ರಾಯಚೂರು | ಶಿಕ್ಷಕಿ ಜೊತೆ ಅನುಚಿತ ವರ್ತನೆ : ಆದರ್ಶ ಶಾಲೆಯ ಶಿಕ್ಷಕ ಅಮಾನತು

Date:

Advertisements

ತರಬೇತಿಗೆ ಆಗಮಿಸಿದ ಶಿಕ್ಷಕಿ ಜೊತೆಗೆ ಅನುಚಿತವಾಗಿ ವರ್ತಿಸಿದ ರಾಯಚೂರು ಸಮೀಪದ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ಮೆಹಬೂಬ್ ಅಲಿ ಅವರನ್ನು ಅಮಾನತು ಮಾಡಲಾಗಿದೆ.

ಆರೋಪಿ ಶಿಕ್ಷಕ ಮೆಹಬೂಬ್‌ ಅಲಿ ಶಿಕ್ಷಕಿಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ. ಇದರಿಂದ ಶಿಕ್ಷಕಿಯ ಸಂಬಂಧಿಕರು ಸೋಮವಾರ ಶಾಲೆಗೆ ತೆರಳಿ ಶಿಕ್ಷಕನಿಗೆ ಬಟ್ಟೆ ಹರಿದು ಹೋಗುವಂತೆ ಥಳಿಸಿ, ಕಾಲಿಗೆ ಬೀಳಿಸಿ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಶಿಕ್ಷಕ ಶಿಕ್ಷಕಿ ಕಾಲಿಗೆ ಬಿದ್ದಿರುವ ವಿಡಿಯೋ ವೈರಲ್ ಆಗಿತ್ತು.

ಶಿಕ್ಷಕನ ಕಿರುಕುಳಕ್ಕೆ ಒಳಗಾದ ಶಿಕ್ಷಕಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದರು. ದೂರಿನ್ವಯ ಪರಿಶೀಲನೆ ನಡೆಸಿದ ಬಿಇಒ ಶಿಕ್ಷಕನ ತಪ್ಪೊಪ್ಪಿಗೆ ಪತ್ರ ಉಲ್ಲೇಖಿಸಿ ಅಮಾನತಿಗೆ ಶಿಫಾರಸು ಮಾಡಿದರು.

Advertisements

ಬಿಇಒ ನೀಡಿದ ವರದಿಯನ್ನು ಆಧರಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಡಿ.ಬಡಿಗೇರ್ ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣಕ್ಕೆ ಬರುವಂತೆ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X