ಜೇವರ್ಗಿ | ಮಾರಾಟವಾಗದ ಅಡುಗೆ ಮನೆಯಲ್ಲಿ ಉಪಯೋಗಿಸುವ ಕಲ್ಲಿನ ಉಪಕರಣಗಳು; ಸಂಕಷ್ಟದಲ್ಲಿ ವ್ಯಾಪಾರಿಗಳು

Date:

Advertisements

ಕಲ್ಲು ಒಡೆದು, ಅದಕ್ಕೆ ಸುಂದರ ಆಕೃತಿ ಕೊಟ್ಟು ಅಡುಗೆ ಮನೆಯಲ್ಲಿ ಉಪಯೋಗಿಸುವ ವಸ್ತುಗಳಾದ ಖಾಲಗಲ್ (ಅಸಗಲ್ಲ), ಬಿಸಕಲ್, ರುಬ್ಬುಗುಂಡು ಮಾಡಿ ಬದುಕುತ್ತಿರುವ ವ್ಯಾಪಾರಿಗಳ ಜೀವನ ಚಿಂತಾಜನಕವಾಗಿದೆ. ದಿನಕ್ಕೆ ಒಂದು ಕೂಡಾ ಮಾರಾಟ ಆಗದೇ ಇರುವುದರಿಂದ ದಿನದೂಡುವುದೇ ಕಷ್ಟಕರ ಸನ್ನಿವೇಶಕ್ಕೆ ತಂದೊಡ್ಡಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮುಖ್ಯರಸ್ತೆ ಬದಿಯಲ್ಲಿ ವಡ್ಡರ ಸಮುದಾಯದ ಐದು ಕುಟುಂಬಗಳು ಗುಡಿಸಲು ಕಟ್ಟಿಕೊಂಡು ಸುಮಾರು ಇಪ್ಪತ್ತು ವರ್ಷಗಳಿಂದ ವಾಸವಾಗಿದೆ. ತಲೆತಲಾಂತರಗಳಿಂದ ಉಳಿಸಿಕೊಂಡು ಬಂದ ಕಸುಬನ್ನು ಇನ್ನೂ ಕೂಡ ಮುಂದುವರಿಸಿಕೊಂಡಿದ್ದಾರೆ. ಆದರೆ ನಮ್ಮ ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುತ್ತಿಲ್ಲ. ನಾವು ಮಾಡಿರುವ ವಸ್ತುಗಳು ಕೆಲವೊಮ್ಮೆ ಮಾರಾಟ ಆಗುತ್ತವೆ. ಒಂದೊಮ್ಮೆ ದಿನಕ್ಕೆ ಒಂದು ಕೂಡ ಮಾರಾಟ ಆಗುವುದಿಲ್ಲ ಎಂದು ಈ ದಿನ.ಕಾಮ್ ಜೊತೆಗೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

WhatsApp Image 2024 08 17 at 2.58.26 PM

ನಾವು ಗುಡಿಸಲಲ್ಲಿ ವಾಸಿಸುತ್ತಿದ್ದೇವೆ. ಮಳೆಗಾಲದಲ್ಲಿ ಗುಡಿಸಲಲ್ಲಿ ಮಳೆ ನೀರು ನುಗ್ಗುತ್ತವೆ. ಹಾವು-ಚೇಳುಗಳು ಬರುತ್ತವೆ. ಭಯದಲ್ಲಿಯೇ ಬದುಕು ದೂಡುತ್ತಿದ್ದೇವೆ. ನಮ್ಮಿಂದ ಓಟು ಪಡೆಯುತ್ತಾರೆ. ಆದರೆ ನಮಗೆ ಸಹಾಯ ಮಾಡಲು ಸ್ಥಳೀಯ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಮುಂದೆ ಬರುತ್ತಿಲ್ಲ ಎಂದು ಆರೋಪಿಸಿದರು.

Advertisements

ಸ್ಥಳೀಯ ಶಾಸಕ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ನಮ್ಮ ಕಷ್ಟಕ್ಕೆ ಸ್ಪಂದಿಸಬೇಕು ಎಂದು ವಡ್ಡರ ಸಮುದಾಯದ ಐದು ಕುಟುಂಬದ ಸದಸ್ಯರು ಆಗ್ರಹಿಸಿದ್ದಾರೆ.

ಈ ದಿನ. ಕಾಮ್‌ನೊಂದಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡ ವಡ್ಡರ ಸಮುದಾಯದ ಮಹಿಳೆ ಸುಶೀಲಾಬಾಯಿ, ” ನಮಗೆ ಸರಿಯಾದ ಮನೆ ಇಲ್ಲ. ಹೀಗಾಗಿ, ರಸ್ತೆಯ ಬದಿಯಲ್ಲೇ ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿದ್ದೇವೆ. ಕಲ್ಲು ಒಡೆದು ವಸ್ತುಗಳು ಮಾಡುತ್ತೇವೆ. ಕೆಲವೊಮ್ಮೆ ಒಂದು ಕೂಡಾ ಮಾರಾಟ ಆಗುವುದಿಲ್ಲ. ಇದರಿಂದ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಕೂಡ ಆಗುತ್ತಿಲ್ಲ” ಎಂದು ಹೇಳಿದರು.

“ಓಟು ಹಾಕುತ್ತೇವೆ. ಆಧಾರ್ ಕಾರ್ಡ್, ವೋಟರ್ ಐಡಿ ಇದ್ದರೂ ಕೂಡ ಇದುವರೆಗೆ ನಮಗೆ ರೇಷನ್ ಕಾರ್ಡ್ ಸಿಕ್ಕಿಲ್ಲ. ನಾವು ಇರುವ ಗುಡಿಸಲು ಮಾರ್ಗವಾಗಿಯೇ ಜನಪ್ರತಿನಿಧಿಗಳು ಹಾದು ಹೋಗುತ್ತಾರೆ. ಆದರೆ ನಮ್ಮ ಸಮಸ್ಯೆ ಕುರಿತು ವಿಚಾರಿಸುವುದಿಲ್ಲ” ಎಂದು ಆರೋಪಿಸಿದರು.

WhatsApp Image 2024 08 17 at 2.58.26 PM 2

ಗುಂಡಪ್ಪ ಮಾತನಾಡಿ,”ಕಲ್ಲುಗಳನ್ನು ಚಿಂಚೋಳಿ ತಾಲೂಕಿನಿಂದ ತರಿಸಿಕೊಳ್ಳುತ್ತೇವೆ. ಅದಕ್ಕೆ ಹತ್ತು ಸಾವಿರ ಖರ್ಚು ಆಗುತ್ತದೆ. ಅದು ಹೊಟ್ಟೆಗೆ ಬಟ್ಟೆಗೆ ಸರಿಯಾಗುತ್ತೆ. ಇದರಿಂದ ಏನೂ ಕೂಡ ಉಳಿತಾಯ ಆಗುವುದಿಲ್ಲ. ಸರ್ಕಾರದಿಂದ ಒಂದು ಮನೆ ಕೊಟ್ಟರೆ ನಮಗೆ ಅನುಕೂಲ” ಎಂದು ಕೇಳಿಕೊಂಡರು.

ಇದನ್ನು ಓದಿದ್ದೀರಾ? ಸೊರಬ | ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ ₹10 ಲಕ್ಷ ಮೌಲ್ಯದ ಪರಿಕರ ದೇಣಿಗೆ

ಈದಿನ.ಕಾಮ್ ದೊಂದಿಗೆ ಜಯಶ್ರೀ ಮಾತನಾಡಿ, “ಇದ್ರಲ್ಲಿ ನಮಗೆ ನೂರು ಇನ್ನೂರು ರೂಪಾಯಿ ಸಿಗುತ್ತೆ ಅಷ್ಟೇ. ನಮಗೆ ಸಹಾಯ ಮಾಡುತ್ತೇವೆ ಎಂದು ಆಶ್ವಾಸನೆ ಕೊಟ್ಟು ಓಟು ಹಾಕಿಸಿಕೊಳ್ಳುತ್ತಾರೆ. ಚುನಾವಣೆ ಮುಗಿದ ಬಳಿಕ ಯಾರೂ ಕೂಡ ನಮ್ಮ ನೆರವಿಗೆ ಬರುವುದಿಲ್ಲ” ನೋವು ತೋಡಿಕೊಂಡರು.

WhatsApp Image 2024 08 17 at 2.58.26 PM 1

ಈ ದಿನ.ಕಾಮ್‌ನೊಂದಿಗೆ ನಾಗಮ್ಮ ಮಾತನಾಡಿ, “ಸುಮಾರು ಇಪ್ಪತ್ತೈದು ವರ್ಷಗಳಿಂದ ಕಲ್ಲು ಒಡೆದು ಒಳ್ಳು, ಬಿಸಕಲ್, ಖಾಲಗಲ್ ಮಾಡುತ್ತೇವೆ. ಐವತ್ತು, ನೂರು ಉಳಿತಾಯ ಆಗುತ್ತೆ ಅಷ್ಟೇ. ಸರ್ಕಾರ ನಮಗೊಂದು ಸ್ವಂತ ನಿವೇಶನ ಮಾಡಿಕೊಟ್ಟರೆ ಅನುಕೂಲ ಆಗುತ್ತದೆ” ಎಂದು ಕೇಳಿಕೊಂಡರು.

ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X