ವಿವಿಧ ಬೇಡಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

Date:

Advertisements

2017ರ ವೃಂದ ಮತ್ತು ನೇಮಕಾತಿ ನಿಯಮಗಳು ಅದಕ್ಕಿಂತಲೂ ಮುಂಚೆ ನೇಮಕಾತಿಗೊಂಡಿರುವ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಕಾರ್ಯಾದೇಶ ಹೊರಡಿಸಿದೆ. ಅಲ್ಲದೆ ಮೂಲತಃ 1 ರಿಂದ 7 ಹಾಗೂ 8 ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಅಂತ ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಸರ್ಕಾರದ ಈ ಆದೇಶದಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಸೋಮವಾರ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳ ಶಿಕ್ಷಕರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಣ ಇಲಾಖೆಯ ಮೊರೆ ಹೋಗಿದ್ದರು. ಸಚಿವರ ಭೇಟಿಯಿಂದಲೂ ನಿರಾಸೆ ಉಂಟಾಗಿದ್ದರಿಂದ ಇದೀಗ ಬೀದಿಗಿಳಿಯಲು ನಿರ್ಧರಿಸಿದ್ದೇವೆ ಎಂದು ಹೋರಾಟ ನಿರತ ಶಿಕ್ಷಕರು ಹೇಳಿದರು.

ಪ್ರಮುಖ ಬೇಡಿಕೆಗಳು : 2016 ಕ್ಕಿಂತ ಮುಂಚೆ ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು. ಈ ಮೊದಲಿದ್ದ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮುಂಚೆ ನೇಮಕಾತಿ ಹೊಂದಿದ ಹಾಗೂ ಬಿ.ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಬಡ್ತಿಗೆ ಪರಿಗಣಿಸಬೇಕು. ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೆ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿದೆ.

Advertisements

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್‌ ಕುಮಾರ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮ ಮೊಗವೀರ, ಕೋಶಾಧಿಕಾರಿ ಶ್ರೀನಾಥ ಜಿ.ಪೂಜಾರಿ ಗೌರವಾಧ್ಯಕ್ಷೆ ಸುಜಾತ ಶೆಟ್ಟಿ, ಉಪಾಧ್ಯಕ್ಷೆ ಶಶಿಧರ ಶೆಟ್ಟಿ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

Download Eedina App Android / iOS

X