ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ನೇಮಕ

Date:

Advertisements

ಮಾಜಿ ಶಾಸಕಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಸೌಮ್ಯ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವಧಿ ಲೋಕಸಭೆ ಚುನಾವಣೆಗೂ ಮುನ್ನವೇ ಮುಗಿದಿದ್ದು ಈಗ ಈ ಸ್ಥಾನಕ್ಕೆ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಪುಷ್ಪಾ ಅಮರನಾಥ್‌ ಸದ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯಮಟ್ಟದ ಸಮಿತಿಯ ಉಪಾಧ್ಯಕ್ಷೆಯಾಗಿದ್ದಾರೆ.

Advertisements

ಜಯನಗರ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಸೌಮ್ಯ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ವಿರುದ್ಧ ಪರಾಭವಗೊಂಡಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X