸಂಖ್ಯೆ ಅಧಿಕವಾಗುತ್ತಿದೆ. ಅದರಲ್ಲೂ ವಿದ್ಯಾವಂತರೇ ಹೆಚ್ಚಾಗಿ ಇಂತಹ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಈ ಪ್ರಾಧ್ಯಾಪಕರು ಕೂಡಾ ಹೆಚ್ಚು ಲಾಭ ಗಳಿಸುವ ಆಸೆಯಲ್ಲಿ ತಮ್ಮ ಉಳಿತಾಯವನ್ನು ಕಳೆದುಕೊಂಡಿದ್ದಾರೆ.

ಖಾಸಗಿ ಬ್ಯಾಂಕ್‌ ಒಂದರ ಆನ್‌ಲೈನ್ ಸೇವೆಯ ಲಿಂಕ್ ಹೆಸರಿನಲ್ಲಿ ಅಪರಿಚಿತ ವಾಟ್ಸಾಪ್ ಸಂಖ್ಯೆಯಿಂದ ಸಂದೇಶವೊಂದು ಬಂದಿದ್ದು ರಾಮನಗರದ ಪ್ರಾಧ್ಯಾಪಕರೊಬ್ಬರು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ಅತ್ಯಾಚಾರ, ವಂಚನೆ: ಶಿವಮೊಗ್ಗದ ಬಿಜೆಪಿ ಮಾಧ್ಯಮ ಪ್ರಮುಖ್ ಶರತ್ ವಿರುದ್ಧ ಪ್ರಕರಣ ದಾಖಲು

ಈ ಲಿಂಕ್ ಕ್ಲಿಕ್ ಮಾಡುತ್ತಿದ್ದಂತೆ ಬ್ಲಾಕ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಶೇಕಡ 5-6ರಷ್ಟು ಲಾಭ ಪಡೆಯಲು ಸಾಧ್ಯವಿದೆ ಎಂಬ ಸಂದೇಶ ಕಾಣಿಸಿಕೊಂಡಿದೆ. ಪ್ರಾಧ್ಯಾಪಕರು ಲಾಭ ಸಿಗುವ ನಿರೀಕ್ಷೆಯಲ್ಲಿ ಅರ್ಜಿ ಭರ್ತಿ ಮಾಡಿ ಅದರಲ್ಲಿ ತಮ್ಮ ಬ್ಯಾಂಕ್ ಖಾತೆ ವಿವರವನ್ನೂ ಸೇರಿಸಿದ್ದಾರೆ.

ಅದಾದ ಬಳಿಕ ವಂಚಕರು ಅಧಿಕ ಹೂಡಿಕೆ ಮಾಡಿದರೆ ಅಧಿಕ ಲಾಭ ಬರುತ್ತದೆ ಎಂದು ಹೇಳಿದ್ದು, ಪ್ರಾಧ್ಯಾಪಕರು ವಿವಿಧ ಬ್ಯಾಂಕ್ ಖಾತೆಗೆ ಜುಲೈ 4ರಿಂದ ಆಗಸ್ಟ್ 6ರವರೆಗೆ ಬರೋಬ್ಬರಿ 12,69,101 ರೂಪಾಯಿ ಹಣವನ್ನು ತಮ್ಮ ಬ್ಯಾಂಕ್ ಖಾತೆಯಿಂದ ಆನ್‌ಲೈನ್‌ ಮೂಲಕ ವರ್ಗಾಯಿಸಿದ್ದಾರೆ.

ಅದಾದ ಬಳಿಕ ಅಸಲು ಬಡ್ಡಿ ಎರಡೂ ಬರದಿದ್ದಾಗ ತಾನು ಮೋಸ ಹೋಗಿರುವುದು ಅರಿತ ಪ್ರಾಧ್ಯಾಪಕರು ರಾಮನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

  1. ಅದೆಲ್ಲ ಸೇರಿದರೆ ಎಷ್ಟು ಕ್ಲಿಕ್ ಆಗುತ್ತದೆ? ಯಾಕೆ ಒಂದೇ ಕ್ಲಿಕ್ ಎಂದು ಬೇರೆಯವರ ತಲೆ ಕೆಡಿಸುತ್ತಿದ್ದೀರ?

  2. ಬೆಸ್ಕಾಂ, ನೀರಿನ ಬಿಲ್ ಇತ್ಯಾದಿಗಳಿಗೇ ಹಣ ಕಟ್ಟುವಾಗ ಒಂದಲ್ಲಾ, ಎರಡು ಸಲ ಪರಿಶೀಲಿಸಿ ಕ್ಲಿಕ್ ಮಾಡುತ್ತೇವೆ.
    ಅತಿಯಾಸೆ ಗತಿಗೇಡು ಅಷ್ಟೇ!

  3. ಇಷ್ಟೊಂದು ಅಕ್ರಮಗಳು ನಡೆದರೂ ಯರನ್ನೂ ಯಾಕೆ ಬಂದಿಸುತ್ತಿಲ್ಲ, ಅವರ ಬ್ಯಾಂಕ್ ಖಾತೆಯಲ್ಲಿ, ಮೊಬೈಲ್ ದಾಖಲಾತಿಯಲ್ಲಿ ಮೋಸಗಾರರ ವಿವರ ಸಿಗುತ್ತದೆ ದಾಖಲಾತಿ ಇಲ್ಲದೆ ಮಾಡಿದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ, ಕ್ರೈಂ ಬ್ರಾಂಚ್ ಒಂದು waste body ಯೇ? ಅಂತ ಸಂಶಯ ಬರುತ್ತಿದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X