ಕಲಬುರಗಿ | ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ; ರಾಜ್ಯಪಾಲರ ಅಧಿಕಾರ ದುರುಪಯೋಗಕ್ಕೆ ಸಿಪಿಐಎಂ ಖಂಡನೆ

Date:

Advertisements

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದು, ರಾಜ್ಯಪಾಲರ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ಖಂಡನೀಯ ಎಂದು ಸಿಪಿಐಎಂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ ನೀಲಾ ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, “ಆರ್‌ಟಿಐ ಕಾರ್ಯಕರ್ತರೊಬ್ಬರ ಕೋರಿಕೆಯ ಮೇರೆಗೆ ಘನತೆವೆತ್ತ ರಾಜ್ಯಪಾಲರು ಈ ಹಿಂದೆ ದಿಢೀರನೆ ಅಂದೇ ಮುಖ್ಯಮಂತ್ರಿಗಳಿಗೆ ಶೋಕಾಸ್ ನೋಟೀಸ್ ನೀಡಿದ್ದರು. ಇದೀಗ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಒಂದು ಸರ್ಕಾರದ ಮುಖ್ಯಮಂತ್ರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ದುಷ್ಕೃತ್ಯವಾಗಿದೆಯೆಂದು ಸಿಪಿಐಎಂ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ” ಎಂದರು.

“ರಾಜ್ಯಪಾಲರೊಬ್ಬರು ಸಾಮಾನ್ಯ ಪ್ರಜೆಯೊಬ್ಬರ ಮನವಿ ಮೇರೆಗೆ ಮುಖ್ಯಮಂತ್ರಿಗಳಿಗೆ ಶೋಕಾಸ್ ನೀಡುವ ಮತ್ತು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡುವ ಈ ಪ್ರಜಾಪ್ರಭುತ್ವ ವಿರೋದಿ ಬೆಳವಣಿಗೆ ಎಲ್ಲ ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ. ಮುಖ್ಯಮಂತ್ರಿಯವರು ಈಗಾಗಲೇ ಮೂಡಾ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಸಭೆ ಹಾಗೂ ನೇರ ರಾಜ್ಯಪಾಲರಿಗೂ ವಿವರವಾದ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ಕ್ರಮವಹಿಸಿದ್ದಾರೆ. ಪರಿಸ್ಥಿತಿ ಹೀಗಿದ್ದಾಗಲೂ ಈ ರೀತಿಯ ಕ್ರಮ ಅಧಿಕಾರ ದುರುಪಯೋಗವಾಗಿರುವುದನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತಿದೆ” ಎಂದು ಹೇಳಿದರು.

Advertisements

“ರಾಜ್ಯ ಸರ್ಕಾರವನ್ನು ಅಧಿಕೃತವಾಗಿ ಪ್ರತಿನಿಧಿಸುವ ಘನತೆವೆತ್ತವರು ವಿರೋಧ ಪಕ್ಷದ ನಾಯಕರಂತೆ ಕ್ರಮವಹಿಸುತ್ತಿರುವುದು ಮತ್ತು ಬಿಜೆಪಿಯ ಒಕ್ಕೂಟ ಸರ್ಕಾರದ ದಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದರು.‌

“ಲೋಕಾಯುಕ್ತರು ತನಿಖೆ ಆಧಾರದಲ್ಲಿ ಈಗಿನ ಒಕ್ಕೂಟ ಸರ್ಕಾರದ ಸಂಪುಟ ದರ್ಜೆಯ ಸಚಿವ‌ ಎಚ್‌ ಡಿ ಕುಮಾರಸ್ವಾಮಿಯವರಿಗೆ ಸಂಬಂಧಿಸಿ ಮನವಿ ಮಾಡಿ ಸುಮಾರು ಹತ್ತು ತಿಂಗಳಾಗುತ್ತಿದ್ದರೂ ಏನೊಂದು ಕ್ರಮವಹಿಸದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ. ಇದು ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡುವ ಬಿಜೆಪಿ ಹಾಗೂ ಒಕ್ಕೂಟ ಸರ್ಕಾರದ ಮುಂದುವರೆದ ದುರ್ನಡೆಯ ಭಾಗವಾಗಿ‌ರುವುದು ಬಹಳ ಸ್ಪಷ್ಟವಾಗಿ ಕಂಡುಬರುತ್ತಿದೆ” ಎಂದರು.

“ಬಿಜೆಪಿ ಮತ್ತು ಅದರ ಒಕ್ಕೂಟ ಸರ್ಕಾರ ವಿರೋಧ ಪಕ್ಷಗಳ ಸರ್ಕಾರಗಳನ್ನು ದುರ್ಬಲಗೊಳಿಸಲು ಇಲ್ಲವೇ ಅಗತ್ಯ ಬಹುಮತ ಇಲ್ಲದಿದ್ದರೂ ಬಲವಂತವಾಗಿ ಬಿಜೆಪಿ ಸರ್ಕಾರ ಸ್ಥಾಪನೆಗೆ ಕ್ರಮವಹಿಸಲು ರಾಜ್ಯಪಾಲರ ಕಚೇರಿ ಹಾಗೂ ಅವರ ವಿವೇಚನಾಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಅನುಭವವೇದ್ಯವಾಗಿದೆ” ಎಂದು ವಿವರಿಸಿದರು.

“ರಾಜ್ಯದ ಜನತೆ ಬರಗಾಲ, ಅತೀವೃಷ್ಟಿ, ಬೆಲೆ ಏರಿಕೆಯ ಹೊರೆಗಳಿಂದ ಬಳಲುತ್ತಿರುವಾಗ ಬಿಜೆಪಿ ಒಂದು ರಚನಾತ್ಮಕ ವಿರೋಧ ಪಕ್ಷವಾಗಿ ವಿಧಾನಸಭೆಯಲ್ಲಿ ತನ್ನ ಮಿತ್ರಪಕ್ಷದ ಬಲದೊಂದಿಗೆ ರಾಜ್ಯ ಸರ್ಕಾರದ ನಡೆಯನ್ನು ಜನಪರವಾಗಿ ಬದಲಾಯಿಸುವ ಮತ್ತು ತನ್ನ ಒಕ್ಕೂಟ ಸರ್ಕಾರದ ಬಲವನ್ನು ಉಪಯೋಗಿಸಿ ರಾಜ್ಯದ ನೈಜ ಅಭಿವೃ‌ದ್ಧಿಗೆ, ಸಂಕಷ್ಟದಲ್ಲಿರುವ ಜನತೆಗೆ ನೆರವಾಗಲು ಅಗತ್ಯ ಕ್ರಮವಹಿಸುವುದರ ಬದಲು ಒಂದೆಡೆ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಜಾಪ್ರಭುತ್ವ ವಿರೋಧಿಯಾಗಿ ವರ್ತಿಸಿದರೆ, ಮತ್ತೊಂದೆಡೆ ಸಂಕಷ್ಟದಲ್ಲಿರುವ ಜನತೆ ಸಂಕಷ್ಟದ ವಿರುದ್ದ ಗಮನಹರಿಸದಂತೆ ಅವರ ಗಮನವನ್ನು ಬೇರೆಡೆ ಸೆಳೆಯುವ ಕುತಂತ್ರವನ್ನು ಹೆಣೆದಿದೆ” ಎಂದು ಟೀಕಿಸಿದರು.

“ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ತನಗೆ ಮತದಾರರು ಉಂಟುಮಾಡಿದ ಹಿನ್ನಡೆಯಿಂದಾಗಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಮಾತ್ರವಲ್ಲಾ, ಲೂಟಿಕೋರ ಕಾರ್ಪೊರೇಟ್ ಸಂಸ್ಥೆಗಳೂ ವ್ಯಾಘ್ರಗೊಂಡಿವೆ. ಹೀಗಾಗಿ, ವಿರೋದ ಪಕ್ಷದ ರಾಜ್ಯ ಸರ್ಕಾರ‌ವನ್ನು ಅಸ್ಥಿರಗೊಳಿಸುವ ಮತ್ತು ಉರುಳಿಸುವ ಕೆಲಸಕ್ಕೆ ಕೈ ಹಾಕಿವೆ. ಇದರ ಭಾಗವಾಗಿಯೇ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಾದ ಅನುಷ್ಠಾನ ನಿರ್ಧೇಶನಾಲಯ(ಇ.ಡಿ) ರಾಜ್ಯ ಸರ್ಕಾರದ ಉನ್ನತ ಸಚಿವರು ಹಗರಣದಲ್ಲಿದ್ದಾರೆಂದು ಹೇಳುವಂತೆ ತನ್ನನ್ನು ಹಿಂಸಿಸಲಾಗಿದೆಯೆಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಪೋಲೀಸರಿಗೆ ದೂರು ಸಲ್ಲಿಸಿರುವುದನ್ನು ಮತ್ತು ಮೂಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ ನಂತರವೂ ಬಿಜೆಪಿ ಪಾದಯಾತ್ರೆಗೆ ಕ್ರಮವಹಿಸಿರುವುದು ಅಲ್ಲದೆ ಇದೀಗ ರಾಜ್ಯಪಾಲರ ನಡೆ ಈ ಎಲ್ಲವೂ ಅದನ್ನು ಸಮರ್ಥಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ; ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನೆ

“ಕಳೆದ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆಗಾಗಿ ಜನತೆಯಿಂದ ಮುಖಕ್ಕೆ ನಾಮ ಇಕ್ಕಿಸಿಕೊಂಡರೂ ಕೂಡಾ ಬಿಜೆಪಿ ಪಾಠ ಕಲಿಯದಿರುವದನ್ನು ಇದು ಹೇಳುತ್ತದೆ. ಹಾಗಾಗಿ ಬಿಜೆಪಿ ಹಾಗೂ ಒಕ್ಕೂಟ ಸರ್ಕಾರಗಳು ರಾಜ್ಯ ಸರ್ಕಾರದ ಮೇಲೆ ನಡೆಸುತ್ತಿರುವ ಪ್ರಜಾಪ್ರಭುತ್ವ ಹಾಗೂ ಜನವಿರೋಧಿ ದುರ್ದಾಳಿಗಳನ್ನು ಕೂಡಲೆ ನಿಲ್ಲಿಸಬೇಕು” ಎಂದು ಸಿಪಿಐಎಂ ಪರವಾಗಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X