ಕೋಲಾರ | ದಬ್ಬಾಳಿಕೆಯ ಪಿಡುಗನ್ನು ಹೋಗಲಾಡಿಸಬೇಕಿದೆ : ಎಂಎಲ್‌ಸಿ ನಾಗರಾಜ್ ಯಾದವ್

Date:

Advertisements

ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆಯಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಹೇಳಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ಒಂದು ಕಡೆ ಶೋಷಣೆ, ಮತ್ತೊಂದು ಕಡೆ ಭ್ರಷ್ಟಾಚಾರ, ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ. ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ. ಇದು ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗಲಿದೆ ಎಂದರು.

Advertisements
gfgc̄

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ. ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ. ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ. ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ. ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದೊಂದಿಗೆ ಚರ್ಚಿಸಿ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ. ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ. ಡಾ.ಶಂಕರಪ್ಪನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ. ಮುಂದೆ ಅವರು ಬರವಣಿಗೆಗೆ ಹೆಚ್ಚಿನ ಸಮಯ ಕೊಡಲಿದ್ದಾರೆ. ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದು ಬೇಡಿಕೆಯಿಟ್ಟರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು. ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕೆಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ. ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು. ಇವು ಮನುಷ್ಯನ ವಿಕಸನಕ್ಕೆ ನಾಲ್ಕು ಪ್ರಮುಖ ಅಂಶಗಳಾಗಿವೆ ಎಂದರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಕಾರಿನ ಗಾಜು ಹೊಡೆದು 2 ಲಕ್ಷ ರೂ. ದೋಚಿದ ಕಳ್ಳ ; ಸಿಸಿಟಿವಿಯಲ್ಲಿ ಕಳ್ಳನ ಕೈಚಳಕ ಸೆರೆ

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್, ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಶಿವಚಿತ್ತಪ್ಪ, ಸಮಾಜ ಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X