ಹಿಂಡನ್‌ಬರ್ಗ್ | ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದ ಕಂಗನಾ ರಣಾವತ್

Date:

Advertisements

ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಕೂಡಾ ಭಾಗಿಯಾಗಿರುವ ಬಗ್ಗೆ ಹಿಂಡನ್‌ಬರ್ಗ್ ವರದಿ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಂಸದೆ, ನಟಿ ಕಂಗನಾ ರಣಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ” ಎಂದು ಕಂಗನಾ ಹೇಳಿದ್ದಾರೆ.

ಹಿಂಡನ್‌ಬರ್ಗ್‌ನ ಹೊಸ ಸಂಶೋಧನಾ ವರದಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡುತ್ತಾ ರಾಹುಲ್ ಗಾಂಧಿಯತ್ತ ಬೊಟ್ಟು ಮಾಡಿರುವ ಕಂಗನಾ, “ರಾಹುಲ್ ಗಾಂಧಿ ಅತ್ಯಂತ ಅಪಾಯಕಾರಿ ವ್ಯಕ್ತಿ. ಕಹಿ, ವಿಷಕಾರಿ ಮತ್ತು ವಿನಾಶಕಾರಿ ವ್ಯಕ್ತಿಯಾಗಿದ್ದಾರೆ. ತಾನು ಪ್ರಧಾನಿಯಾಗಲು ಸಾಧ್ಯವಾಗದಿದ್ದರೆ ಈ ದೇಶವನ್ನೇ ನಾಶಪಡಿಸುವುದು ರಾಹುಲ್ ಗಾಂಧಿ ಅಜೆಂಡಾ” ಎಂದು ಆರೋಪಿಸಿದ್ದಾರೆ.

“ನಮ್ಮ ಷೇರು ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ರಾಹುಲ್ ಗಾಂಧಿ ಅನುಮೋದಿತ ಹಿಂಡನ್‌ಬರ್ಗ್ ವರದಿಯು ನಿನ್ನೆ ರಾತ್ರಿ ಟುಸ್ ಪಟಾಕಿಯಾಗಿದೆ. ಅವರು ಈ ರಾಷ್ಟ್ರದ ಭದ್ರತೆ ಮತ್ತು ಆರ್ಥಿಕತೆಯನ್ನು ಅಸ್ಥಿರಗೊಳಿಸಲು ಬೇಕಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಬಿಜೆಪಿ ಸಂಸದೆ ದೂರಿದ್ದಾರೆ.

Advertisements

ಇದನ್ನು ಓದಿದ್ದೀರಾ? ಹಿಂಡನ್‌ಬರ್ಗ್ | ಪತಿಯ ಬಾಲ್ಯದ ಸ್ನೇಹಿತನ ಫಂಡ್‌ನಲ್ಲಿ ಹೂಡಿಕೆ ಮಾಡಲಾಗಿದೆ, ಅದಾನಿಗಲ್ಲ: ಸೆಬಿ ಅಧ್ಯಕ್ಷೆ

“ರಾಹುಲ್ ಗಾಂಧಿ ನಿಮ್ಮ ಜೀವನದುದ್ದಕ್ಕೂ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿರಿ ಮತ್ತು ನೀವು ಅನುಭವಿಸುವ ರೀತಿಯಲ್ಲೇ ಈ ರಾಷ್ಟ್ರದ ಜನರ ವೈಭವ, ಬೆಳವಣಿಗೆ ಮತ್ತು ರಾಷ್ಟ್ರೀಯತೆಯನ್ನು ನೋಡಲು ಸಿದ್ಧರಾಗಿ. ಜನರು ನಿಮ್ಮನ್ನು ಎಂದಿಗೂ ತಮ್ಮ ನಾಯಕನನ್ನಾಗಿ ಮಾಡುವುದಿಲ್ಲ. ನೀವು ನಾಚಿಕೆಗೇಡಿನ ಮನುಷ್ಯ” ಎಂದು ಕಿಡಿಕಾರಿದ್ದಾರೆ.

ಆಗಸ್ಟ್ 10ರಂದು ರಾತ್ರಿ ಹಿಂಡನ್‌ಬರ್ಗ್ ಹೊಸದಾಗಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಅದಾನಿ ಗ್ರೂಪ್ ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್‌ ಭಾಗಿಯಾಗಿದ್ದಾರೆ. ಅವರೂ ಕೂಡಾ ಹೂಡಿಕೆ ಮಾಡಿದ್ದಾರೆ ಎಂದು ಈ ವರದಿಯು ಬಹಿರಂಗಪಡಿಸಿದೆ. ಆದರೆ ಸೆಬಿ ಅಧ್ಯಕ್ಷೆ ಇದು ಹಳೆಯ ಹೂಡಿಕೆ, ನಾನು ಸೆಬಿ ಅಧ್ಯಕ್ಷೆಯಾದ ಬಳಿಕ ಮಾಡಿರುವ ಹೂಡಿಕೆಯಲ್ಲ. ನನ್ನ ಪತಿಯ ಸ್ನೇಹಿತನ ಫಂಡ್‌ನಲ್ಲಿ ಮಾಡಿರುವ ಹೂಡಿಕೆ ಎಂದು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಳ್ಳರಿಗೆ ಲೂಟಿಕೋರರಿಗೆ ಅಪಾಯಕಾರಿ ವ್ಯಕ್ತಿ,,ಅಕ್ಕಾ ಸರಿಯಾಗಿದೆಯೇ ಹೇಳಿದ್ದಾರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X