ವಿಜಯಪುರ | ವಕೀಲನ ಸಾವು ಅಪಘಾತವಲ್ಲ, ಹತ್ಯೆ: ಎಸ್‌ಪಿ ಋಷಿಕೇಶ್‌ ಸೋನಾವಾಣೆ

Date:

Advertisements

ವಿಜಯಪುರ ನಗರದಲ್ಲಿ ಆಗಸ್ಟ್ 8ರಂದು ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ್ದದ್ದಲ್ಲ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಹತ್ಯೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಐವರನ್ನು ಬಂಧಿಸಿರುವ ಪೊಲೀಸರು, ತಲೆ ಮರೆಸಿಕೊಂಡಿರುವ ಇತರರ ಪತ್ತೆಗೆ ಜಾಲ ಬೀಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್‌ ಸೋನಾವಾಣೆ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಎ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನಗರದಲ್ಲಿ ಆಗಸ್ಟ್‌ 8ರಂದು ಸಂಜೆ 5-30ರ ಸುಮಾರಿಗೆ ನಡೆದಿದ್ದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿ ಸಿಲುಕಿ ಸುಮಾರು ಎರಡೂವರೆ ಕಿಮೀ ದೂರಕ್ಕೆ ಎಳೆದೊಯ್ದ ಘಟನೆಯಲ್ಲಿ ನಗರದ ಯುವವಕೀಲ ರವಿ ಮೇಲಿನಕೇರಿ ಮೃತಪಟ್ಟಿದ್ದ” ಎಂದು ತಿಳಿಸಿದರು.

“ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಇದು ಅಪಘಾತದಿಂದ ಆಗಿರುವ ಸಾವಲ್ಲ, ಬೆಚ್ಚಿಬೀಳುವಂತ ಸಂಚು ರೂಪಿಸಿ ಹತ್ಯೆ ನಡೆಸಿದ್ದಾರೆಂಬುದು ತಿಳಿದುಬಂದಿದೆ. ಪ್ರಕರಣಕ್ಕೆ ಕುರಿತಂತೆ ಲಭ್ಯವಾದ ಸುಳಿವುಗಳನ್ನು ಆಧರಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ” ಎಂದರು.

Advertisements

“ಬಂಧಿತರನ್ನು ತುಳಸಿರಾಮ ಹರಿಜನ, ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಎಲ್ಲರೂ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದಾರೆ. ಎಲ್ಲರ ಮೇಲೂ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹತ್ಯೆ, ಹತ್ಯೆ ಯತ್ನ, ದರೋಡೆ, ಜೀವ ಬೆದರಿಕೆಯಂಥ ಪ್ರಕರಣ ದಾಖಲಾಗಿವೆ.

“ಬಂಧಿತ ಆರೋಪಿಗಳು ಇತರರೊಂದಿಗೆ ಸೇರಿ ವಕೀಲ ರವಿ ಕೋರ್ಟ್‌ ನಿಂದ ಮನೆಗೆ ಹೊರಟಿದ್ದಾಗ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ವಾಹನದಲ್ಲಿ ಬಂದು ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ಬಳಿಕ ಸುಮಾರು ಎರಡೂವರೆ ಕಿ.ಮೀ. ವರೆಗೆ ರವಿಯನ್ನು ರಸ್ತೆಯಲ್ಲೇ ಎಳೆದೊಯ್ದ ಕಾರಣ ರವಿ ಸ್ಥಳದಲ್ಲೇ ಮೃತಪಟ್ಟಿದ್ದ” ಎಂದು ಮಾಹಿತಿ ನೀಡಿದರು.

“ವಕೀಲ ರವಿ ತನ್ನ ಸಹೋದರರ ಜೊತೆ ಸೇರಿ ಸುಮಾರು 4-5 ತಿಂಗಳ ಹಿಂದೆ ತುಳಸಿರಾಮ ಹರಿಜನ ಎಂಬವನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದಲ್ಲದೇ ಸುಮಾರು 20 ದಿನಗಳ ಹಿಂದೆ ಇದೇ ಅಲೆಕ್ಸ್ ಗೊಲ್ಲರ ಎಂಬವನನ್ನು ಅಪಹರಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದ. ಇದರಿಂದ ದ್ವೇಷ ಸಾಧಿಸುತ್ತಿದ್ದ ಈ ಹತ್ಯೆ ಸಂಚಿನ ಸೂತ್ರದಾರ ತುಳಸಿರಾಮ. ತನ್ನ ಸ್ನೇಹಿತರಾದ ಪ್ರಕರಣದ ಬಂಧಿತ ಆರೋಪಿಗಳೊಂದಿಗೆ ಸೇರಿ ಅಪಘಾತ ಎಂಬಂತೆ ಬಿಂಬಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ” ಎಂದು ಎಸ್‌ಪಿ ವಿವರಿಸಿದರು.

“ಹತ್ಯೆಗೆ ಬಳಸಿರುವ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರು ಕೂಡ ಜೂಜಾಟದಲ್ಲಿ 1 ಲಕ್ಷ ರೂ.ಗೆ ಸಚಿನ್ ಎಂಬವನಿಂದ ಆರೋಪಿಗಳು ಕಿತ್ತುಕೊಂಡಿದ್ದ ಕಾರು ಎಂಬುದು ಪತ್ತೆಯಾಗಿದೆ. ಇದಲ್ಲದೇ ವಕೀಲ ರವಿ ಕೋರ್ಟ್‍ನಿಂದ ಮನೆಗೆ ಮರಳುವ ಕುರಿತು ನಿಗಾ ಇರಿಸಿ ಮಾಹಿತಿ ನೀಡಲು ಇಬ್ಬರು ಬೈಕ್‍ನಲ್ಲಿ ತಿರುಗುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಹೊರಬಿದ್ದಿದೆ.
ಪ್ರಾಥಮಿಕ ಹಂತದ ತನಿಖೆಯಲ್ಲಿ ಇಡೀ ಪ್ರಕರಣದಲ್ಲಿ ಇನ್ನೂ ಕೆಲವರು ಈ ಸಂಚಿನಲ್ಲಿ ಪಾಲ್ಗೊಂಡಿರುವ ಮಾಹಿತಿ ಇದೆ. ಅವರೆಲ್ಲ ತಲೆ ಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವನ್ನು ತ್ವರಿತವಾಗಿ ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಸತ್ತ ಮೇಲೆ ದೇಹವನ್ನು ಮಣ್ಣು ಮಾಡುವ ಬದಲು ದಾನ ಮಾಡಿ: ಶ್ರೀಧರ್

“ಹೀಗಾಗಿ ಡಿಎಸ್‌ಪಿ ಬಸವರಾಜ ಎಲಿಗಾರ ನೇತೃತ್ವದಲ್ಲಿದ್ದ ಗೋಲಗುಂಬಜ್ ಸಿಪಿಐ ಮಹಾಂತೇಶ ಮಠಪತಿ, ಗಾಂಧಿಚೌಕ ಠಾಣೆ ಸಿಪಿಐ ಪ್ರದೀಪ ತಳಕೇರಿ ಹಾಗೂ ತಂಡದ ಪೊಲೀಸರ ಕಾರ್ಯಕ್ಕೆ ಬಹುಮಾನ ಘೋಷಿಸಲಾಗಿದೆ. ಸ್ವಾತಂತ್ರ್ಯೋತ್ಸವ ದಿನದಂದು ನಡೆಯುವ ಪರೇಡ್ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವುದು” ಎಂದು ಹೇಳಿದರು.

ಎಎಸ್‌ಪಿ ಶಂಕರ ಮಾರಿಹಾಳ, ಡಿಎಸ್‌ಪಿ ಬಸವರಾಜ ಎಲಿಗಾರ, ಸಿಪಿಐ ಪ್ರದೀಪ ತಳಕೇರಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X