ಒಲಿಂಪಿಕ್ಸ್‌ | ಚಿನ್ನ ಗೆದ್ದ ಪಾಕ್‌ನ ಅರ್ಷದ್ ನದೀಮ್‌ಗೆ ಒಂದು ಕೋಟಿ ರೂ ಮತ್ತು ಕಾರು ಬಹುಮಾನ

Date:

Advertisements

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಸಾಧನೆ ಮಾಡಿದ ಅರ್ಷದ್ ನದೀಮ್ ಅವರಿಗೆ ಸರ್ಕಾರ ಒಂದು ಕೋಟಿ ರೂಪಾಯಿ ನಗದು ಬಹುಮಾನ ಮತ್ತು ಹೊಸ ಕಾರನ್ನು ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಪಾಕ್‌ನ ಪಂಜಾಬ್ ಮುಖ್ಯಮಂತ್ರಿ ಮರ್ಯಮ್ ನವಾಜ್ ಅವರು ಮಿಯಾನ್ ಚುನ್ನುನಲ್ಲಿರುವ ನದೀಮ್ ಅವರ ಗ್ರಾಮಕ್ಕೆ ಖುದ್ದು ತೆರಳಿ ಅರ್ಷದ್ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದರು. ಭೇಟಿಯ ಸಮಯದಲ್ಲಿ, ಅವರು ನಗದು ಬಹುಮಾನ ಮತ್ತು ಹೊಸ ಕಾರಿನ ಕೀಗಳನ್ನು ಹಸ್ತಾಂತರಿಸಿದರು.

Advertisements

ಇದನ್ನು ಓದಿದ್ದೀರಾ? ಒಲಿಂಪಿಕ್ಸ್ | ಪುರುಷರ ಜಾವೆಲಿನ್ ಥ್ರೋ: ಪಾಕ್‌‌ನ ನದೀಮ್‌ಗೆ ಚಿನ್ನ, ಭಾರತದ ನೀರಜ್‌ಗೆ ಬೆಳ್ಳಿ

ಹಾಗೆಯೇ ನದೀಮ್ ಸಾಧನೆಯನ್ನು ಶ್ಲಾಘಿಸಿದ ಮರ್ಯಮ್ ನವಾಜ್, “ಅರ್ಷದ್ ಅವರು ಈ ಎಲ್ಲ ಬಹುಮಾನವನ್ನು ಪಡೆಯಲು ಅರ್ಹರಾಗಿದ್ದಾರೆ. ಏಕೆಂದರೆ ರಾಷ್ಟ್ರಕ್ಕೆ ತುಂಬಾ ಸಂತೋಷ ಮತ್ತು ಹೆಮ್ಮೆ ತಂದಿದ್ದಾರೆ” ಎಂದು ಹೇಳಿದ್ದಾರೆ.

ಇನ್ನು ಕಾರಿನ ನಂಬರ್ ಪ್ಲೇಟ್ ನಂಬರ್ 92.97 ಆಗಿದೆ. ಇದು ಅವರ ಪ್ಯಾರಿಸ್ ಒಲಿಂಪಿಕ್ಸ್ ರೆಕಾರ್ಡ್ ಆಗಿದೆ. ಲಾಹೋರ್‌ಗೆ ಹಿಂದಿರುಗುವ ಮುನ್ನ ನದೀಮ್ ಕೋಚ್ ಸಲ್ಮಾನ್ ಇಕ್ಬಾಲ್ ಬಟ್ ಅವರಿಗೆ ಸಿಎಂ 50 ಲಕ್ಷ ರೂಪಾಯಿ ಚೆಕ್ ನೀಡಿದರು.

ಪುರುಷರ ಜಾವೆಲಿನ್ ಥ್ರೋ ಫೈನಲ್‌ನಲ್ಲಿ, ನದೀಮ್ 92.97 ಮೀಟರ್ ಎಸೆದು ಒಲಂಪಿಕ್ ಚಿನ್ನದ ಪದಕವನ್ನು ಗಳಿಸಿದ ಪಾಕಿಸ್ತಾನದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಎಂಬ ಇತಿಹಾಸವನ್ನು ನಿರ್ಮಿಸಿದರು. ಹಾಲಿ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಅತ್ಯುತ್ತಮ ಪ್ರದರ್ಶನ ನೀಡಿದ್ದು 89.45 ಮೀ ಎಸೆದು ಬೆಳ್ಳಿ ಪದಕವನ್ನು ಪಡೆದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X