ಐಪಿಎಲ್‌ 2023 | ಮೊಹಾಲಿಯಲ್ಲಿ ʻರನ್‌ ಹೊಳೆʼ; ಪಂಜಾಬ್ ವಿರುದ್ಧ‌ ರಾಹುಲ್ ಪಡೆಗೆ ಭರ್ಜರಿ ಜಯ

Date:

Advertisements

ʻರನ್‌ ಹೊಳೆʼ ಹರಿದ ಐಪಿಎಲ್‌ 16ನೇ ಆವೃತ್ತಿಯ 38ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಪಂಜಾಬ್‌ ವಿರುದ್ಧ 56 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಕೆ.ಎಲ್‌.ರಾಹುಲ್‌ ಸಾರಥ್ಯದ ಲಕ್ನೋ ಸೂಪರ್‌ ಜೈಂಟ್ಸ್‌ 5 ವಿಕೆಟ್‌ ನಷ್ಟದಲ್ಲಿ 257 ರನ್‌ ಗಳಿಸಿತ್ತು. ಉತ್ತರವಾಗಿ ಪಂಜಾಬ್‌ 19.5 ಓವರ್‌ಗಳಲ್ಲಿ 201 ರನ್‌ಗಳಿಗೆ ಅಲೌಟ್‌ ಆಯಿತು.

ಎರಡನೇ ಅತಿಹೆಚ್ಚು ಮೊತ್ತದ ದಾಖಲೆ; ಶುಕ್ರವಾರದ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಹೊಸ ದಾಖಲೆ ಬರೆದಿದೆ. ಪಂಜಾಬ್‌ ವಿರುದ್ಧ 257 ರನ್‌ ಗಳಿಸುವ ಮೂಲಕ, ಐಪಿಎಲ್‌ನಲ್ಲಿ ಎರಡನೇ ಅತಿಹೆಚ್ಚು ಮೊತ್ತ ದಾಖಲಿಸಿದ ತಂಡ ಎಂಬ ಕೀರ್ತಿಗೆ ಲಕ್ನೋ ಪಾತ್ರವಾಗಿದೆ.

Advertisements

2013ರ ಆವೃತ್ತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್ ವಿರುದ್ಧ ಆರ್‌ಸಿಬಿ ತಂಡ 5 ವಿಕೆಟ್‌ ನಷ್ಟದಲ್ಲಿ 263 ರನ್‌ ಗಳಿಸಿದ್ದು ಐಪಿಎಲ್ ಗರಿಷ್ಠ ಸ್ಕೋರ್ ದಾಖಲೆಯಾಗಿದೆ.

ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಮೊದಲ 10 ಓವರ್‌ಗಳಲ್ಲಿ 128 ರನ್‌ಗಳಿಸಿದ್ದ ಲಕ್ನೋ, ನಂತರದ 10 ಓವರ್‌ಗಳಲಿ 129 ರನ್‌ ಗಳಿಸುವ ಮೂಲಕ ಕಿಂಗ್ಸ್ ಬೌಲರ್‌ಗಳ ಬೆವರಿಳಿಸಿತು. ಸಿಡಿಲಬ್ಬರದ ಬ್ಯಾಟಿಂಗ್‌ ನಡೆಸಿದ ಮಾರ್ಕಸ್‌ ಸ್ಟೋಯ್ನಿಸ್‌, 40 ಎಸೆತಗಳಲ್ಲಿ 5 ಸಿಕ್ಸರ್‌ ಮತ್ತು 6 ಬೌಂಡರಿಗಳ ನೆರವಿನೊಂದಿಗೆ 72 ರನ್‌ ಗಳಿಸಿದರು. ಆರಂಭಿಕ ಕೈಯ್ಲ್‌ ಮೇಯರ್ಸ್‌ 54 ರನ್‌, ಆಯುಷ್‌ ಬದೋನಿ 43 ಹಾಗೂ ನಿಕಲಸ್‌ ಪೂರನ್‌ 45 ರನ್‌ಗಳಿಸುವ ಮೂಲಕ ಬೃಹತ್‌ ಮೊತ್ತ ಪೇರಿಸಲು ಕಾರಣರಾದರು.

ಬೆಟ್ಟದಷ್ಟು ಮೊತ್ತ ಎದುರಿಗಿದ್ದರೂ ಸಹ, ಪಂಜಾಬ್ ಆರಂಭಿಕರಿಬ್ಬರೂ ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಕೇವಲ 1 ರ‌ನ್‌ಗಳಿಸಿ ನಾಯಕ ಶಿಖರ್ ಧವನ್‌ ಕ್ಯಾಚಿತ್ತು ನಿರ್ಗಮಿಸಿದರೆ, ಪ್ರಭಾಸಿಮ್ರಾನ್‌ ಸಿಂಗ್‌ ಕೊಡುಗೆ 9 ರನ್.‌ ಮೂರನೇ ಕ್ರಮಾಂಕದಲ್ಲಿ ಬಂದ ಅಥರ್ವಾ ಥೈಡೆ (66 ರನ್‌, 36 ಎಸೆತ) ಮಾತ್ರ ತಕ್ಕಮಟ್ಟಿನ ಹೋರಾಟ ಪ್ರದರ್ಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X