ರಾಯಚೂರು | ನಗರದ ವಿವಿಧ ಬಡಾವಣೆಗೆ ಜಿಲ್ಲಾಧಿಕಾರಿ ಕೆ.ನಿತೀಶ್ ಭೇಟಿ, ಪರಿಶೀಲನೆ

Date:

Advertisements

ರಾಯಚೂರು ನಗರದ ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಕೆ.ನಿತೀಶ ಅವರು ಭೇಟಿ ನೀಡಿ ಸಾರ್ವಜನಿಕರ ಮೂಲ ಸೌಲಭ್ಯಗಳ ಕುಡಿಯುವ ನೀರು, ಚರಂಡಿ, ವಿದ್ಯುತ್ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚೆ ಮಾಡಿದರು.

ನಗರದ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪಹಾರ ಸೇವಿಸಿ ಸಾರ್ವಜನಿಕರಿಗೆ ಗುಣಮಟ್ಟದ ಬೆಳಗಿನ ಉಪಹಾರ ಮತ್ತು ಊಟದ ವ್ಯವಸ್ಥೆ ಕುರಿತು ಪರಿಶೀಲಿಸಿದರು. ನಗರದ ನಿಜಲಿಂಗಪ್ಪ ಕಾಲೋನಿ ಹಾಗೂ ಹರಿಜನವಾಡ ಕಾಲೋನಿಗೆ ಸಂಚರಿಸಿ ರಸ್ತೆ, ಕುಡಿಯುವ ನೀರು ಸರಬರಾಜು, ಬಡಾವಣೆಯಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಚರಂಡಿ ನೀರು ತಡೆಯಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಬಡಾವಣೆಯಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನ ಸಂಚರಿಸುವ ಕುರಿತು, ವಾರ್ಡ್‌ನಲ್ಲಿ ಮನೆ ಮನೆಯಿಂದ ಸಂಗ್ರಹಿಸಿ ತ್ಯಾಜ್ಯ ಕಸ ವಿಲೇವಾರಿ ಮಾಡುವ ಕುರಿತು ವಾಹನ ಚಾಲಕರಿಗೆ ಮಾಹಿತಿ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬ ರಾಜು ಕುರಿತು ಬಡಾವಣೆಯ ನಿವಾಸಿಗಳಿಂದ ಮಾಹಿತಿ ಪಡೆದರು.

Advertisements
ರಾಯಚೂರು

ಕುಡಿಯುವ ನೀರಿಗಾಗಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು ಪರಿಶೀಲನೆ ನಡೆಸಿದರು. ಚರಂಡಿ ಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಹೂಳೆತೆಗೆಯುವ ಕೆಲಸ ನಡೆಸಲು ನಗರಸಭೆ ಆಯುಕ್ತರಿಗೆ ಸೂಚಿಸಿದರು. ಕಾಲುವೆಯಲ್ಲಿ ಮನೆ ಕಸ ಎಸೆಯದಂತೆ, ಹಾಗೂ ಸಂಗ್ರಹ ಮಾಡಿ ನಗರಸಭೆ ಬಂಡಿಗಳಿಗೆ ನೀಡಲು ಜಾಗೃತಿ ಮೂಡಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ನಗರಾಭಿವೃದ್ಧಿ ಕೊಶ ನಿರ್ದೇಶಕ ಜಗದೀಶ ಗಂಗಣ್ಣನವರ, ನಗರಸಭೆ ಸೇರಿದಂತೆ ಅಧಿಕಾರಿಗಳು, ಮತ್ತು ನಗರಸಭೆ ಸದಸ್ಯರು ಇದ್ದರು.

ವರದಿ : ಸಿಟಿಜನ್ ಜರ್ನಲಿಸ್ಟ್, ಹಫೀಜುಲ್ಲಾ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X