ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ. 29ಕ್ಕೆ ಮುಂದೂಡಿಕೆ

Date:

Advertisements

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಆಗಸ್ಟ್ 29ರವರೆಗೆ ಮುಂದೂಡಿಕೆ ಮಾಡಿದೆ.

ಜೊತೆಗೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ: ಸಿದ್ದರಾಮಯ್ಯ

Advertisements

ಸಿಎಂ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಕೈಗೆತ್ತಿಕೊಳ್ಳುತ್ತಿದ್ದಂತೆ ರಾಜ್ಯಪಾಲರ ಪರ ವಾದ ಹಾಜರಾದ ವಕೀಲ ತುಷಾರ್ ಮೆಹ್ತಾ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು.

“ರಾಜ್ಯಪಾಲರ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲಾಗಿತ್ತು. ಶೋಕಾಸ್ ನೋಟಿಸ್ ಹಿಂಪಡೆಯುವ ಸಲಹೆಯನ್ನು ರಾಜ್ಯ ಸಂಪುಟವು ಆಗಸ್ಟ್ 1ರಂದು ನೀಡಿದೆ. ಆದರೆ ಸಲಹೆಯನ್ನು ಧಿಕ್ಕರಿಸಿ ರಾಜ್ಯಪಾಲರು ಈ ನಿರ್ಧಾರ ಮಾಡಿದ್ದು, ಅಸಾಂವಿಧಾನಿಕವಾಗಿದೆ. ರಾಜ್ಯಪಾಲರು ಕಾನೂನಿನ ಎಲ್ಲಾ ಅಂಶಗಳನ್ನು ಗಾಳಿಗೆ ತೂರಿ ಆದೇಶ ಮಾಡಿರುವುದರಿಂದ ಅದನ್ನು ವಜಾ ಮಾಡಬೇಕು” ಎಂದು ಸಿಎಂ ಪರ ವಕೀಲರು ಮನು ಸಿಂಘ್ವಿ ವಾದಿಸಿದ್ದಾರೆ.

“ಅತ್ಯುನ್ನತ ಸ್ಥಾನದಲ್ಲಿರುವ ಹಲವರ ವಿರುದ್ಧ ಅಭಿಯೋಜನಾ ಮಂಜೂರಾತಿ ಕೋರಿರುವ ಅರ್ಜಿಗಳು ವರ್ಷಗಳಿಂದ ಬಾಕಿಯಿದೆ. ಹಾಗಿರುವಾಗ ರಾಜ್ಯಪಾಲರು ತಮ್ಮ ವಿಚಾರದಲ್ಲಿ ಶರವೇಗದಲ್ಲಿ ನಿರ್ಧಾರ ಕೈಗೊಂಡಿರುವುದು ಪಕ್ಷಪಾತದಿಂದ ಕೂಡಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಸಿಎಂ ರಾಜೀನಾಮೆ ನೀಡುವಂತೆ ಮಾಡಲು ಈ ದೂರು ನೀಡಲಾಗಿದೆ” ಎಂದು ವಕೀಲರು ಆರೋಪಿಸಿದರು.

ಇನ್ನು ಈ ರಿಟ್ ಅರ್ಜಿ ಪ್ರತಿ ಇಂದು ಬೆಳಿಗ್ಗೆಯಷ್ಟೆ ಲಭ್ಯವಾದ ಕಾರಣ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು. ಆದ್ದರಿಂದಾಗಿ ವಿಚಾರಣೆಯನ್ನು ಮುಂದೂಡಬೇಕು ಎಂದು ರಾಜ್ಯಪಾಲರ ಪರ ವಕೀಲರು ಪ್ರಕರಣದ ಆರಂಭದಲ್ಲಿಯೇ ಮನವಿ ಮಾಡಿದ್ದಾರೆ. ಹಾಗೆಯೇ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬೇಡಿ ಎಂದೂ ಸಾಲಿಟರಲ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X