ಕಲಬುರಗಿ | ಮಳೆ ಅಬ್ಬರಕ್ಕೆ ಕಕ್ಕಾಬಿಕ್ಕಿಯಾದ ಜನ

Date:

Advertisements
  • ಧಾರಾಕಾರವಾಗಿ ನೀರು ಹರಿದ ಕಾರಣ ಕೆಲಕಾಲ ಆಟೋ, ಬಸ್‌ ಸ್ಥಗಿತ
  • ಕಲಬುರಗಿ ಜಿಲ್ಲೆಯ ಹಲವು ಕಡೆ ನಾಲ್ಕೈದು ದಿನ ಇನ್ನಷ್ಟು ಮಳೆ ಸಾಧ್ಯತೆ

ಕಲಬುರಗಿ ನಗರದಲ್ಲಿ ನಿನ್ನೆ (ಶುಕ್ರವಾರ) ಸಂಜೆ ಸುರಿದ ದಿಢೀರ್‌ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ತವಾಗಿದ್ದು, ವಾಹನ ಸವಾರರು ಹಾಗೂ ಬೀದಿಬದಿ ವ್ಯಾಪಾರಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಜಿಲ್ಲೆಯ ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ಬೆಳಗ್ಗೆಯಿಂದಲೂ ಬಿರು ಬಿಸಿಲಿನಿಂದ ಕೂಡಿತ್ತು. ಮಧ್ಯಾಹ್ನದ ವೇಳೆ 35ಡಿಗ್ರಿಗಿಂತಲೂ ಹೆಚ್ಚಿನ ಉಷ್ಣಾಂಶ ದಾಖಲಾಗಿತ್ತು. 3 ಗಂಟೆ ನಂತರ ಮೋಡ ಮುಸಿಕಿದ ವಾತವರಣದಿಂದಾಗಿ ಬಿಸಿಲಿನ ತಾಪಮಾನ ಕಡಿಮೆಯಾಗಿತ್ತು.

ಸಂಜೆ 4 ಗಂಟೆ ಆಗುತ್ತಿದ್ದಂತೆ ಗುಡುಗು-ಸಿಡಿಲು ಸಹಿತ ಮಳೆ ಶುರುವಾಗಿ ರಾತ್ರಿಯವರೆಗೂ ಧಾರಾಕಾರವಾಗಿ ಸುರಿದಿದೆ. ಕೆಲವೆಡೆ ಬೃಹತ್ ಗಾತ್ರದ ಆಲಿಕಲ್ಲುಗಳು ಸುರಿದಿದ್ದರಿಂದ ಕೆಲಕಾಲ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? : ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

ನಗರದ ಮುಖ್ಯ ರಸ್ತೆಯಲ್ಲಿ ನೀರು ಹರಿದ್ದಿದ್ದರಿಂದ ಬೀದಿಬದಿ ವ್ಯಾಪಾರಸ್ಥರು ಪರದಾಡುವಂತಾಗಿತ್ತು. ನಗರದ ಬಸ್ ನಿಲ್ದಾಣದ ಮುಖ್ಯ ರಸ್ತೆಯಲ್ಲಿ ನೀರು ತುಂಬಿದ್ದರಿಂದ ಕೆಲಕಾಲ ಬಸ್ ಮತ್ತು ಆಟೋ ಸಂಚಾರ ಸ್ಥಗಿತಗೊಂಡಿತ್ತು.

ಶನಿವಾರ ಕೂಡ ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆಯು ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X