ಬೆಂಗಳೂರು| ರೋಸಿದ್ದ ಸಾರ್ವಜನಿಕರಿಂದ ವ್ಹೀಲಿಂಗ್‌ ಮಾಡುತ್ತಿದ್ದ ಪುಂಡರಿಗೆ ಪಾಠ

Date:

Advertisements

ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಸ್ಕೂಟರ್‌ಗಳನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್​ಗಳನ್ನ ಎಸೆಯಲಾಗಿದೆ.

ಎರಡು ಸ್ಕೂಟರ್​ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸುವ ರೀತಿ ವ್ಹೀಲಿಂಗ್ ಮಾಡುತ್ತಿದ್ದರು. ಅಷ್ಟಲ್ಲದೇ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಬೈಕ್‌ ಅನ್ನು ಎತ್ತಿ ಬಿಸಾಡಿದ್ದಾರೆ. ವ್ಹೀಲಿಂಗ್ ಮಾಡಿದ ಪುಂಡನ ಬೈಕ್​ಅನ್ನು ಫ್ಲೈಓವರ್​​ ಮೇಲಿಂದ ಬಿಸಾಡಿರುವ ವಿಡಿಯೋ ವೈರಲ್ ಆಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಕಚೇರಿಯು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನವನ್ನು ಈ ರಾಜ್ಯ ಸಹಿಸಲ್ಲ

Advertisements

ಇತ್ತಿಚೆಗೆ ಬೆಂಗಳೂರು ನಗರ ಪೊಲೀಸರು ವಿಡಿಯೋವೊಂದನ್ನು ಹಂಚಿಕೊಂಡಿದ್ದು ವ್ಹೀಲಿಂಗ್ ಮಾಡುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದರು. ನಗರದ ಜನನಿಬಿಡ ರಸ್ತೆಯಲ್ಲಿ ಅಪಾಯಕಾರಿ ಬೈಕ್ ಸ್ಟಂಟ್ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈಗ ಆ ರೀತಿ ಸ್ಟಂಟ್ ಮಾಡಿದ್ದ ಪುಂಡರ ಗುಂಪನ್ನು ಪೊಲೀಸರು ಬಂಧಿಸಿದ್ದರು.

“ನಗರದ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತೀರಾ? ನಿಮ್ಮ ಸಾಹಸವನ್ನು ನಿಲ್ಲಿಸಲು ನಮ್ಮ ಅಧಿಕಾರಿಗಳು ಯಾವಾಗಲೂ ಸಿದ್ಧರಾಗಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸರು ಸ್ಟಂಟ್ ಮಾಡುವ ವ್ಯಕ್ತಿಗಳ ವಿಡಿಯೋವನ್ನು ಹಂಚಿಕೊಂಡಿದ್ದು, ವ್ಹೀಲಿಂಗ್ ಮಾಡಿದ ಪುಂಡರನ್ನು ಬಂಧಿಸಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.

ಕೆಲವು ದಿನಗಳ ಹಿಂದೆ ಬೆಂಗಳೂರು ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ ಒಟ್ಟು 44 ಮಂದಿಯನ್ನು ಬಂಧಿಸಿದ್ದು, ಎಲ್ಲ ಸ್ಕೂಟರ್, ಬೈಕ್‌ಗಳನ್ನು ಜಪ್ತಿ ಮಾಡಿದ್ದರು. ಪೊಲೀಸರ ಮಾಹಿತಿ ಪ್ರಕಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ರೀತಿ ವ್ಹೀಲಿಂಗ್ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ 33 ಪ್ರಕರಣಗಳು ದಾಖಲಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X