ರಾಮನಗರ | ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

Date:

Advertisements

ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ಕಗ್ಗಲೀಪುರ ವೃತ್ತ ರೈತ ನಿಯೋಗ ರೈತರ ಜ್ವಲಂತ ಸಮಸ್ಯೆಗಳಾದ ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳ, ಪೋಡಿ ಸಮಸ್ಯೆ ಹಾಗೂ ಇನ್ನಿತರ ರೈತರ ತೊಡಕುಗಳ ಬಗ್ಗೆ ವಿಧಾನಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಹಾಗೂ ಯಶವಂತಪುರ ಶಾಸಕರಾದ ಸೋಮಶೇಖರ್ ಜೊತೆ ಸಭೆ ಸೇರಿ ಚರ್ಚಿಸಲಾಯಿತು.

ಸಾಕಷ್ಟು ವರ್ಷಗಳಿಂದ ರೈತರು ಸಮಸ್ಯೆ ಅನುಭವಿಸುತ್ತಾ ಬಂದಿದ್ದು ಕಾನೂನಾತ್ಮಕ ನೆಲೆಯಲ್ಲಿ ಪರಿಹಾರ ಒದಗಿಸುವ ಬಗ್ಗೆ ಮಾತನಾಡಿದ ಸಂತೋಷ್ ಹೆಗ್ಡೆಯವರು ವಿಧಾನಸೌಧಕ್ಕೆ ಬರಬಾರದು ಎಂಬ ತಮ್ಮ ಸಂಕಲ್ಪ ಮುರಿದು ರೈತಪರ ಕಾಳಜಿಯಿಂದ ವಿಧಾನಸೌಧಕ್ಕೆ ಕಾಲಿರಿಸಿದ್ದೇನೆ. ರೈತರನ್ನು ಹಿಂಸಿಸುವುದು ಸರಿಯಲ್ಲ. ಕಾನೂನಿನಲ್ಲಿ ರೈತರಿಗೆ ಅವಕಾಶವಿದೆ. ಉಳ್ಳವರಿಗೆ ಪರಿಹಾರ ಒದಗಿಸಿ ರೈತರನ್ನು ಶೋಷಿಸುತ್ತಿರುವುದು ಸರಿಯಲ್ಲ. ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

1001329733

ಪೋಡಿ ಸಮಸ್ಯೆ, ರೈತರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ, ಸೋಮನಹಳ್ಳಿ ಗೇಟ್ ಟೋಲ್ ಹಾಗೂ ರೈತರ ಇನ್ನಿತರ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕನಕಪುರದಲ್ಲಿ ಸಂತೋಷ್ ಹೆಗ್ಡೆಯವರ ಮುಂದಾಳತ್ವದಲ್ಲಿ ನಾಲ್ಕು ಸಾವಿರ ರೈತರು ಸೇರಿ ಬೃಹತ್ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಯಶವಂತಪುರದ ಶಾಸಕರಾದ ಸೋಮಶೇಖರ್ ಸ್ಪಂದಿಸಿ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಜೊತೆಗೆ ರೈತರ ನಿಯೋಗ ಚರ್ಚಿಸಲು ಸಮಯ ನಿಗದಿ ಪಡಿಸಿದ್ದರು.

Advertisements

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, “ಸುಪ್ರೀಂ ಕೋರ್ಟ್ ಮಾರ್ಗಸೂಚಿ ಹಾಗೂ ಇನ್ನಿತರ ಕಾನೂನಾತ್ಮಕ ತೊಡಕುಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಎರಡು ತಿಂಗಳ ಕಾಲಾವಕಾಶ ಕೇಳಿ, ರೈತರ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲು ಸರಕಾರ ಬದ್ದವಾಗಿದೆ” ಎಂದರು.

ಯಶವಂತಪುರ ಕ್ಷೇತ್ರದ ಶಾಸಕರಾದ ಸೋಮಶೇಖರ್ ಕೂಡ ಸಮಸ್ಯೆಗಳ ಪರಿಹಾರ ಒದಗಿಸಲು ಮುಖ್ಯಮಂತ್ರಿಯವರ ಬಳಿ ಮಾತನಾಡುತ್ತೇನೆ ಎಂದು ಗಮನಾರ್ಹವಾಗಿ ಸ್ಪಂದಿಸಿದರು. .

ವಿಧಾನ ಪರಿಷತ್ ಸದಸ್ಯರಾದ ಮೋಹನ್ ಕೊಂಡಾಜಿ ಸಹ ರೈತರ ಜೊತೆಗೂಡಿದ್ದರು. ಜೊತೆಗೆ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರರಾದ ಕುಮಾರಸ್ವಾಮಿ, ರೈತ ಮುಖಂಡ ನದೀಂಪಾಷ, ಕೆ ಆರ್ ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ, ವೆಂಕಟೇಶ್ , ಶೀನಿವಾಸ್, ಕಾಣಿಕ್, ನಾಗಭೂಷಣ ರೆಡ್ಡಿ, ಮಂಜಣ್ಣ , ಹಾಗೂ ಮುಂತಾದ ರೈತ ಮುಖಂಡರು ಉಪಸ್ಥಿತರಿದ್ದರು.

IMG 20240814 WA2202
1001329732
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X