ಯುವ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧದ ಪ್ರಕರಣ: ತನಿಖೆಗೆ ಮಧ್ಯಂತರ ತಡೆ ನೀಡಲು ಗುವಾಹಟಿ ಹೈಕೋರ್ಟ್ ನಕಾರ

Date:

Advertisements
  • ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ಘನತೆಗೆ ಧಕ್ಕೆ ಪ್ರಕರಣ
  • ನ್ಯಾ. ಅಜಿತ್ ಬೋರ್ತಕೂರ್ ಏಕಸದಸ್ಯ ಪೀಠದಿಂದ ವಿಚಾರಣೆ

ಅಸ್ಸಾಂ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶಿವಮೊಗ್ಗದ ಶ್ರೀನಿವಾಸ್‌ ಬಿ.ವಿ ಅವರ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲು ಗುವಾಹಟಿ ಹೈಕೋರ್ಟ್‌ ನಿರಾಕರಿಸಿದೆ.

“ಶ್ರೀನಿವಾಸ್‌ ಅವರು ಅಶ್ಲೀಲ ಮಾತುಗಳಿಂದ ನನಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್‌ ಹಿರಿಯ ನಾಯಕರಿಗೆ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆಂದು ಎಚ್ಚರಿಕೆ ನೀಡಿದ್ದಾರೆ” ಎಂದು ಆರೋಪಿಸಿ ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ದೂರು ದಾಖಲಿಸಿದ್ದರು.

ಅವರ ಆರೋಪವನ್ನು ತಳ್ಳಿಹಾಕಿದ್ದ ಶ್ರೀನಿವಾಸ್, “ಕೆಲವರು ರಾಜಕೀಯ ಕಾರಣಕ್ಕೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಖುದ್ದು ಹಾಜರಾಗುವಂತೆ ನೋಟಿಸ್‌ ನೀಡಿದ್ದು, ತನಿಖೆಗೆ ಮಧ್ಯಂತರ ತಡೆ ನೀಡಬೇಕು” ಎಂದು ಕೋರಿ ಗುಹವಾಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? : ಹಿರಿಯೂರು ಕ್ಷೇತ್ರ | ಮೈಮರೆತ ಕಾಂಗ್ರೆಸ್‌, ಎಚ್ಚೆತ್ತ ಬಿಜೆಪಿ, ಚಿಗುರಿದ ಜೆಡಿಎಸ್

ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಿತ್ ಬೋರ್ತಕೂರ್ ಏಕಸದಸ್ಯ ಪೀಠ, ”ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ದಾಖಲಾದ ಕೇಸ್‌ ಡೈರಿ ಮತ್ತು ಸಂತ್ರಸ್ತೆಯ ಹೇಳಿಕೆಯನ್ನು ಪರಿಶೀಲಿಸಿದ ನಂತರವೇ ಮಧ್ಯಂತರ ತಡೆ ಮನವಿಯನ್ನು ಪರಿಗಣಿಸಲಾಗುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಶ್ರೀನಿವಾಸ್ ಪರ ಹಿರಿಯ ನ್ಯಾಯವಾದಿ ಕೆ.ಎನ್ ಚೌಧರಿ ವಾದ ಮಂಡಿಸಿದರೆ, ಅಸ್ಸಾಂ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಡಿ ಸೈಕಿಯಾ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಎಂ ಫುಕನ್ ವಾದ ಮಂಡಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X