ಅಮಾನತುಗೊಂಡ ಪೊಲೀಸ್‌ಗೆ ಮುಖ್ಯಮಂತ್ರಿ ಪದಕ, ಸರ್ಕಾರದ ನಡೆ ಖಂಡಿಸಿದ ಶಾಸಕ ಯತ್ನಾಳ

Date:

Advertisements

ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಂಡಿರುವ ಸಿಸಿಬಿ ಘಟಕದ ಹೆಡ್‌ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಪೊಲೀಸ್‌ ಇಲಾಖೆಯ 2023ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರವಾಗಿ ವಿರೋಧಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮೈಸೂರು ಸಿಸಿಬಿ ಘಟಕದ ಪೊಲೀಸ್ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರು ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳವು ಸೇರಿದಂತೆ ಅನೇಕ ಗಂಭೀರ ಆರೋಪಿಗಳನ್ನು ಎದುರಿಸುತ್ತಿದ್ದಾರೆ. ಆದರೆ, ಸಲೀಂ ಪಾಷಾಗೆ ಮುಖ್ಯಮಂತ್ರಿಗಳ ಪದಕ ನೀಡಿದ್ದೇಕೆ ಎಂಬುದನ್ನು ರಾಜ್ಯದ ಜನತೆಗೆ ತಿಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಆರೋಪ ಹೊತ್ತ ಪೊಲೀಸರಿಗೆ ಪದಕ ನೀಡಿದರೆ, ಕಷ್ಟಪಟ್ಟು ದುಡಿಯುತ್ತಿರುವ ನಿಷ್ಠಾವಂತ ಪೇದೆಗಳಿಗೆ, ಅಧಿಕಾರಗಳಿಗೆ ಮನೋಸ್ಥೈರ್ಯ ಏನಾಗಬೇಕೆಂದು ಯೋಚಿಸಿದ್ದೀರಾ? ನಿಮ್ಮ ಆಯ್ಕೆಯ ಮಾನದಂಡಗಳು ಏನೆಂಬುದನ್ನು ತಿಳಿಸಿ. ಕೂಡಲೇ ಪದಕವನ್ನು ವಾಪಾಸ್ ಪಡೆಯಬೇಕು. ಜತೆಗೆ, ಸಲೀಂ ಪಾಷಾ ವಿರುದ್ಧ ತನಿಖೆಯನ್ನು ಚುರುಕುಗೊಳಿಸಿ ಎಂದು ಯತ್ನಾಳ ಕಿಡಿಕಾರಿದ್ದಾರೆ.

Advertisements

ಸಲೀಂ ಪಾಷಾ ಮೇಲಿನ ಆರೋಪ ಏನು?

ಸಿಸಿಬಿ ಘಟಕದ ಹೆಡ್‌ ಕಾನ್‌ಸ್ಟೆಬಲ್ ಪೇದೆ ಸಲೀಂ ಪಾಷಾ ಅವರಿಗೂ ಮುಖ್ಯಮಂತ್ರಿ ಪದಕ ದೊರಕಿದೆ. ಆದರೆ ಇವರು ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಹಾಗೂ ಗಾಂಜಾ ಪ್ರಕರಣಗಳಲ್ಲಿ ಆರೋಪಿಗಳು ಹಾಗೂ ಅವರ ಸಂಬಂಧಿಕರ ಜೊತೆಗೆ ಫೋನ್‌ ಮೂಲಕ ಸಂಪರ್ಕಿಸಿರುವುದು ಸಾಬೀತಾಗಿದ್ದು, ವಿಚಾರಣೆ ನಡೆಯುತ್ತಿರುವಂತೆಯೇ ರಾಜ್ಯ ಪೊಲೀಸ್‌ (ಶಿಸ್ತು ನಡಾವಳಿ) ಅನ್ವಯ ಜು.12ರಂದು ಸಿಸಿಬಿ ಘಟಕದ ಕಾನ್‌ಸ್ಟೆಬಲ್ ಸಲೀಂ ಪಾಷಾ ಅವರನ್ನು ಅಮಾನತುಗೊಳಿಸಿ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ ಆದೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಹಾತ್ಮ ಗಾಂಧೀಜಿ ಕೊಂದವನ ಗುಡಿ ಕಟ್ಟಿ ಪೂಜೆ ಮಾಡುವುದಿಲ್ಲವೆ ನಿಮ್ಮ ಬಾಸ್ ಗಳು ಮತ್ತು ಮಾರ್ಗದರ್ಶಕರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X