ರಾಯಚೂರು | ಕುಸ್ತಿಪಟುಗಳ ಹೋರಾಟಕ್ಕೆ ಎಐಡಿವೈಒ ಬೆಂಬಲ

Date:

Advertisements
  • ದೆಹಲಿಯಲ್ಲಿ ಲೈಂಗಿಕ ದೌರ್ಜನ್ಯ ವಿರುದ್ಧ ಐದು ದಿನಗಳಿಂದ ಧರಣಿ
  • ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ, ಆರೋಪಿಗಳ ಬಂಧಿಸಿಲ್ಲ

ಕ್ರೀಡಾಕ್ಷೇತ್ರದಲ್ಲಿನ ಲೈಂಗಿಕ ದೌರ್ಜನ್ಯ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕ್ರೀಡಾಪಟುಗಳು ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಯುವ ಸಂಘಟನೆಯಾದ ಎಐಡಿವೈಒ ಬೆಂಬಲಿಸಿದ್ದು, ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ.

“ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಕೆಲವು ತರಬೇತುದಾರರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಅಲ್ಲದೇ, ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿಲ್ಲ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ರಾಯಚೂರು ಜಿಲ್ಲಾ ಸಮಿತಿ ಸದಸ್ಯ ವಿನೋದ್‌ ಕುಮಾರ್‌ ಮಾತನಾಡಿ, “ಕೇಂದ್ರದ ಆಡಳಿತರೂಢ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್‌ ಪ್ರಭಾವಕ್ಕೆ ಪೊಲೀಸರು ಮಣಿದಿದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ. ವಿಶ್ವ ಚಾಂಪಿಯನ್‌ಶಿಪ್‌, ಒಲಂಪಿಕ್ಸ್ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕ ಗಳಿಸಿರುವ ಈ ಕುಸ್ತಿಪಟುಗಳು ನೀಡಿರುವ ದೂರು ಮತ್ತು ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ” ಎಂದು ಅಕ್ರೋಶ ವ್ಯಕ್ತಪಡಿಸಿದರು.

Advertisements

“ದೂರು ನೀಡಿರುವ ಏಳು ಸಂತ್ರಸ್ತೆಯರಲ್ಲಿ ಒಬ್ಬ ಬಾಲಕಿಯು ಇದ್ದಾಳೆ. ಅಲ್ಲದೆ, ಈ ಪ್ರಕರಣ ಪೋಕ್ಸೋ ಕಾಯ್ದೆ ಅಡಿಯಲ್ಲಿ ಬರುತ್ತದೆ. ಇಷ್ಟಾದರೂ ಪೊಲೀಸರು ಕ್ರಮ ಕೈಗೊಳ್ಳದಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಹಿಂದೆ ಈ ಪ್ರಕರಣದ ತನಿಖೆ ನಡೆಸಿದ ಮೇರಿಕೋಂ ಸಮಿತಿಯ ವರದಿಯನ್ನು ಕ್ರೀಡಾ ಇಲಾಖೆ ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ” ಎಂದು ಆರೋಪಿಸಿದರು.

ಚನ್ನಬಸವ ಜಾನೇಕಲ್‌ ಮಾತಾನಾಡಿ, “ಬೇಟಿ ಬಚಾವೋ ಬೇಟಿ ಪಡಾವೋ ಎಂದು ಘೋಷಣೆ ನೀಡಿರುವ ಸರ್ಕಾರವು ಕ್ರೀಡೆಯಲ್ಲಿ ಹೆಣ್ಣು ಮಕ್ಕಳ ಸಾಧನೆಗೆ ಪೂರಕವಾಗಿ ಸುರಕ್ಷಿತ ವಾತಾವರಣ ಸೃಷ್ಟಿಸಿ ಕೊಡುವುದು ತನ್ನ ಆದ್ಯ ಕರ್ತವ್ಯ, ಆದರೆ ಕುಸ್ತಿಪಟುಗಳು ಎರಡು ಬಾರಿ ರಸ್ತೆಗಳಿದು ಧರಣಿ ನಡೆಸಿದರೂ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಆಳುವವರ ಈ ಧೊರಣೆಯು ಮಹಿಳೆಯರ ಬಗ್ಗೆ ತಮಗಿರುವ ತಾತ್ಸಾರದ ಭಾವನೆಯನ್ನು ತೋರುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಲೈಂಗಿಕ ದೌರ್ಜನ್ಯದ ವಿರುದ್ದ ಪ್ರತಿಭಟಿಸಿದರೆ ದೇಶದ ವರ್ಚಸ್ಸು ಹಾಳಾಗುತ್ತದೆಯೇ!

“ಇಂಥ ಘಟನೆಗಳಿಂದ ಕ್ರೀಡಾಂಗದಲ್ಲಿ ಹೆಣ್ಣು ಮಕ್ಕಳ ಸಾಧನೆ ಹಿಂದೆ ಬೀಳುತ್ತದೆ. ಇಂತಹ ಅನ್ಯಾಯದ ವಿರುದ್ಧ ಧರಣಿ ನಡೆಸುತ್ತಿರುವ ಕುಸ್ತಿಪಟುಗಳ ಜೊತೆಯಲ್ಲಿ ನಮ್ಮ ಸಂಘಟನೆ ಆಲ್ ಇಂಡಿಯಾ ಡೆಮಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ಇದನ್ನು ಖಂಡಿಸುತ್ತದೆ” ಎಂದು ಕಿಡಿಕಾರಿದ್ದಾರೆ.

“ದೇಶದಾದ್ಯಂತ ಕುಸ್ತಿಪಟುಗಳ ಹೋರಾಟವನ್ನು ಬೆಂಬಲಿಸಲು ಪ್ರತಿಭಟನಾ ದಿನವನ್ನು ನಡೆಸಲಾಗುತ್ತಿದೆ. ಸರ್ಕಾರವು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಪರಾಧಿಗಳಿಗೆ ಶಿಕ್ಷೆ ನೀಡಿ ಹೆಣ್ಣು ಮಕ್ಕಳು ಧೈರ್ಯದಿಂದ ಕ್ರೀಡಾ ಸಾಧನೆಯನ್ನು ನಿರ್ಮಿಸುವಂತೆ ಮಾಡಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ, ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್, ಜಿಲ್ಲಾ ಕಾರ್ಯದರ್ಶಿ ಯಲ್ಲಪ್ಪ ಹಾಗೂ ಇತರರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X