ಶಿವಮೊಗ್ಗ | ಸ್ವಾತಂತ್ರ್ಯ ದಿನಾಚರಣೆ; ಬಿಸಿಲಿನ ತಾಪಕ್ಕೆ ಕುಸಿದುಬಿದ್ದ ಮಕ್ಕಳು

Date:

Advertisements

78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ, ಮಕ್ಕಳ ಪಥಸಂಚಲನ ನಡೆದ ಕಾರಣ ಮಕ್ಕಳು ಬಹಳ ಹೊತ್ತು ಬಿಸಿಲಿನಲ್ಲೇ ನಿಂತಿದ್ದರು. ಇದರಿಂದ ಸುಸ್ತಾಗಿ ಮಕ್ಕಳು ಕುಸಿದು ಬಿದ್ದಿದ್ದಾರೆ.

ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಭಾಷಣದ ನಂತರದಲ್ಲಿ ಮಕ್ಕಳು ಕುಸಿದು ಬಿದ್ದಿದ್ದಾರೆ. ಬಳಿಕ ಸ್ವಾತಂತ್ರ್ಯ ದಿನಾಚರಣೆ ಕುರಿತು ಭಾಷಣ ಮಾಡಿ ಮುಗಿಸಿದರು. ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ಕುವೆಂಪು ಶಾಲೆಯ ವಿದ್ಯಾರ್ಥಿಯೋರ್ವನ ಮೂಗಿನಲ್ಲಿ ರಕ್ತಸ್ರಾವವಾಗಲು ಆರಂಭವಾಗಿತ್ತು. ನಂತರ ಸ್ಥಳದಲ್ಲಿದ್ದ ತಹಶೀಲ್ದಾರ್ ಅವರ ವಾಹನದಲ್ಲಿಯೇ ಆಸ್ಪತ್ರೆಗೆ ಕರೆದೊಯ್ದಿದ್ದು ನಂತರ ವಿದ್ಯಾರ್ಥಿಯನ್ನು ಮನೆಗೆ ಬಿಡಲಾಗಿದೆ.

Advertisements
ಧ್ವಜಸ್ತಂಭದ ಕಟ್ಟೆ

ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಕುವೆಂಪು ಶಾಲೆಗೆ ಸಂಬಂಧಪಟ್ಟ ಶಿಕ್ಷಕರೊಬ್ಬರು, ʼನಿಮಗೆ ಈ ಹುಡುಗನನ್ನು ಕರೆದುಕೊಂಡು ಹೋಗಲು ಹೇಳಿದ್ಯಾರು?ʼ ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರಿಗೆ ಏರುಧ್ವನಿಯಲ್ಲಿ ಗದರಿಸಿ ಕೇಳಿದ ಕುವೆಂಪು ಶಾಲೆಯ ಶಿಕ್ಷಕರ ನಡೆಗೆ ತಾಲೂಕು ಕಚೇರಿಯ ವಾಹನ ಚಾಲಕರು ಸೇರಿದಂತೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕುಸಿದು ಬಿದ್ದ ಮಕ್ಕಳು

78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಧ್ವಜಾರೋಹಣ ಹಬ್ಬದ ವಾತಾವರಣ ಆದರೂ ವೇದಿಕೆಗೆ ಶಾಮಿಯಾನ ಕೂಡ ಹಾಕದಿರುವುದು ಕಂಡುಬಂದಿತು. ಧ್ವಜಾರೋಹಣ ಕಟ್ಟೆಗೆ ಸುಣ್ಣ ಬಣ್ಣ ಕಾಣದಿದ್ದರೂ ಕೂಡ ಮಳೆಯಲ್ಲಿ ಪಾಚಿ ಕಟ್ಟಿದ ಸ್ಥಿತಿಯಲ್ಲಿತ್ತು. ಕೊನೆಪಕ್ಷ ಧ್ವಜದ ಕಟ್ಟೆಯನ್ನಾದರೂ ತಿಕ್ಕಿ ತೊಳೆಯಬಹುದಿತ್ತಲ್ವೇ? ಎಂದು ಸ್ಥಳದಲ್ಲಿ ಹಾಜರಿದ್ದ ಆನೇಕ ಸಾರ್ವಜನಿಕರಿಂದ ಮಾತುಗಳು ಕೇಳಿಬರುತ್ತಿದ್ದವು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ: ಜಕ್ಕಣ್ಣಗೌಡರ್‌

ಧ್ವಜಾರೋಹಣ ನೆರವೇರಿಸಿ ನಂತರದ ಸಭಾ ಕಾರ್ಯಕ್ರಮ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಒಳಗಿರುವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ವೇದಿಕೆ ಕಾರ್ಯಕ್ರಮ ಪ್ರೌಢಶಾಲೆ ಕ್ರೀಡಾಂಗಣದಲ್ಲೇ ನಡೆಸುವಂತೆ ಬದಲಾವಣೆ ಅಗಿದ್ದರಿಂದ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಸರಿಯಿರಲಿಲ್ಲದಿರುವುನ್ನು ಗಮನಿಸಿ, ʼತುಂಗಾನದಿ ಪಕ್ಕದಲ್ಲಿ ಇದ್ದು, ನೀರಿಗೂ ಬರ ಬಂತೇʼ ಎಂದು ಪೋಷಕರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮ ಆಯೋಜಕರಿಗೆ ಹಿಡಿಶಾಪ ಹಾಕುತ್ತ ಧ್ವಜದ ಕಂಬಕ್ಕೆ ಸ್ವಾತಂತ್ರ್ಯ ಸಿಕ್ಕರೂ ಧ್ವಜದ ಕಟ್ಟೆಗೆ ಸ್ವಾತಂತ್ರ್ಯ ಸಿಗಲಿಲ್ವಾ?ʼ ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಗುನುಗುತ್ತಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X