ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯ ನ್ಯಾಯಕ್ಕೆ ಆಗ್ರಹಿಸಿ ಆ.17ಕ್ಕೆ ಬಂದ್‌ಗೆ ಕರೆ ನೀಡಿದ ಭಾರತೀಯ ವೈದ್ಯಕೀಯ ಸಂಘ

Date:

Advertisements

ಅತ್ಯಾಚಾರ ಹಾಗೂ ಕೊಲೆಯಾದ ಕೋಲ್ಕತ್ತಾದ ಟ್ರೈನಿ ವೈದ್ಯೆಗೆ ನ್ಯಾಯ ದೊರಕಿಸಬೇಕೆಂಬ ಪ್ರತಿಭಟನೆಯನ್ನು ಬೆಂಬಲಿಸಿ ಭಾರತೀಯ ವೈದ್ಯಕೀಯ ಸಂಘ ಆಗಸ್ಟ್‌ 17 ರಂದು ತುರ್ತು ಸೇವೆಗಳನ್ನು ಹೊರತುಪಡಿಸಿ ದೇಶಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವ 24 ಗಂಟೆಗಳ ಬಂದ್‌ಗೆ ಕರೆ ನೀಡಿದೆ.

ಬಂದ್‌ನ ಸಮಯದಲ್ಲಿ ಒಪಿಡಿ ಹಾಗೂ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುವುದಿಲ್ಲ. ದೇಶಾದ್ಯಂತ ಆಧುನಿಕ ಔಷಧ ವೈದ್ಯರ ಸೇವೆಯನ್ನು ಹಿಂತೆಗೆದುಕೊಳ್ಳಲಾಗುತ್ತದೆ. ಐಎಂಎ ತನ್ನ ವೈದ್ಯರ ನ್ಯಾಯಯುತ ಬೇಡಿಕೆಗಾಗಿ ರಾಷ್ಟ್ರದ ಸಹಾನುಭೂತಿಯನ್ನು ಬಯಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಐಎಂಎ ಪ್ರಕಟಣೆಯ ನಂತರ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್(ಎಫ್‌ಒಆರ್‌ಡಿಎ) ಕೂಡ ತಾನು ಹಿಂಪಡೆದಿದ್ದ ಪ್ರತಿಭಟನೆಯ ನಿರ್ಧಾರವನ್ನು ವಾಪಸ್‌ ಪಡೆದಿದ್ದು ಪುನಃ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ.

Advertisements

“ಆರೋಗ್ಯ ಸಚಿವಾಲಯದ ಭರವಸೆಯ ಆಧಾರದ ಮೇಲೆ ಉತ್ತಮ ನಂಬಿಕೆಯಿಂದ ಮುಷ್ಕರವನ್ನು ಹಿಂತೆಗೆದುಕೊಳ್ಳುವ ನಮ್ಮ ಹಿಂದಿನ ನಿರ್ಧಾರವು ನಮ್ಮ ಸಮುದಾಯದಲ್ಲಿ ದುಃಖ ಮತ್ತು ನಿರಾಶೆಯನ್ನುಉಂಟುಮಾಡಿದೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ನಾವು ಪ್ರತಿಭಟನೆಗೆ ಮತ್ತೆ ಬೆಂಬಲ ನೀಡುತ್ತೇವೆ” ಎಂದು ಎಫ್‌ಒಆರ್‌ಡಿಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ದಿನ.ಕಾಮ್ ಇಟ್ಟ ಎರಡು ಪುಟ್ಟ ಹೆಜ್ಜೆಗಳು; ನಮ್ಮ ಪ್ರಯತ್ನ ನಿಮ್ಮ ಭಾಗೀದಾರಿಕೆ

ಎಫ್‌ಒಆರ್‌ಡಿಎಯ ಪ್ರತಿನಿಧಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಮುಷ್ಕರವನ್ನು ಹಿಂತೆಗೆದುಕೊಳ್ಳುವುದಾಗಿ ಎರಡು ದಿನಗಳ ಹಿಂದೆ ಘೋಷಿಸಿದ್ದರು.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಘಟನೆ ಕೂಡ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದೆ.

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಅಮಾನುಷವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯರಿಗೆ ನ್ಯಾಯವನ್ನು ಕೋರುವುದರ ಜೊತೆಗೆ ಹಿಂಸಾಚಾರಕ್ಕೊಳಗಾಗುತ್ತಿರುವ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸುವ ಕಾನೂನಿಗೆ ಒತ್ತಾಯಿಸಿ ವಿವಿಧ ವೈದ್ಯಕೀಯ ಸಂಘಟನೆಗಳು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X