ಧಾರವಾಡ | ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ವಿವಿಧ ಸಂಘಟನೆಗಳ‌ ಪ್ರತಿಭಟನೆ

Date:

Advertisements

ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಧಾರವಾಡದಲ್ಲಿ ಎಐಎಂಎಸ್ಎಸ್, ಎಐಡಿವೈಒ ಹಾಗೂ ಎಐಡಿಎಸ್ಒ ಸಂಘಟನೆಗಳು ಪ್ರತಿಭಟನಾ ರ್ಯಾಲಿ ನಡೆಸಿದವು.

ಧಾರವಾಡದ ಕಲಾಭವನ ಮೈದಾನದಿಂದ ವಿವೇಕಾನಂದ ವೃತ್ತದವರೆಗೆ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು, “ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆಯ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೂಂಡಾಗಳು ದಾಳಿ ಮಾಡಿರುವುದು ಖಂಡನೀಯ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.

ಎಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಗಂಗೂಬಾಯಿ ಕೋಕರೆ ಮಾತನಾಡಿ, “ಸಂತ್ರಸ್ತೆಗೆ ತ್ವರಿತ ನ್ಯಾಯಕ್ಕಾಗಿ ಒತ್ತಾಯಿಸಿ ಕಿರಿಯ ವೈದ್ಯರು ಕೆಲಸವನ್ನು ನಿಲ್ಲಿಸಿ, ಪ್ರತಿಭಟನೆಗಳನ್ನು ಆಯೋಜಿಸುತ್ತಿರುವುದು ನಿರೀಕ್ಷಿತ ಮತ್ತು ನ್ಯಾಯಸಮ್ಮತವಾಗಿದೆ. ಸಮಾಜಘಾತುಕ ಶಕ್ತಿಗಳು ಈ ಘಟನೆಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾರೆ. ಈ ಕೃತ್ಯ ಎಸಗಿರುವ ಅಪರಾಧಿಗಳನ್ನು ರಕ್ಷಿಸಲು ಗೂಂಡಾಗಳು ನಡೆಸಿರುವ ಉದ್ದೇಶಪೂರ್ವಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ” ಎಂದರು.

Advertisements

ಎಐಡಿವೈಒ ಜಿಲ್ಲಾಧ್ಯಕ್ಷ ಭವಾನಿಶಂಕರ್ ಎಸ್ ಗೌಡ ಮಾತನಾಡಿ, “ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಮಾಧ್ಯಮಗಳಲ್ಲಿ ನಿರಂತರವಾಗಿ ಮತ್ತು ಅವ್ಯಾಹತವಾಗಿ ಅಶ್ಲೀಲತೆ ಮತ್ತು ಕ್ರೌರ್ಯಗಳ ಪ್ರದರ್ಶನಗಳ ಮೂಲಕ ಪೋರ್ನೋಗ್ರಫಿ ವೆಬ್‌ಸೈಟ್‌ಗಳನ್ನು ಹರಿಬಿಡುತ್ತಿರುವುದು, ದುರಾಭ್ಯಾಸಗಳಿಗೆ ವ್ಯಸನಿಗಳನ್ನಾಗಿಸುತ್ತಿರುವುದು ಮೂಲ ಕಾರಣಗಳಾವೆ. ಸರ್ಕಾರಗಳು ಉದ್ಯೋಗ ಸೃಷ್ಟಿ ಮಾಡದಿರುವುದರ ಪರಿಣಾಮವಾಗಿ ಯುವಕರು ಇಂತಹ ಅನಾರೋಗ್ಯಕರ ದುಷ್ಚಟಗಳಿಗೆ ಬಲಿಯಾಗುತ್ತಿದ್ದಾರೆ” ಎಂದರು.

“ದೆಹಲಿಯ ನಿರ್ಭಯ ಪ್ರಕರಣದ ನಂತರ ನಡೆದ ಪ್ರಭಲ ಹೋರಾಟದ ಫಲವಾಗಿ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟಲು ವರ್ಮಾ ಆಯೋಗ ಹಲವಾರು ಶಿಫಾರಸುಗಳನ್ನು ಮಾಡಿದ್ದರೂ ಕೂಡ ಸರ್ಕಾರಗಳು ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮಕೈಗೊಂಡಿಲ್ಲ. ಜತೆಗೆ ಇಂದಿನ ನ್ಯಾಯಾಂಗ ವ್ಯವಸ್ಥೆಯಲ್ಲಿನ ಸಡಿಲತೆ, ನೂನ್ಯತೆಗಳಿಂದಾಗಿ ಎಷ್ಟೋ ಅಪರಾಧಗಳನ್ನು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು. ಮಧುಲತಾ ಗೌಡರ್, ಸಿಂಧು ಕೌದಿ, ರಣಜಿತ್ ದೂಪದ್, ದೇವಮ್ಮ ದೇವತ್ಕಲ್, ಪ್ರೀತಿ ಸಿಂಗಾಡಿ, ಸ್ಪೂರ್ತಿ ಚಿಕ್ಮಠ್, ಸಿಮೋನ್ ಸೂರ್ಯವಂಶಿ, ಶಾಂತೇಶ್ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X