ವಿಜಯಪುರ | ಸೆ.5ರಂದು ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ಬಿಡುಗಡೆ; ಶರಣ ಸಂಸ್ಕೃತಿ ರಕ್ಷಣಾ ವೇದಿಕೆ ವಿರೋಧ

Date:

Advertisements

ವಿಜಯಪುರದಲ್ಲಿ ಸೆಪ್ಟೆಂಬರ್ 5ರಂದು ಬಿಡುಗಡೆಯಾಗುತ್ತಿರುವ ವಿವಾದಾಸ್ಪದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕವನ್ನು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ವಿರೋಧಿಸಿದ್ದಾರೆ.

ವಿಜಯಪುರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಬಸವ ತತ್ವದ ಚಿಂತಕ ಜೆ ಎಸ್ ಪಾಟೀಲ ಅವರು ಮಾತನಾಡಿ, “ಶರಣ ಸಂಸ್ಕೃತಿಯನ್ನು ಮತ್ತು ಲಿಂಗಾಯತ ಧರ್ಮ ತತ್ವಗಳನ್ನು ನಾಶಪಡಿಸುವ ಉದ್ದೇಶದಿಂದ ಆರ್‌ಎಸ್‌ಎಸ್‌ ವಚನ ದರ್ಶನ ಪುಸ್ತಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವುದು ಬಸವ ಭಕ್ತರು ಹಾಗೂ ಲಿಂಗಾಯತರಿಗೆ ನೋವು ತಂದಿದೆ. ಈ ಪುಸ್ತಕ ಬಿಡುಗಡೆಯ ಸಮಾರಂಭವನ್ನು ನಾವು ಸಾತ್ವಿಕವಾಗಿ ವಿರೋಧಿಸುತ್ತೇವೆ” ಎಂದು ತಿಳಿಸಿದರು.

“ಪುಸ್ತಕವನ್ನು ಪ್ರತಿ ಜಿಲ್ಲೆಗಳಲ್ಲಿ 3 ರಿಂದ 5 ಲಕ್ಷ ರೂಪಾಯಿ ಖರ್ಚು ಮಾಡಿ ಬಿಡುಗಡೆ ಮಾಡುತ್ತಿರುವುದರ ಹಿಂದಿನ ಹುನ್ನಾರ ಬಯಲಾಗಬೇಕಿದೆ. ಈ ಪುಸ್ತಕ ಬಿಡುಗಡೆಯಾದರೆ ನಾಡಿನಾದ್ಯಂತ ಸಾಮಾಜಿಕ ಸ್ವಾಸ್ಥ್ಯವನ್ನು ಕದಡುತ್ತದೆ” ಎಂದು ಹೇಳಿದರು.

Advertisements

“ದಶಕಗಳಿಂದಲೂ ಎಂ ಆರ್ ಶ್ರೀನಿವಾಸಮೂರ್ತಿ, ಆರ್ ಆರ್ ದಿವಾಕರ, ಡಂಕಿನ್ ಝಳಕಿ, ರಾಜಾರಾಮ್ ಹೆಗಡೆ ಮುಂತಾದವರ ಮೂಲಕ ವಚನ ಚಳುವಳಿಯ ಆಶಯಗಳನ್ನು ಹಾಗೂ ಲಿಂಗಾಯತ ಸಂಸ್ಕೃತಿಯನ್ನು ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ. ಶರಣರ ಆಶಯಗಳನ್ನು ಸರ್ವಾಂಗೀಣ ಕ್ರಾಂತಿಯ ಹಿನ್ನೆಲೆಯಲ್ಲಿ ನೋಡದೆ ಸನಾತನ ವೈದಿಕ ದರ್ಶನದ ಚೌಕಟ್ಟಿನಲ್ಲಿ ಸೇರಿಸಿ ಅದೊಂದು ಶುಷ್ಕ ಭಕ್ತಿ ಚಳವಳಿ ಎಂಬಂತೆ ಬಿಂಬಿಸುವ ಪ್ರಯತ್ನದ ವಿರುದ್ದ ಬಸವಾನುಯಾಯಿಗಳು ಸಾತ್ವಿಕ ಹಾಗು ತಾತ್ವಿಕ ಆಕ್ರೋಶವನ್ನು ದಾಖಲಿಸುತ್ತಿದ್ದೇವೆ” ಎಂದು ಶರಣ ಸಂಸ್ಕೃತಿ ರಕ್ಷಣಾ ವೇದಿಕೆಯ ಸದಸ್ಯರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ; ವಿವಿಧ ಸಂಘಟನೆಗಳ‌ ಪ್ರತಿಭಟನೆ

ಶರಣ ಸಂಸ್ಕೃತಿ ಹಾಗೂ ಲಿಂಗಾಯತ ಧರ್ಮ ರಕ್ಷಣಾ ವೇದಿಕೆಯ ಸಂಚಾಲಕ ಡಾ ಜೆ ಎಸ್ ಪಾಟೀಲ, ಜಿ ಬಿ ಸಾಲಕ್ಕಿ, ಮನಗೂಳಿ ವಿರಕ್ತಮಠದ ವಿರೇಶಾನಂದ ಸ್ವಾಮೀಜಿ, ಕಲಕೇರಿ ಶಿವಾಚಾರ್ಯ ಸ್ವಾಮೀಜಿ, ಜಂಬುನಾಥ ಕಂಚಾಣಿ, ಬಸವರಾಜ ಕೊಂಡಗುಳಿ, ಕಲ್ಲಪ್ಪ ಕಡೆಚೂರ, ಹನುಮಂತ ಚಿಂಚಲಿ, ಮಹಾದೇವಿ ಗೋಕಾಕ, ರಾಜೇಶ್ವರಿ ಅರನಾಳ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X