ಸರ್ಕಾರಿ ನೌಕರರು ಕೆಂಪು, ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯ, ಸರ್ಕಾರ ಆದೇಶ

Date:

Advertisements

ಸರ್ಕಾರಿ ನೌಕರರು ಈ ಹಿಂದೆ ನೀಲಿ ಬಣ್ಣದ ಐಡಿ ಟ್ಯಾಗ್ ಹಾಕುತ್ತಿದ್ದರು. ಆದರೆ ಇದೀಗ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದ್ದು, ಕೆಂಪು ಹಾಗೂ ಹಳದಿ ಬಣ್ಣದ ಟ್ಯಾಗ್‌ ಹಾಕುವುದನ್ನು ಕಡ್ಡಾಯಗೊಳಿಸಿದೆ.

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದೆ. ಇಂತಹ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದಡಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ನೌಕರರು ಕೆಂಪು ಹಾಗೂ ಹಳದಿ ಬಣ್ಣದ ಕೊರಳುದಾರ ( ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ನಿಗಮ ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಕಚೇರಿಗಳಲ್ಲಿ ಎಲ್ಲ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕೆಂಪು ಹಳದಿ ಬಣ್ಣದ ಟ್ಯಾಗ್ ಒದಗಿಸಿಕೊಡಬೇಕು ಎಂದು ಸೂಚಿಸಲಾಗಿದೆ.

Advertisements

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಿಎಂ ಸಿದ್ದರಾಮಯ್ಯ ಪದೇ ಪದೆ ಹೇಳುತ್ತಿರುತ್ತಾರೆ. ಇದೀಗ ಸರ್ಕಾರಿ ನೌಕರರ ಐಡಿ ಟ್ಯಾಗ್‌ನಲ್ಲಿ ಕರ್ನಾಟಕದ ಬಾವುಟದ ಬಣ್ಣ ಕಡ್ಡಾಯಗೊಳಿಸಿ ಆದೇಶ ಹೊರಡಿಸಿರುವುದು ಕನ್ನಡಿಗರು ಹೆಮ್ಮೆ ಪಡಬೇಕಾದ ಸಂಗತಿಯಾಗಿದೆ.

WhatsApp Image 2024 08 16 at 4.33.28 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಅದ್ಭುತ ಸಂಗತಿ! ಇದು ಮೊದಲಿಗೆ ಕನ್ನಡ ಭಾಷೆಯ ಚಿಂತಕರಿಗೆ ಹಾಗೂ ಚಳುವಳಿಗಾರರಿಗೆ ಹೊಳೆಯ ಬೇಕಿತ್ತು. ಆದರೆ ಸಾಹಿತ್ಯ ಹಾಗೂ ಚಳುವಳಿಯ ಪ್ರಭಾವ ಹೊಂದಿರುವ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಹೊಳೆದಿರುವುದು ಮತ್ತೊಂದು ಭಾಗ್ಯದ ಸಂಗತಿಯಾಗಿದೆ. ಸರ್ಕಾರಕ್ಕೆ ಅಭಿನಂದನೆಗಳು ಮತ್ತು ಧನ್ಯವಾದಗಳು! ಇನ್ನು ಹಳದಿ ಕೆಂಪು ಕೊರಳ ಪಟ್ಟಿ,ಸರ್ಕಾರಿ ಅಧಿಕಾರಿಗಳ ಕೊರಳಲ್ಲಿ ರಾರಾಜಿಸಲಿ! ಹಾಗೆಯೇ, ಸರ್ಕಾರಿ ನೌಕರರರಲ್ಲದವರಿಗೂ ಅದೇ ಹಳದಿ ಕೆಂಪು ಕೊರಳ ಪಟ್ಟಿಯನ್ನು ಕೊಂಚ ಭಿನ್ನತೆಯೊಂದಿಗೆ ಧರಿಸಲು ಚಿಂತಿಸಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X